ಸಾಲಬಾಧೆ ತಾಳದೆ ವಿಷ ಸೇವಿಸಿ ರೈತ ಆತ್ಮಹತ್ಯೆ

KannadaprabhaNewsNetwork |  
Published : Sep 11, 2024, 01:08 AM IST
ಪತ್ನಿ ನೀಡಿದ ದೂರಿನನ್ವಯ ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  | Kannada Prabha

ಸಾರಾಂಶ

Farmer commits suicide by consuming poison due to debt

ಕನ್ನಡಪ್ರಭ ವಾರ್ತೆ ಸುರಪುರಜಮೀನು ಸಾಗುವಳಿಗಾಗಿ ಸಾಲ ಮಾಡಿದ್ದು, ಬೆಳೆಗಳು ಸಮರ್ಪಕವಾಗಿ ಬಾರದೆ ಮಾಡಿದ ಸಾಲವನ್ನು ತೀರಿಸಲಾಗದೆ ಮನನೊಂದು ಮನೆಯಲ್ಲೇ ವಿಷ ಸೇವಿಸಿ ಮೃತಪಟ್ಟಿರುವ ಘಟನೆ ದೇವಾಪುರ ಗ್ರಾಮದಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ. ದೇವಾಪುರ ಗ್ರಾಮದ ರವಿ ಹಣಮಂತಪ್ಪ (32) ಮೃತಪಟ್ಟ ರೈತ. 2.29 ಎಕರೆ ಜಮೀನಿನಲ್ಲಿ ಕೃಷಿ ಮಾಡುತ್ತಿದ್ದನು. ಅನ್ವರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 25 ಸಾವಿರ ರು. ಸಾಲ, ಕೈಗಡ ಸಾಲವಾಗಿ 5-6 ಲಕ್ಷ ರು.ಗಳ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಸಾಲಬಾಧೆಯಿಂದ ಮನನೊಂದು ಮನೆಯಲ್ಲೇ ವಿಷ ಸೇವಿಸಿದಾಗ, ಸುರಪುರ ತಾಲೂಕಾಸ್ಪತ್ರೆಗೆ ತಂದು ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಪತ್ನಿ ನೀಡಿದ ದೂರಿನನ್ವಯ ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

-----

10ವೈಡಿಆರ್‌19 : ರವಿ, ಆತ್ಮಹತ್ಯೆ ಮಾಡಿಕೊಂಡ ರೈತ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿಎಂ ಗಾದಿ ಸಂಚಲನ : ನಾನು ಸಿಎಂ ಆಗಲಿ ಎಂಬುದು ಜನರ ಬಯಕೆ ಎಂದರು ಡಿಕೆಶಿ
ರೈಲ್ವೆ ಯೋಜನೆಗೆ ಭೂಮಿ ನೀಡಲು ರಾಜ್ಯ ಹಿಂದೇಟು