ಪುಕ್ಕಟೆ ಪ್ರಚಾರಕ್ಕೆ ಮುಖ್ಯಾಧಿಕಾರಿ ಮೇಲೆ ಸುಳ್ಳು ಆರೋಪ

KannadaprabhaNewsNetwork |  
Published : Jun 30, 2025, 12:34 AM IST
29ಕೆಆರ್ ಎಂಎನ್ 8.ಜೆಪಿಜಿಹಾರೋಹಳ್ಳಿಯಲ್ಲಿ ಮುತ್ತುರಾಜು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. | Kannada Prabha

ಸಾರಾಂಶ

ಹಾರೋಹಳ್ಳಿ: ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶ್ವೇತಾಬಾಯಿ ವಿರುದ್ಧ ಶೇಷಾದ್ರಿರಾಮು ಸುಳ್ಳು ಆರೋಪ ಮಾಡಿ ಪುಕ್ಕಟೆ ಪ್ರಚಾರ ಪಡೆಯುತ್ತಿದ್ದಾರೆ ಎಂದು ಮೇಡಮಾರನಹಳ್ಳಿ ಗ್ರಾಪಂ ಮಾಜಿ ಸದಸ್ಯ ಮುತ್ತುರಾಜು ಟೀಕಿಸಿದ್ದಾರೆ.

ಹಾರೋಹಳ್ಳಿ: ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶ್ವೇತಾಬಾಯಿ ವಿರುದ್ಧ ಶೇಷಾದ್ರಿರಾಮು ಸುಳ್ಳು ಆರೋಪ ಮಾಡಿ ಪುಕ್ಕಟೆ ಪ್ರಚಾರ ಪಡೆಯುತ್ತಿದ್ದಾರೆ ಎಂದು ಮೇಡಮಾರನಹಳ್ಳಿ ಗ್ರಾಪಂ ಮಾಜಿ ಸದಸ್ಯ ಮುತ್ತುರಾಜು ಟೀಕಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶೇಷಾದ್ರಿರಾಮು ಪ್ರಾಮಾಣಿಕ ವ್ಯಕ್ತಿಯಲ್ಲ, ಇವರ ವಿರುದ್ಧ ಹಲವಾರು ಪ್ರಕರಣಗಳಿವೆ. ಈತನ ಪತ್ನಿ ಈ ಹಿಂದೆ ಪಟ್ಟಣ ಪಂಚಾಯಿತಿಯಲ್ಲಿ ನೌಕರಿಯಲ್ಲಿದ್ದಾಗ ದಾಖಲೆಗಳನ್ನು ತಿದ್ದಿದ್ದ ಆರೋಪದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದರು ಎಂದು ಹೇಳಿದರು.

ಲೋಕಾಯುಕ್ತ ದಾಳಿ ಹಿನ್ನೆಲೆಯಲ್ಲಿ ಪಟ್ಟಣ ಪಂಚಾಯಿತಿ ಅಧಿಕಾರಿ ತಮ್ಮ ಮೇಲಧಿಕಾರಿಗಳಿಗೆ ಈ ಬಗ್ಗೆ ವರದಿ ಸಲ್ಲಿಸಿದ್ದರು.

ವರದಿಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗಳು ಈತನ ಪತ್ನಿಯನ್ನು ಸೇವೆಯಿಂದ ವಜಾ ಮಾಡಿದ್ದರು. ತನ್ನ ಪತ್ನಿಯನ್ನು ಸೇವೆಯಿಂದ ವಜಾ ಮಾಡಿದ್ದನ್ನೇ ಕಾರಣವಾಗಿಟ್ಟುಕೊಂಡು ಪಟ್ಟಣ ಪಂಚಾಯಿತಿ ಮುಕ್ಯಾಧಿಕಾರಿ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಒಂದು ವೇಳೆ ಅಧಿಕಾರಿ ತಪ್ಪು ಮಾಡಿದ್ದರೆ ಮೇಲಧಿಕಾರಿಗಳಿಗೆ ದೂರು ಸಲ್ಲಿಸಬೇಕು, ಸುಖಾಸುಮ್ಮನೆ ವೈಯಕ್ತಿಕ ಸ್ವಾರ್ಥಕೋಸ್ಕರ ಕರ್ತವ್ಯ ನಿರತ ಅಧಿಕಾರಿ ವಿರುದ್ಧ ಆರೋಪ ಮಾಡುವುದು ಸರಿಯಲ್ಲ. ಈತನ ಯಾವುದೇ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸಬಾರದು. ಶೇಷಾದ್ರಿ ಅವರಂತಹ ವ್ಯಕ್ತಿಗಳ ಹಾವಳಿಯಿಂದ ಸರ್ಕಾರಿ ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಿಸುವುದು ಕಷ್ಟಕರವಾಗಿದೆ. ಇಂತಹ ಹೇಳಿಕೆಗಳಿಂದ ಕರ್ತವ್ಯಶೀಲ ಅಧಿಕಾರಿಗಳ ಮನೋಸ್ಥೈರ್ಯ ಕುಗ್ಗುತ್ತದೆ, ಸಾರ್ವಜನಿಕರು ಮತ್ತು ಮೇಲಾಧಿಕಾರಿಗಳು, ಜನಪ್ರತಿನಿಧಿಗಳು ಈತನ ಹೇಳಿಕೆಗೆ ಮಾನ್ಯತೆ ನೀಡಬಾರದು ಎಂದು ಮುತ್ತುರಾಜು ಮನವಿ ಮಾಡಿದರು.

ಮುಖಂಡ ಭಾರ್ಗವ ಮಾತನಾಡಿ, ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಹಾರೋಹಳ್ಳಿ ಪಟ್ಟಣ ಪಂಚಾಯಿತಿಯಿಂದ ಅತಿ ಹೆಚ್ಚು ಕಂದಾಯ ವಸೂಲಿ ಮಾಡಿ ಸರ್ಕಾರಕ್ಕೆ ಪಾವತಿಸಲಾಗಿದೆ. ಅಕ್ರಮ ಎಸಗಿದ್ದರೆ ಸರ್ಕಾರಕ್ಕೆ ಅತಿ ಹೆಚ್ಚು ತೆರಿಗೆ ಕಟ್ಟಲು ಸಾಧ್ಯವಾಗುತ್ತಿರಲಿಲ್ಲ. ಶೇಷಾದ್ರಿರವರ ಹೇಳಿಕೆ ನಿರಾಧಾರ ಎಂದರು.

ಸುದ್ದಿಗೋಷ್ಠಿಯಲ್ಲಿ ಹೊಸಕೋಟೆ ಶಿವಣ್ಣ, ಅರುಣ್‌ಗೌಡ, ನಾಗೇಶ್, ಮಧು, ಸಂತೋಷ ಇದ್ದರು.

29ಕೆಆರ್ ಎಂಎನ್ 8.ಜೆಪಿಜಿ

ಹಾರೋಹಳ್ಳಿಯಲ್ಲಿ ಮುತ್ತುರಾಜು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನರೇಗಾ ಮರುಜಾರಿವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ
ಡ್ರಗ್ಸ್‌ ವಿರುದ್ಧ ಸಿಎಂ ತವರಿಂದಲೇ ಹೋರಾಟ : ವಿಜಯೇಂದ್ರ