ಪುತ್ತೂರು ನಗರಸಭಾ ಪೌರಾಯುಕ್ತ ಮಧು ಎಸ್. ಮನೋಹರ್‌ಗೆ ಬೀಳ್ಕೊಡುಗೆ

KannadaprabhaNewsNetwork |  
Published : Aug 01, 2025, 02:15 AM IST
ಫೋಟೋ: ೩೧ಪಿಟಿಆರ್-ಬೀಳ್ಕೊಡುಗೆ ವರ್ಗಾವಣೆಗೊಂಡ ಪೌರಾಯುಕ್ತ ಮಧು ಎಸ್ ಮನೋಹರ್ ಅವರಿಗೆ ಬೀಳ್ಕೊಡುಗೆ ಮಾಡಲಾಯಿತು. | Kannada Prabha

ಸಾರಾಂಶ

ಪುತ್ತೂರು ನಗರಸಭೆಯಲ್ಲಿ ೪ ವರ್ಷಗಳ ಕಾಲ ಪೌರಾಯುಕ್ತರಾಗಿ ಕಾರ್ಯನಿರ್ವಹಿಸಿ ವರ್ಗಾವಣೆಗೊಂಡ ಮಧು ಎಸ್. ಮನೋಹರ್ ಅವರಿಗೆ ಗುರುವಾರ ಪುರಭವನದಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು.

ಪುತ್ತೂರು: ಸರ್ಕಾರಿ ಅಧಿಕಾರಿಗಳಿಂದ ಜನಸ್ನೇಹೀ ವೃತ್ತಿಪರತೆಯ ಧರ್ಮ ಪಾಲನೆಯಾದಾಗ ಜನತೆಯ ಗೌರವ ಲಭಿಸುತ್ತದೆ ಎಂದು ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಹೇಳಿದ್ದಾರೆ.ಪುತ್ತೂರು ನಗರಸಭೆಯಲ್ಲಿ ೪ ವರ್ಷಗಳ ಕಾಲ ಪೌರಾಯುಕ್ತರಾಗಿ ಕಾರ್ಯನಿರ್ವಹಿಸಿ ವರ್ಗಾವಣೆಗೊಂಡ ಮಧು ಎಸ್. ಮನೋಹರ್ ಅವರಿಗೆ ಗುರುವಾರ ಪುರಭವನದಲ್ಲಿ ಆಯೋಜಿಸಲಾದ ಬೀಳ್ಕೊಡುಗೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಅಧಿಕಾರಿ, ಜನಪ್ರತಿನಿಧಿಗಳಲ್ಲಿ ವಕ್ರದೃಷ್ಟಿ, ಸಂಶಯ ಸಹಜ. ಆದರೆ ಕಾನೂನಿನ ಜತೆ ಮಾನವ ಧರ್ಮ ಪಾಲನೆ ಮಾಡಿಕೊಂಡು ನಯ, ವಿನಯದೊಂದಿಗೆ ಪ್ರಕೆಗಳ ಆಶೋತ್ತರ ಈಡೇರಿಸುವವರನ್ನು ಜನರೂ ಪ್ರೀತಿಸುತ್ತಾರೆ ಎಂದು ಹೇಳಿದ ಮಠಂದೂರು, ಸ್ವಚ್ಛತೆಯಲ್ಲಿ ಪುತ್ತೂರನ್ನು ೩೬ ನೇ ಸ್ಥಾನದಿಂದ ೩ ನೇ ಸ್ಥಾನಕ್ಕೇರಿಸಿದ ಸ್ವಚ್ಛ, ಸುಂದರ ಪುತ್ತೂರು ಆಗಿ ನಗರಸಭೆಗೆ ಕಾಯಕಲ್ಪ ಕೊಟ್ಟ ಸಜ್ಜನ ಮಧು ಮನೋಹರ್ ಅವರು ಪೌರಕಾರ್ಮಿಕರೂ, ಸಮಾಜವೂ ಮೆಚ್ಚುವ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ನಗರಸಭಾ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಕೆ. ಜೀವಂಧರ್ ಜೈನ್ ಮಾತನಾಡಿ, ಬನ್ನೂರನ್ನು ಝೀರೋ ಡಂಪಿಂಗ್ ಯಾರ್ಡ್ ಆಗಿ ಪರಿವರ್ತಿಸುವಲ್ಲಿ, ಉತ್ತಮ ಕಸ ವಿಲೇವಾರಿ ವ್ಯವಸ್ಥೆ, ಸಿಎನ್‌ಜಿ ಘಟಕ ಸ್ಥಾಪನೆಯಂತಹ ಮಹತ್ವದ ಕೆಲಸಗಳ ಮೂಲಕ ಜನಸ್ನೇಹಿ ಅಧಿಕಾರಿಯಾಗಿ ಅವರು ಗುರುತಿಸಿಕೊಂಡಿದ್ದಾರೆ ಎಂದರು.ಮಧು ಎಸ್. ಮನೋಹರ್ ಅವರನ್ನು ನಗರಸಭೆ, ಸಂಘ ಸಂಸ್ಥೆಗಳು, ಅಧಿಕಾರಿಗಳು, ಸಾರ್ವಜನಿಕರ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಮಧು ಎಸ್. ಮನೋಹರ್ ಅವರು ಸೇವಾ ಅವಧಿಯಲ್ಲಿ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು.ನಗರಸಭಾ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ತಾ.ಪಂ. ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ನಗರಸಭಾ ಸಿಎನ್ ಜಿ ಘಟಕದ ಪಾಲುದಾರ ಉದ್ಯಮಿ ಕೃಷ್ಣನಾಯಾರಣ ಮುಳಿಯ, ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ, ವಾಣಿಜ್ಯ ಮತ್ತು ವರ್ತಕ ಸಂಘದ ಅಧ್ಯಕ್ಷ ವಾಮನ ಪೈ, ತಹಶೀಲ್ದಾರ್ ಬಿ.ಎಸ್. ಕೂಡಲಗಿ, ನಗರಸಭಾ ಅಧಿಕಾರಿ ರವೀಂದ್ರ ಕುಮಾರ್, ಹೊರಗುತ್ತಿಗೆ ಪೌರ ಕಾರ್ಮಿಕರ ಸಂಘದ ಅಧಯಕ್ಷ ಅಣ್ಣ ಕಾರೆಕ್ಕಾಡು, ಪುಡಾ ಅಧ್ಯಕ್ಷ ನಿಹಾಲ್ ಶೆಟ್ಟಿ, ರೋಟರಿ ಕ್ಲಬ್ ಪುತ್ತೂರು ಸಿಟಿಯ ಅಧ್ಯಕ್ಷ ಉಲ್ಲಾಸ್ ಪೈ, ಗುತ್ತಿಗೆದಾರರ ಸಂಘದ ಮುರಳೀಕೃಷ್ಣ ಹಸಂತಡ್ಕ, ನಗರಸಭಾ ಪರಿಸರ ಅಭಿಯಂತರ ಶಬರಿನಾಥ ರೈ, ನಗರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರ ಪೂಜಾರಿ ಬಡಾವು, ನೂತನ ಪೌರಾಯುಕ್ತೆ ವಿದ್ಯಾ ಕಾಳೆ ಅವರು ಮಧು ಮನೋಹರ್ ಅವರ ಕುರಿತು ಮಾತನಾಡಿದರು.ನಗರಸಭಾ ಉಪಾಧ್ಯಕ್ಷ ಬಾಲಚಂದ್ರ ಕೆ. ಸ್ವಾಗತಿಸಿ, ಶಿಕ್ಷಕ ಬಾಲಕೃಷ್ಣ ಪೊರ್ದಾಳ್ ಕಾರ್ಯಕ್ರಮ ನಿರ್ವಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''