ಮೃತ ಕೇಶವಯ್ಯ ಕುಟುಂಬಕ್ಕೆ ರೈತ ಸಂಘ ಸಾಂತ್ವನ

KannadaprabhaNewsNetwork |  
Published : Feb 27, 2025, 12:36 AM IST
26ಎಚ್ಎಸ್ಎನ್14 :  | Kannada Prabha

ಸಾರಾಂಶ

ಸಾಲದ ಬಾಧೆ ತಾಳಲಾರದೆ ವಿಷಸೇವಿಸಿ ಆತ್ಮಹತ್ಯೆಮಾಡಿಕೊಂಡ ಕಳ್ಳಿಮುದ್ದನಹಳ್ಳಿ ಕೇಶವಯ್ಯ ಅವರ ಸಾವಿಗೆ ಕಾರಣರಾದವರನ್ನು ಗುರುತಿಸಿ ಕಾನೂನು ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ತಾಲೂಕು ರೈತಸಂಘದ ಕಾರ್ಯಾಧ್ಯಕ್ಷ ಭುವನೇಶ್ ಎಚ್ಚರಿಸಿದರು. ತಾಲೂಕಿನಲ್ಲಿ ಇದು ಎರಡನೇ ಪ್ರಕರಣವಾಗಿದೆ. ಮೈಕ್ರೋ ಫೈನಾನ್ಸ್ ಕಿರುಕುಳದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದರು.

ಕನ್ನಡಪ್ರಭ ವಾರ್ತೆ ಅರಕಲಗೂಡು

ಸಾಲದ ಬಾಧೆ ತಾಳಲಾರದೆ ವಿಷಸೇವಿಸಿ ಆತ್ಮಹತ್ಯೆಮಾಡಿಕೊಂಡ ಕಳ್ಳಿಮುದ್ದನಹಳ್ಳಿ ಕೇಶವಯ್ಯ ಅವರ ಸಾವಿಗೆ ಕಾರಣರಾದವರನ್ನು ಗುರುತಿಸಿ ಕಾನೂನು ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ತಾಲೂಕು ರೈತಸಂಘದ ಕಾರ್ಯಾಧ್ಯಕ್ಷ ಭುವನೇಶ್ ಎಚ್ಚರಿಸಿದರು.

ಮೃತ ಕೇಶವಯ್ಯ ಅವರ ಮನೆಗೆ ಬುಧವಾರ ತೆರಳಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ ಬಳಿಕ ಮಾತನಾಡಿ, ತಾಲೂಕಿನಲ್ಲಿ ಇದು ಎರಡನೇ ಪ್ರಕರಣವಾಗಿದೆ. ಮೈಕ್ರೋ ಫೈನಾನ್ಸ್ ಕಿರುಕುಳದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಕಿರುಕುಳ ನೀಡುವುದು ನಿಂತಿಲ್ಲ, ರೈತರು ಮರ್ಯಾದೆಗೆ ಅಂಜಿ ಸಾವಿಗೆ ಶರಣಾಗುವ ದುಸ್ಥಿತಿ ಎದುರಾಗಿದೆ ಎಂದು ಅರೋಪಿಸಿದರು.

ಮೃತ ಕೇಶವಯ್ಯ ಅವರು ಬ್ಯಾಂಕ್ ಮತ್ತು ಮೈಕ್ರೋ ಫೈನಾನ್ಸ್ ಕಂಪನಿಗಳಲ್ಲಿ ಮಾಡಿರುವ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು, ತಪ್ಪಿತಸ್ಥರ ವಿರುದ್ದ ಪ್ರಕರಣ ದಾಖಲಿಸಿ ಕಾನೂನುಕ್ರಮ ಕೈಗೊಳ್ಳಬೇಕು, ಫೈನಾನ್ಸ್‌ನವರು ಕಿರುಕುಳ ನೀಡುವುದನ್ನು ತಡೆಗಟ್ಟಲು ಕೂಡಲೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ರೈತ ಸಂಘ ಉಗ್ರ ಹೋರಾಟಕ್ಕೆ ಮುಂದಾಗಲಿದೆ. ಕಿರುಕುಳಕ್ಕೆ ಒಳಗಾದವರು ದೂರು ನೀಡಿದರೆ ರೈತ ಸಂಘ ಅವರ ರಕ್ಷಣೆಗೆ ನಿಲ್ಲಲಿದೆ ಎಂದರು. ಮುಖಂಡ ಹೊಂಬೆಗೌಡ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದು 2028ರವರೆಗೂ ಸಿಎಂ, ಇಳಿಸಲು ಆಗೋಲ್ಲ: ಜಮೀರ್‌
ಫೆ.೮ರಂದು ಶ್ರೀ ರಾಮಲಿಂಗೇಶ್ವರ ಮಠ ಲೋಕಾರ್ಪಣೆ