ಮನೆ ಹಕ್ಕುಪತ್ರ ನೀಡಲು ಕೆಎನ್‌ಆರ್‌ಗೆ ಕುಟುಂಬಗಳ ಮನವಿ

KannadaprabhaNewsNetwork |  
Published : Sep 30, 2025, 12:00 AM IST
್ಿಿ್‌ಿ | Kannada Prabha

ಸಾರಾಂಶ

ಮನೆ ಹಕ್ಕುಪತ್ರ ನೀಡಲು ಕೆಎನ್‌ಆರ್‌ಗೆ ಕುಟುಂಬಗಳ ಮನವಿ

ಕನ್ನಡಪ್ರಭ ವಾರ್ತೆ ತುಮಕೂರುನಗರದ ದಿಬ್ಬೂರಿನ ದೇವರಾಜ ಅರಸು ಬಡಾವಣೆಯಲ್ಲಿ ರಾಜೀವ್ ಗಾಂಧಿ ಆವಾಜ್ ವಸತಿ ಯೋಜನೆಯಲ್ಲಿ ನಿರ್ಮಿಸಿರುವ ವಸತಿ ಸಂಕೀರ್ಣದಲ್ಲಿ 8 ವರ್ಷಗಳಿಂದ ವಾಸಿಸುತ್ತಿರುವ 470 ಕುಟುಂಬಗಳಿಗೆ ಇದುವರೆಗೂ ಹಕ್ಕುಪತ್ರ ವಿತರಿಸಿಲ್ಲ. ಸರ್ಕಾರದ ಜೊತೆ ಮಾತನಾಡಿ ತಮಗೆ ನ್ಯಾಯ ಒದಗಿಸಬೇಕು ಎಂದು ಅಲ್ಲಿನ ನಿವಾಸಿಗಳು ಮಾಜಿ ಸಚಿವ, ಶಾಸಕ ಕೆ.ಎನ್. ರಾಜಣ್ಣನವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.ಈ ವಸತಿ ಸಂಕೀರ್ಣದಲ್ಲಿರುವ ನಾವುಗಳು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಮಾಡಿದ್ದರೂ ಅವರು ಸ್ಪಂದಿಸಲಿಲ್ಲ, ಸರ್ಕಾರದೊಂದಿಗೆ ಚರ್ಚಿಸಿ ಈ ನಿವಾಸಿಗಳಿಗೆ ಹಕ್ಕುಪತ್ರ ಕೊಡಿಸಬೇಕು ಎಂದು ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಅಕಾಡೆಮಿಯ ಅಧ್ಯಕ್ಷ ನಿಸಾರ್ ಅಹ್ಮದ್ ಕೆ.ಎನ್.ರಾಜಣ್ಣನವರಿಗೆ ವಿನಂತಿಸಿದರು.ಇಲ್ಲಿನ ಎಲ್ಲಾ 470 ಕುಟುಂಬದವರು ಅಲ್ವಸಂಖ್ಯಾತರು, ದಲಿತರು, ಹಂದಿಜೋಗರು ಮುಂತಾದ ಸಮುದಾಯಗಳಿಗೆ ಸೇರಿದ್ದಾರೆ. ಇವರೆಲ್ಲಾ ದಿನಗೂಲಿ, ಫುಟ್‌ಪಾತ್ ವ್ಯಾಪಾರ, ಆಟೋ ಓಡಿಸಿಕೊಂಡು ಅಂದಿನ ದುಡಿಮೆಯಿಂದ ಅಂದಿನ ಜೀವನ ನಡೆಸುವ ಪರಿಸ್ಥಿತಿಯಲ್ಲಿದ್ದಾರೆ. ಆದರೆ ಹಕ್ಕುಪತ್ರ ನೀಡಲು ಪ್ರತಿ ಕುಟುಂಬದಿಂದ ಸುಮಾರು ಒಂದು ಲಕ್ಷ ರು. ಪಾವತಿ ಮಾಡಬೇಕು ಎಂದು ಅಧಿಕಾರಿಗಳು ಹೇಳುತ್ತಾರೆ.

ಈ ಕುಟುಂಬಗಳಿಗೆ ಹಣ ಭರಿಸುವ ಶಕ್ತಿ ಇಲ್ಲ. ಕೆ.ಎನ್.ರಾಜಣ್ಣನವರು ಇದೂವರೆಗೆ ಬಡವರ ಪರವಾಗಿ ಕೆಲಸ ಮಾಡಿಕೊಂಡು ನೆರವಾಗುತ್ತಾ ಬಂದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ರಾಜ್ಯ ಸರ್ಕಾರ ಬಡವರ ಸಮಸ್ಯೆಗಳಿಗೆ ಸ್ಪಂದಿಸುತ್ತದೆ ಎಂಬ ವಿಶ್ವಾಸ ನಮಗಿದೆ. ಹಕ್ಕುಪತ್ರದ ಶುಲ್ಕವನ್ನು ಸರ್ಕಾರ ಮನ್ನಾ ಮಾಡಿ ಬಡವರಿಗೆ ಉಚಿತವಾಗಿ ಹಕ್ಕುಪತ್ರ ವಿತರಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನರೇಗಾ ಮರುಜಾರಿವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ
ಡ್ರಗ್ಸ್‌ ವಿರುದ್ಧ ಸಿಎಂ ತವರಿಂದಲೇ ಹೋರಾಟ : ವಿಜಯೇಂದ್ರ