ಮಳೆ ಇಲ್ಲದೇ ಬೆಳೆ ನಾಶಕ್ಕೆ ಮುಂದಾದ ರೈತ

KannadaprabhaNewsNetwork |  
Published : Aug 01, 2026, 03:30 AM IST
ಹೂವಿನಹಡಗಲಿ ತಾಲೂಕಿನ ಉಪನಾಯಕನಹಳ್ಳಿ ಗ್ರಾಮದ ರುದ್ರಪ್ಪ ಬೆನ್ನೂರು ಇವರ 4 ಎಕ್ರೆ ಮೆಕ್ಕೆಜೋಳ ಬೆಳೆಯನ್ನು ರೈತರಿಗೆ ಉಚಿತವಾಗಿ ಮೇವು ನೀಡಿರುವುದು.  | Kannada Prabha

ಸಾರಾಂಶ

ಮೆಕ್ಕೆಜೋಳದ ಸೊಪ್ಪಿಯನ್ನು ಜಾನುವಾರುಗಳನ್ನು ಸಾಕಾಣಿಕೆ ಮಾಡಿರುವ ರೈತರಿಗೆ ಮೇವನ್ನು ಉಚಿತವಾಗಿ ನೀಡುತ್ತಿದ್ದಾರೆ.

ಹೂವಿನಹಡಗಲಿ: ಮಳೆ ನಂಬಿಕೊಂಡು ಮೆಕ್ಕೆಜೋಳ ಬಿತ್ತನೆ ಮಾಡಿರುವ ರೈತರು ಮಳೆ ಕೈ ಕೊಟ್ಟ ಪರಿಣಾಮ ಬೆಳೆ ನಾಶಕ್ಕೆ ಮುಂದಾಗಿರುವ ಘಟನೆ ಶುಕ್ರವಾರ ನಡೆದಿದೆ.

ತಾಲೂಕಿನ ಉಪನಾಯಕನಹಳ್ಳಿ, ಮಾಗಳ, ಹಿರೇಹಡಗಲಿ, ಇಟ್ಟಗಿ, ಉತ್ತಂಗಿ ಸೇರಿದಂತೆ ಇನ್ನೂ ಅನೇಕ ಹಳ್ಳಿಗಳಲ್ಲಿ ಬಿತ್ತನೆ ಮಾಡಿರುವ ಬೆಳೆಗಳು ಒಣಗುತ್ತಿವೆ. ಇನ್ಮುಂದೆ ಮಳೆ ಬಂದರೂ ಫಲ ಸಿಗುವುದಿಲ್ಲ ಎಂಬ ಕಾರಣಕ್ಕಾಗಿ ಇದ್ದ ಮೆಕ್ಕೆಜೋಳದ ಸೊಪ್ಪಿಯನ್ನು ಜಾನುವಾರುಗಳನ್ನು ಸಾಕಾಣಿಕೆ ಮಾಡಿರುವ ರೈತರಿಗೆ ಮೇವನ್ನು ಉಚಿತವಾಗಿ ನೀಡುತ್ತಿದ್ದಾರೆ.

ಉಪನಾಯಕನಹಳ್ಳಿ ಗ್ರಾಮದ ರುದ್ರಪ್ಪ ಬೆನ್ನೂರು ಅವರಿಗೆ ಸೇರಿದ್ದ 4 ಎಕರೆ ಮೆಕ್ಕೆಜೋಳಕ್ಕೆ ಸಕಾಲದಲ್ಲಿ ಮಳೆ ಇಲ್ಲದೇ ಒಣಗಿ ಹೋಗುತ್ತಿತ್ತು. ಈ ಬೆಳೆಯನ್ನು ಟ್ರ್ಯಾಕ್ಟರ್‌ನಿಂದ ಹಾನಿ ಮಾಡಿದರೆ ದನ ಕರುಗಳಿಗೆ ಮೇವಿನ ಬವಣೆ ಉಂಟಾಗುತ್ತದೆ ಎಂದು ಕಾರಣಕ್ಕಾಗಿ ಅದೇ ಗ್ರಾಮದ ರೈತರಿಗೆ ತಾವೇ ಕೊಯ್ಲು ಮಾಡಿಕೊಂಡು ಮೇವನ್ನು ಉಚಿತವಾಗಿ ನೀಡಿದ್ದಾರೆ.

4 ಎಕರೆ ಮೆಕ್ಕೆಜೋಳ ಬಿತ್ತನೆ ಮಾಡಲು ಸಾವಿರಾರು ರುಪಾಯಿ ಬಂಡವಾಳ ಹಾಕಿದ್ದೇವೆ. ಆದರೆ ಮಳೆ ಇಲ್ಲದೇ ಬರ ಬಿದ್ದಿದೆ. ಇದರಿಂದ ಭವಿಷ್ಯದಲ್ಲಿ ಬದುಕನ್ನು ಹೇಗೆ ಸಾಗಿಸಬೇಕೆಂಬ ಚಿಂತೆಯಲ್ಲಿದ್ದೇವೆ. ಕೂಡಲೇ ಸರ್ಕಾರ ಬರಗಾಲ ಪ್ರದೇಶ ಎಂದು ಘೋಷಣೆ ಮಾಡಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕೆಂದು ರುದ್ರಪ್ಪ ಒತ್ತಾಯಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಕ್ಕಲೆಬ್ಬಿಸುವ ಪ್ರಯತ್ನಕ್ಕೆ ಅರಣ್ಯವಾಸಿಗಳ ಆಕ್ರೋಶ
ಜಾಲಿ ಯೋಗ ತರಬೇತಿ ಕೇಂದ್ರದಲ್ಲಿ ಗುರುಪೂರ್ಣಿಮೆ ಆಚರಣೆ