ರಾಣಿಬೆನ್ನೂರು: ನರೇಗಾ ಯೋಜನೆಯಡಿ ದನದ ಕೊಟ್ಟಿಗೆ ಕಟ್ಟಿಕೊಳ್ಳಲು ಹಣ ಬಿಡುಗಡೆ ಮಾಡದೇ ಸತಾಯಿಸಿದ ಹಿನ್ನೆಲೆ ಗ್ರಾಮ ಪಂಚಾಯಿತಿ ಕಚೇರಿ ಮುಂದೆಯೇ ರೈತರೊಬ್ಬರು ಹಸುಗಳನ್ನು ಕಟ್ಟಿ ಪ್ರತಿಭಟನೆ ನಡೆಸಿದ ಘಟನೆ ಗುರುವಾರ ತಾಲೂಕಿನ ಕವಲೆತ್ತು ಗ್ರಾಮದಲ್ಲಿ ಜರುಗಿದೆ.
ಸವಣೂರು: ಪಟ್ಟಣದಲ್ಲಿ ಗುರುವಾರ ಬೆಳಗ್ಗೆ ಬೀದಿನಾಯಿ ದಾಳಿಗೆ ಬಾಲಕನೊಬ್ಬ ಗಾಯಗೊಂಡಿದ್ದು, ಕೂಡಲೇ ಆತನಿಗೆ ಸ್ಥಳೀಯ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ಗೆ ದಾಖಲಿಸಲಾಗಿದೆ.
ಶ್ರೀ ಜಗದ್ಗುರು ರೇಣುಚಾರ್ಯ ನಗರದ ಮಂಥನ ನಾಗರಾಜ್ ಟಿಕಾರೆ(7) ಗಾಯಗೊಂಡ ಬಾಲಕ. ಸ್ಥಳೀಯ ಕೆಪಿಎಸ್ ಶಾಲೆಯಲ್ಲಿ 2ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ಶಾಲೆಗೆ ತೆರಳಲು ಸಿದ್ಧನಾಗಿ ಮನೆಯ ಬಾಗಿಲಿನ ಮುಂದೆ ನಿಂತಿದ್ದ 7 ವರ್ಷದ ಬಾಲಕನ ಮೇಲೆ ಬೀದಿನಾಯಿಯೊಂದು ಏಕಾಏಕಿ ದಾಳಿ ಮಾಡಿದೆ. ಬಾಲಕನ ಎದೆಯ ಬಲಭಾಗಕ್ಕೆ ಕಚ್ಚಿದ್ದು, ತೀವ್ರವಾಗಿ ಗಾಯಗೊಂಡಿದ್ದಾನೆ. ಕುಟುಂಬಸ್ಥರು ತಕ್ಷಣ ಸ್ಥಳೀಯ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಾಥಮಿಕ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ಗೆ ಸ್ಥಳಾಂತರಿಸಲಾಗಿದೆ.ನಾಯಿ ದಾಳಿಯಿಂದ ಆತಂಕಗೊಂಡ ಸ್ಥಳೀಯರು ಬೀದಿನಾಯಿಗಳ ಉಪಟಳದ ಕುರಿತು ಪುರಸಭೆಗೆ ಹಲವಾರು ಬಾರಿ ತಿಳಿಸಿದರೂ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.ಈ ಬಗ್ಗೆ ಪುರಸಭೆಯವರು ತಕ್ಷಣ ಸ್ಪಂದಿಸಬೇಕು. ಇಲ್ಲದಿದ್ದರೆ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ.