ವಿಷ ಸೇವಿಸಿದ್ದ ರೈತ ಚಿಕಿತ್ಸೆಗೆ ಸ್ಪಂದಿಸದೇ ಸಾವು

KannadaprabhaNewsNetwork |  
Published : Jul 11, 2025, 11:48 PM IST
11ಎಚ್ಎಸ್ಎನ್4 : ಆತ್ಮಹತ್ಯೆ ಮಾಡಿಕೊಂಡ ತಟ್ಟೇಕೆರೆ ಗ್ರಾಮದ ಮಂಜೇಗೌಡ. | Kannada Prabha

ಸಾರಾಂಶ

ಶುಕ್ರವಾರ ಬೆಳಗಿನ ಜಾವ ಚಿಕಿತ್ಸೆಗೆ ಸ್ಪಂದಿಸದೇ ಮಂಜೇಗೌಡ ಸಾವನ್ನಪ್ಪಿದರು ಎಂದು ಕುಟುಂಬ ವರ್ಗದವರು ತಿಳಿಸಿದ್ದಾರೆ.

ಹೊಳೆನರಸೀಪುರ: ತಾಲೂಕಿನ ತಟ್ಟೇಕೆರೆ ಗ್ರಾಮದಲ್ಲಿ ಸಾಲದ ಬಾಧೆಯಿಂದ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ರೈತರೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಜುಲೈ ೫ ರಂದು ಕ್ರಿಮಿನಾಶಕ ಸೇವಿಸಿದ್ದ ರೈತ ಮಂಜೇಗೌಡರನ್ನು (45) ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನಂತರ, ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗೆ ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಶುಕ್ರವಾರ ಬೆಳಗಿನ ಜಾವ ಚಿಕಿತ್ಸೆಗೆ ಸ್ಪಂದಿಸದೇ ಮಂಜೇಗೌಡ ಸಾವನ್ನಪ್ಪಿದರು ಎಂದು ಕುಟುಂಬ ವರ್ಗದವರು ತಿಳಿಸಿದ್ದಾರೆ. ಇವರು ಕೃಷಿ ಚಟುವಟಿಕೆ ಹಾಗೂ ಮನೆ ಕಟ್ಟಲು ಮೂಡಲಹಿಪ್ಪೆ ಕರ್ನಾಟಕ ಗ್ರಾಮೀಣ ಬ್ಯಾಂಕಿನಲ್ಲಿ ಸಾಲ ಪಡೆದಿದ್ದರು ಎಂದು ತಿಳಿಸಿದ್ದಾರೆ. ಮೃತರಿಗೆ ಪತ್ನಿ, ಇಬ್ಬರು ಪತ್ರರು ಇದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕರಗಕ್ಕೆ ವಿಶ್ವಪ್ರಸಿದ್ಧಿ ಪಡೆದ ಧರ್ಮರಾಯ ದೇಗುಲ ಚಿನ್ನ ಕಳವು
ಸಿ.ಟಿ.ರವಿ ‘ಪಾಕ್‌ ನಾಲಿಗೆ’ ಹೇಳಿಕೆಗೆ ಸದನವೇ ಬಲಿ