ಮಾಸನಹಳ್ಳಿಯಲ್ಲಿ ಗ್ರಾಮದ ಹೊರವಲಯದ ಮರವೊಂದಕ್ಕೆ ಈಶ್ವರ ಎಂಬಾತ ನೇಣುಹಾಕಿಕೊಂಡು ಮೃತಪಟ್ಟಿದ್ದಾನೆ.
ಚಿಂತಾಮಣಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಕರ್ಲಪರ್ತಿ ಬಳಿಯ ಮಾಸನಹಳ್ಳಿಯಲ್ಲಿ ನಡೆದಿದ್ದು ಮೃತ ಯುವಕನನ್ನು ಈಶ್ವರ (38) ಎಂದು ಗುರ್ತಿಸಲಾಗಿದೆ.
ಗುರುವಾರ ಮಧ್ಯಾಹ್ನ 11 ರ ಸುಮಾರಿಗೆ ಗ್ರಾಮದ ಹೊರವಲಯದ ಮರವೊಂದಕ್ಕೆ ಈಶ್ವರ ನೇಣುಹಾಕಿಕೊಂಡು ಮೃತಪಟ್ಟಿರುವುದನ್ನು ಕಂಡ ಗ್ರಾಮಸ್ಥರು ತಾಲೂಕಿನ ಕೆಂಚರ್ಲಹಳ್ಳಿ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಬ್ ಇನ್ಸ್ಪೆಕ್ಟರ್ ಶಿವಕುಮಾರ್ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.