ಅಂಜನಾದ್ರಿ ದೇವಸ್ಥಾನ ಸಮಿತಿಯಿಂದ ದಂಪತಿಗಳನ್ನು ಸನ್ಮಾನಿಸಿ ಗೌರವಿಸಿದರು
ಗಂಗಾವತಿ:ಸಮೀಪದ ಇತಿಹಾಸ ಪ್ರಸಿದ್ಧ ಅಂಜನಾದ್ರಿ ಬೆಟ್ಟಕ್ಕೆ ಚಿತ್ರನಟ ರಿಷಬ್ ಶೆಟ್ಟಿ ದಂಪತಿ ಭೇಟಿ ನೀಡಿ ಆಂಜನೇಯಸ್ವಾಮಿ ದರ್ಶನ ಪಡೆದರು.
ಮಂತ್ರಾಲಯಕ್ಕೆ ತೆರಳಿದ್ದ ರಿಷಬ್ ಶೆಟ್ಟಿ ಹಾಗೂ ಪತ್ನಿ ಅಂಜನಾದ್ರಿ ಬೆಟ್ಟದ 575 ಮೆಟ್ಟಿಲುಗಳು ಏರಿ ಆಂಜನೇಯಸ್ವಾಮಿ ದರ್ಶನ ಪಡೆದರು. ಈ ಸಂದರ್ಭದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅವರು, ಬೆಟ್ಟದ ಮೇಲೆ ನಿಂತು ತುಂಗಭದ್ರಾ ನದಿ ಮತ್ತು ಹಂಪಿ, ಆನೆಗೊಂದಿ ಪ್ರದೇಶದ ಪರಿಸರ ವೀಕ್ಷಿಸಿದರು. ಕಾಂತಾರ-2 ಚಿತ್ರ ಯಶಸ್ವಿಯಾಗಿದ್ದ ಹಿನ್ನೆಲೆಯಲ್ಲಿ ಮಂತ್ರಾಲಯಕ್ಕೆ ತೆರಳಿ ಶ್ರೀರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು. ನಂತರ ಅಂಜನಾದ್ರಿಗೆ ಆಗಮಿಸಿದ್ದರು. ಈ ವೇಳೆ ಅಂಜನಾದ್ರಿ ದೇವಸ್ಥಾನ ಸಮಿತಿಯಿಂದ ದಂಪತಿಗಳನ್ನು ಸನ್ಮಾನಿಸಿ ಗೌರವಿಸಿದರು. ಆನೆಗೊಂದಿ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಿಂದ ಸುಮಂತ ಕುಲಕರ್ಣಿ ಮತ್ತು ಅರ್ಚಕ ವಿದ್ಯಾದಾಸ ಬಾಬಾ ಸನ್ಮಾನಿಸಿ ಗೌರವಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.