ಕನ್ನಡಪ್ರಭ ವಾರ್ತೆ ರಿಪ್ಪನ್ಪೇಟೆ
ಸಹಕಾರಿ ಕ್ಷೇತ್ರದಲ್ಲಿ ರೈತರು ಪಡೆದ ಸಾಲವನ್ನು ಸರ್ಕಾರಗಳು ಮನ್ನಾ ಮಾಡುತ್ತವೆ ಎಂಬ ಭ್ರಮಯಲ್ಲಿ ರೈತರು ಸಾಲ ಮರುಪಾವತಿ ಮಾಡದೇ ಇರಬಹುದು. ಆದರೆ, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಿಂದ ವಾರ್ಷಿಕ ₹32 ಸಾವಿರ ಕೋಟಿ ವ್ಯಯ ಆಗುತ್ತಿದೆ. ಆದಕಾರಣ ಸಾಲ ಮನ್ನಾ ಕಷ್ಟವಾಗಿದೆ ಎಂದು ಸಾಗರ ಕ್ಷೇತ್ರ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.ರಿಪ್ಪನ್ಪೇಟೆಯ ಗಣಪತಿ ದೇವಸ್ಥಾನ ಹಿಂಭಾಗದಲ್ಲಿ ಕರ್ನಾಟಕ ರಾಜ್ಯ ಮಹಾಮಂಡಳ ನಿಯಮಿತ, ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಸಹಕಾರ ಹಾಲು ಒಕ್ಕೂಟ, ಹೊಸನಗರ ತಾಲೂಕಿನ ಸಹಕಾರ ಸಂಘ ಮತ್ತು ಬ್ಯಾಂಕ್ ಆಶ್ರಯದಲ್ಲಿ ಆಯೋಜಿಸಿದ್ದ 70ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಈಗಾಗಲೇ ರಾಜ್ಯ ಸಹಕಾರಿ ಸಚಿವರು ತಿಳಿಸಿದಂತೆ ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಒಂದು ಸಹಕಾರಿ ಸಂಘ ಆರಂಭಿಸಬೇಕು ಎಂಬ ನಿಯಮದಂತೆ ಶೀಘ್ರದಲ್ಲಿ ಆರಂಭಿಸುವ ಬಗ್ಗೆ ಸಹಕಾರಿಗಳು ನಿರ್ಣಯ ಕೈಗೊಳ್ಳಬೇಕು. ಸಹಕಾರಿ ಮಹಿಳಾ ಸಂಘಗಳು ಸಹ ಸ್ಥಾಪನೆ ಆಗಬೇಕು. ಸಣ್ಣ ಮತ್ತು ಅತಿಸಣ್ಣ ರೈತರಿಗೆ ಭತ್ತದ ಬೆಳೆಗೆ ಕಡಿಮೆ ಸಾಲ ದೊರೆಯುತ್ತಿದ್ದು, ಇದನ್ನು ಮುಂದಿನ ದಿನಗಳಲ್ಲಿ ಎಕರೆಗೆ ₹1 ಲಕ್ಷಕ್ಕೆ ಹೆಚ್ಚಿಸುವ ಬಗ್ಗೆ ಶಾಸನ ಸಭೆಯಲ್ಲಿ ಚರ್ಚಿಸುವಂತೆ ಸಹಕಾರ ಸಂಘದವರು ಶಾಸಕರಲ್ಲಿ ಮನವಿ ಮಾಡಿದ್ದಾರೆ. ಈ ಬಗ್ಗೆ ವಿಧಾನಸಭೆಯಲ್ಲಿ ಭರವಸೆ ನೀಡಿದರು.ಅಲ್ಲದೇ, ಅಡಕೆ ಬೆಳೆಗೆ ಎಲೆಚುಕ್ಕೆ ರೋಗದ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆಯಲು ಮಾಮ್ಕೋಸ್ ಆಡಳಿತ ವರ್ಗ ಮುಂದಾದರೆ ಅವರೊಂದಿಗೆ ಕೇಂದ್ರದ ಸರ್ಕಾರದ ಗಮನ ಸೆಳೆಯಲು ನಿಯೋಗದ ನೇತೃತ್ವವನ್ನು ವಹಿಸುವುದಾಗಿ ಶಾಸಕರು ಭರವಸೆ ನೀಡಿದರು.
ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಕೆ.ರತ್ನಾಕರ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸಹಕಾರಿ ರತ್ನ ಪ್ರಶಸ್ತಿ ಪಡೆದ ವಿನಯಕುಮಾರ್ ಡಿ.ಆರ್. ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.ಜಿಲ್ಲಾ ಸಹಕಾರ ಬ್ಯಾಂಕ್ ನಿರ್ದೇಶಕ ಎಂ.ಎಂ. ಪರಮೇಶ್, ಹೊಸನಗರ ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಎಂ.ವಿ. ಜಯರಾಂ, ಸಹ್ಯಾದ್ರಿ ಕಾಫಿ ಬೆಳೆಗಾಎಎ ಸಹಕಾರ ಸಂಘದ ನಿ. ಅಧ್ಯಕ್ಷ ಪಿ.ಎನ್. ಶಶಿಧರ್ ಹರತಾಳು, ನಿರ್ದೇಶಕ ಹರತಾಳು ನಾಗರಾಜ್, ಆಫ್ಕೋಸ್ ನಿರ್ದೇಶಕ ಎ.ಒ. ರಾಮಚಂದ್ರ, ಎಚ್.ಬಿ. ಕಲ್ಯಾಣಪ್ಪಗೌಡ, ಮಾಮ್ಕೋಸ್ ನಿರ್ದೇಶಕ ಕೆ.ವಿ.ಕೃಷ್ಣಮೂರ್ತಿ, ಎಚ್.ಟಿ. ಸುಬ್ರಮಣ್ಯ, ಹೊಸನಗರ ತಾಲೂಕು ವೀರಶೈವ ಪತ್ತಿನ ಸಹಕಾರ ಸಂಘ ಅಧ್ಯಕ್ಷ ಎಚ್.ಪಿ. ನಂಜುಂಡಪ್ಪ, ತೋಟಗಾರ್ಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿರ್ದೇಶಕ ಜಯಶೀಲಪ್ಪಗೌಡ ಹರತಾಳು, ತುಂಗ ಅಡಕೆ ಸಹಕಾರ ಸಂಘದ ಆಧ್ಯಕ್ಷ ವಿನಯಕುಮಾರ್ ಡಿ.ಆರ್., ವರಾಹಿ ಪತ್ತಿನ ಸಹಕಾರ ಸಂಘ ನಿರ್ದೇಶಕ ಹಾಲಗದ್ದೆ ಉಮೇಶ್, ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮೀ, ವೆಂಕಟಾಚಲಪತಿ, ಜಿಪಂ ಮಾಜಿ ಸದಸ್ಯ ಬಂಡಿ ರಾಮಚಂದ್ರ, ಯಶವಂತ್ಕುಮಾರ್, ಮಮತಾ ಚಂದ್ರಶೇಖರ್ ಇತರರು ಇದ್ದರು.
ಹಾಲು ಉತ್ಪಾದಕರ ಸಹಕಾರ ಒಕ್ಕೂಟದ ನಿರ್ದೇಶಕ ಎಚ್.ಎನ್. ದ್ಯಾಧರ ಸ್ವಾಗತಿಸಿದರು. ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ವಾಟಗೋಡು ಸುರೇಶ್, ಪ್ರಾಸ್ತಾವಿಕವಾಗಿ ಮಾತನಾಡಿದರು.- - -
-20ಆರ್ಪಿಟಿ3ಪಿ: ಕಾರ್ಯಕ್ರಮವನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಉದ್ಘಾಟಿಸಿದರು.