ಧಾರವಾಡ: ತಾಲೂಕಿನ ನರೇಂದ್ರ ಗ್ರಾಮದ ಹಿರಿಯರು, ಪ್ರಗತಿಪರ ರೈತರು, ರೈತ ಹೋರಾಟಗಾರ ಖಂಡೇಶ್ವರ ಬಸವಂತಪ್ಪ ನರೇಂದ್ರ (ಈಳಿಗೇರ) (80) ಗುರುವಾರ ನಿಧನರಾದರು.ಎಂಜಿನಿಯರಿಂಗ್ ಪದವಿ ಪಡೆದಿದ್ದ ಅವರು, ಕೃಷಿಕರ ಬಗ್ಗೆ ಅಪಾರ ಕಳಕಳಿ ಹೊಂದಿದ್ದರು. ಅಂದಿನ ರೈತ ನಾಯಕ ಪ್ರೊ. ಎಂ.ಡಿ. ನಂಜುಂಡಸ್ವಾಮಿ, ಬಾಬಾಗೌಡ ಪಾಟೀಲ, ಎಚ್.ಎಸ್. ರುದ್ರಪ್ಪ, ಪುಟ್ಟಣ್ಣಯ್ಯ ಅವರ ಜತೆ ರೈತ ಚಳವಳಿಯಲ್ಲಿ ಗುರುತಿಸಿಕೊಂಡಿದ್ದರು. ಒಂದು ಬಾರಿ ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತದಲ್ಲಿ ರೈತ ಸಂಘದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.
ಧಾರವಾಡ: ತಾಲೂಕಿನ ನರೇಂದ್ರ ಗ್ರಾಮದ ಹಿರಿಯರು, ಪ್ರಗತಿಪರ ರೈತರು, ರೈತ ಹೋರಾಟಗಾರ ಖಂಡೇಶ್ವರ ಬಸವಂತಪ್ಪ ನರೇಂದ್ರ (ಈಳಿಗೇರ) (80) ಗುರುವಾರ ನಿಧನರಾದರು. ಎಂಜಿನಿಯರಿಂಗ್ ಪದವಿ ಪಡೆದಿದ್ದ ಅವರು, ಕೃಷಿಕರ ಬಗ್ಗೆ ಅಪಾರ ಕಳಕಳಿ ಹೊಂದಿದ್ದರು. ಅಂದಿನ ರೈತ ನಾಯಕ ಪ್ರೊ. ಎಂ.ಡಿ. ನಂಜುಂಡಸ್ವಾಮಿ, ಬಾಬಾಗೌಡ ಪಾಟೀಲ, ಎಚ್.ಎಸ್. ರುದ್ರಪ್ಪ, ಪುಟ್ಟಣ್ಣಯ್ಯ ಅವರ ಜತೆ ರೈತ ಚಳವಳಿಯಲ್ಲಿ ಗುರುತಿಸಿಕೊಂಡಿದ್ದರು. ಒಂದು ಬಾರಿ ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತದಲ್ಲಿ ರೈತ ಸಂಘದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಮೃತರಿಗೆ ಪತ್ನಿ, ಮೂವರು ಪುತ್ರರು ಇದ್ದಾರೆ. ಖಂಡೇಶ್ವರ ನರೇಂದ್ರ ಅಂತ್ಯಕ್ರಿಯೆ ಅ. 20ರಂದು ಬೆಳಗ್ಗೆ 10ಕ್ಕೆ ಗ್ರಾಮದ ಮಳೆಪ್ಪಜ್ಜನ ಮಠದ ಹಿಂದಿರುವ ಈಳಿಗೇರ ಅವರ ತೋಟದಲ್ಲಿ ನೆರವೇರಲಿದೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.