ಕನ್ನಡಪ್ರಭ ವಾರ್ತೆ ಕಲಬುರಗಿ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಚುನಾವಣೆಗಳ ಹೆಸರಿನಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡುತ್ತಾ ಅಧಿಕಾರ ವಿಕೇಂದ್ರೀಕರಣ ತತ್ವ ಮೂಲೆಗುಂಪು ಮಾಡುವ ಕೆಲಸ ಹುನ್ನಾರ ನಡೆಯುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಕುಟುಂಬ ರಾಜಕಾರಣ ಎದ್ದು ಕಾಣುತ್ತಿದೆ. ದೇವೇಗೌಡರ ಇಡೀ ಕುಟುಂಬ ರಾಜಕಾರಣದಲ್ಲಿದ್ದರೆ, ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಯಡಿಯೂರಪ್ಪ, ವಿ.ಸೋಮಣ್ಣ ಸೇರಿದಂತೆ ಪ್ರತಿಯೊಬ್ಬರೂ ಕುಟುಂಬ ರಾಜಕಾರಣ ನಡೆಸುತ್ತಿದ್ದಾರೆ. ಹೀಗಾದರೆ, ಪ್ರಜಾಪ್ರಭುತ್ವದ ತತ್ವದಡಿ ಬೇರೆಯವರು ರಾಜಕೀಯಕ್ಕೆ ಬರುವುದು ಹೇಗೆ ಎಂದು ಅವರು ಅಚ್ಚರಿ ವ್ಯಕ್ತಪಡಿಸಿದರು.ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಜಾರಿಗೆ ತಂದ ಉಚಿತ ಶಿಕ್ಷಣ, ಉಚಿತ ಆರೋಗ್ಯ, ಉಚಿತ ವಿದ್ಯುತ್ ಯೋಜನೆಗಳನ್ನು ಎಲ್ಲರೂ ಟೀಕಿಸಿದ್ದರು. ಇದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2016ರಲ್ಲಿ ಮುಖ್ಯಮಂತ್ರಿ ಆದಾಗ ಹೆಣ್ಣು ಮಕ್ಕಳಿಗೆ ಉಚಿತವಾಗಿ ಬಸ್ ಪ್ರಯಾಣದ ಯೋಜನೆ ಜಾರಿಗೆ ತರಬೇಕಿತ್ತು. ಆಗ ರಾಜ್ಯದಲ್ಲಿ ಬಡವರು ಇರಲಿಲ್ಲವೇ? ಎಂದು ಪ್ರಶ್ನಿಸಿದ ಅವರು, ತಮ್ಮ ಅಧಿಕಾರ ಉಳಿಸಿಕೊಳ್ಳಲು ಈಗ ರಾಜ್ಯದಲ್ಲಿ ಗ್ಯಾರಂಟಿ ಹೆಸರಿನಲ್ಲಿ ಉಚಿತ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಟೀಕಿಸಿದರು.
ಇಂತಹ ದ್ವಂದ್ವ ನೀತಿಗಳನ್ನು ಅನುಸರಿಸುತ್ತಾ ಸದಾ ತಾವು ಅಧಿಕಾರದಲ್ಲಿರಬೇಕು ಎನ್ನುವ ಮನೋಪ್ರವೃತ್ತಿ ಬಹುತೇಕ ಎಲ್ಲ ರಾಷ್ಟ್ರೀಯ ಪಕ್ಷಗಳ ಮುಖಂಡರಲ್ಲಿದೆ. ಈ ಹಿನ್ನೆಲೆಯಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆಮ್ ಆದ್ಮಿ ಪಕ್ಷದಿಂದ ಜಾಗೃತಿ ಕಾರ್ಯಕ್ರಮಗಳನ್ನು ಗ್ರಾಮೀಣ ಹಂತದಿಂದ ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ರಾಮನ ಹೆಸರಿನಲ್ಲಿ ‘ಧರ್ಮ’ ರಾಜಕಾರಣ: