ಸುಳ್ಯ: ಯಕ್ಷಗಾನದ ಹಿಮ್ಮೇಳದಲ್ಲಿ ಚೆಂಡೆ, ಮದ್ದಳೆ ವಾದಕರಾಗಿ ಪ್ರಸಿದ್ದರಾಗಿದ್ದ, ಕೃಷಿಕ, ಮರ್ಕಂಜ ಗ್ರಾಮದ ತೋಟಚಾವಡಿ ನಾರಾಯಣ ನಾಯಕ್ ಎಂಬವರು ಅಡಕೆ ಹಳದಿ ರೋಗಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ.ಪತ್ನಿ ಮಗಳ ಮನೆಗೆ ಹೋಗಿದ್ದ ಸಂದರ್ಭ ಈ ಘಟನೆ ನಡೆದಿದೆ.
ಮಂಗಳೂರಿನ ವಿವಿಧ ಕಡೆ ಮಾದಕ ವಸ್ತು ಸೇವನೆ ಆರೋಪ, ನಾಲ್ವರ ಸೆರೆ:
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಪಣಂಬೂರು, ಕೆಎಸ್ಸಾರ್ಟಿಸಿ, ವಳಚಿಲ್ ಸಮೀಪ ಮಾದಕ ವಸ್ತುಸೇವನೆ ಆರೋಪದಲ್ಲಿ 4 ಮಂದಿಯನ್ನು ನಗರ ಪೊಲೀಸರು ಬಂಧಿಸಿದ್ದಾರೆ.ಪ್ರಕರಣ 1: ಜ.17ರಂದು ಜೋಕಟ್ಟೆಕ್ರಾಸಿನ ಬಳಿ ಮಾದಕ ಅಮಲಿನಲ್ಲಿದಂತೆ ಕಂಡು ಬಂದ ಗುರುದೀಪ್ ಸಿಂಗ್ (23) ಮತ್ತು ರಾಹುಲ್ (24) ಎಂಬವರನ್ನು ಪಣಂಬೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಳಿಕ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿ, ವೈದ್ಯಕೀಯ ಪರೀಕ್ಷೆ ನಡೆಸಿದಾಗ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ. ಆರೋಪಿಗಳ ವಿರುದ್ಧ ಪಣಂಬೂರು ಠಾಣೆಯಲ್ಲಿ ಎನ್ಡಿಪಿಎಸ್ ಕಾಯಿದೆ-1985ರ ಪ್ರಕಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.ಪ್ರಕರಣ 2: ಜ.17ರಂದು ನಗರದ ಕೆಎಸ್ಸಾರ್ಟಿಸಿ ಬಸ್ ತಂಗುದಾಣದ ಬಳಿ ವ್ಯಕ್ತಿಯೊಬ್ಬ ಮಾದಕ ವಸ್ತು ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ಮಾಡುತ್ತಿದ್ದ. ಈ ಬಗ್ಗೆ ಖಚಿತ ಸೆನ್ ಪೊಲೀಸರು ದಾಳಿ ನಡೆಸಿ ಅಜ್ಜಿನಡ್ಕ ಬದ್ರಿಯಾನಗರ ನಿವಾಸಿ ಕೆ.ಪಿ. ಹೈದರ್ ಆಲಿ ಮೊಹಮ್ಮದ್ (53) ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಳಿಕ ಆರೋಪಿಯನ್ನು ವೈದ್ಯಕೀಯ ತಪಾಸಣೆಗೊಳಪಡಿಸಿದಾಗ ಮಾದಕ ಸೇವನೆ ಮಾಡಿರುವುದು ದೃಢಪಟ್ಟಿದೆ. ಸೆನ್ ಪೊಲೀಶ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪ್ರಕರಣ 3: ನಗರದ ಹೊರವಲಯದ ವಳಚ್ಚಿಲ್ ಬಳಿ ಮಾದಕ ವಸ್ತು ಸೇವನೆ ಆರೋಪದಲ್ಲಿ ಅಡ್ಯಾರ್ ಮಸೀದಿ ಬಳಿ ನಿವಾಸಿ ಮಹಮ್ಮದ್ ಮನಾಜ್ (20) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.