ಕನ್ನಡಪ್ರಭ ವಾರ್ತೆ ಶಿಗ್ಗಾಂವಿ ಇಲ್ಲಿಯ ನವನಗರದ ರೈತರೊಬ್ಬರು ನೇಣಿಗೆ ಶರಣಾಗಿದ್ದು, ಸಾಲಭಾದೆಯೇ ಇವರ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಶಂಭು ಸಕ್ರಪ್ಪ ಗುಳೇದ (೪೪) ಆತ್ಮಹತ್ಯೆ ಮಾಡಿಕೊಂಡ ರೈತ. ಈತ ಶಿಗ್ಗಾಂವಿಯ ಕೆವಿಜಿ ಬ್ಯಾಂಕ್ನಲ್ಲಿ ₹೧ ಲಕ್ಷ ಬೆಳೆಸಾಲ, ಐಡಿಎಫ್ಸಿ ಬ್ಯಾಂಕ್ನಲ್ಲಿ ₹೧,೫೦ ಲಕ್ಷ ವೈಯಕ್ತಿಕ ಸಾಲ, ತನ್ನ ಹೆಂಡತಿಯ ಹೆಸರಿನಲ್ಲಿ ಗ್ರಾಮಶಕ್ತಿ ಸಂಘದಲ್ಲಿ ೫೦ ಸಾವಿರ, ಅಲ್ಲದೇ ತಮ್ಮ ಪರಿಚಯದವರ ಹತ್ತಿರ ಸುಮಾರು ₹೪ ಲಕ್ಷ ಕೈಗಡ ಸಾಲ ಮಾಡಿದ್ದ. ಈ ವರ್ಷ ಸರಿಯಾಗಿ ಮಳೆ ಬಾರದ್ದರಿಂದ ಬೆಳೆ ಹಾಳಾಗಿದ್ದು, ಅದನ್ನು ತುಂಬಾ ಮನಸ್ಸಿಗೆ ಹಚ್ಚಿಕೊಂಡು ತನ್ನ ಮನೆಯ ರೂಮಿನಲ್ಲಿ ನೇಣು ಹಾಕಿಕೊಂಡು ಮೃತಪಟ್ಟಿದ್ದಾನೆ ಎಂದು ಕುಟುಂಬದ ಸದಸ್ಯರು ದೂರಿನಲ್ಲಿ ತಿಳಿಸಿದ್ದಾರೆ. ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.