ಕನ್ನಡಪ್ರಭ ವಾರ್ತೆ ದಾವಣಗೆರೆ
ದಾವಣಗೆರೆ ವಿಶ್ವವಿದ್ಯಾನಿಲಯ ವ್ಯವಹಾರ ನಿರ್ವಹಣೆ ಅಧ್ಯಯನ ವಿಭಾಗದ ವತಿಯಿಂದ ಬುಧವಾರ ಏರ್ಪಡಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಲಾವಿದರಿಗೆ ಎಸಿ ಕೊಠಡಿ ಇರುತ್ತದೆ. ಸುರಕ್ಷಿತ ವಾತಾವರಣ ಇರುತ್ತದೆ. ಆದರೆ ರೈತರು ಬಿಸಿಲು ಮಹಿಳೆ, ಚಳಿ, ಗಾಳಿ ಎನ್ನದೇ ಕಷ್ಟಪಟ್ಟು ದುಡಿದು, ಬೆವರು ಸುರಿಸಿ ಸಾವಿರಾರು ಜನರಿಗೆ ಅನ್ನ ನೀಡುತ್ತಾರೆ. ಅವರ ಶ್ರಮಕ್ಕೆ, ಸೇವೆಗೆ ಮನ್ನಣೆ ನೀಡಬೇಕು. ಆದ್ದರಿಂದ ರೈತರನ್ನು ಗೌರವಿಸುವುದಲ್ಲಿ ವಿಶೇಷ ಅರ್ಥವಿದೆ ಎಂದು ತಿಳಿಸಿದರು.
ಸಾಧನೆಗೆ ವಯಸ್ಸು, ಬಡತನ, ಕುಟುಂಬದಲ್ಲಿ ಬೆಂಬಲ ಸಿಗಲ್ಲ, ಹಣ ಇಲ್ಲ ಎಂಬುದಾವುದೂ ಅಡ್ಡಿಯಲ್ಲ. ಸಾಧನೆಗೆ ಛಲ ಇರಬೇಕು, ಮನಸ್ಸು ದೃಢವಾಗಿರಬೇಕು. ಅಪ್ಪ. ಅಮ್ಮ ಮಕ್ಕಳ ಮೇಲಿಟ್ಟಿರುವ ನಂಬಿಕೆ, ವಿಶ್ವಾಸ ಉಳಿಸಿಕೊಂಡು ಬದುಕನ್ನು ರೂಪಿಸಿಕೊಳ್ಳುವ ಸಾಧನೆ ಮಾಡಬೇಕು. ಸಮಸ್ಯೆಗೆ ಸಮಸ್ಯೆಯೇ ಪರಿಹಾರವಲ್ಲ, ಸಾಧನೆಯೇ ಉತ್ತರವಾಗಬೇಕು ಎಂದು ಸಲಹೆ ನೀಡಿದರು.ಮಹಿಳಾ ಉದ್ಯಮಿ ಸರೋಜ ಎನ್.ಪಾಟೀಲ ಮಾತನಾಡಿ, ಕೃಷಿ ಕೇತ್ರದಲ್ಲಿ ಸಾಧನೆ ಮಾಡಲು ಸಾಕಷ್ಟು ಅವಕಾಶಗಳಿವೆ. ಭೂಮಿಯ ರಕ್ಷಣೆಯ ಜೊತೆಗೆ ಬೆಳೆ ಪದ್ಧತಿ, ಮಾರುಕಟ್ಟೆ, ಉತ್ಪಾದನಾ ಕ್ಷೇತ್ರಗಳಲ್ಲಿ ವೈಜ್ಞಾನಿಕ ರೀತಿಯಲ್ಲಿ ಬೆಳೆ ನಿರ್ವಹಿಸಲು ಆದ್ಯತೆ ನೀಡಬೇಕಾಗಿದೆ. ಕೃಷಿ ಕ್ಷೇತ್ರದಲ್ಲಿ ಮಹಿಳೆಯರಿಗೆ ಅತಿ ಹೆಚ್ಚು ಉದ್ಯೋಗ ಅವಕಾಶಗಳಿದ್ದು, ಸಮರ್ಪಕ ರೀತಿಯಲ್ಲಿ ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಕುಲಪತಿ ಪ್ರೊ. ಬಿ.ಡಿ. ಕುಂಬಾರ ಅಧ್ಯಕ್ಷತೆ ವಹಿಸಿದ್ದರು. ತನ್ನಿಂದ ಸಾಧ್ಯವಿಲ್ಲ ಎಂಬ ಮನಸ್ಥಿತಿ ಬಿಟ್ಟು, ಅವಕಾಶವನ್ನೇ ವೇದಿಕೆಯನ್ನಾಗಿ ಮಾಡಿಕೊಂಡು ಮುನ್ನಡೆದಾಗ ಯಶಸ್ಸಿನ ಹಾದಿ ಕಾಣುತ್ತದೆ. ಇದಕ್ಕೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಆದಿತಿ, ಸರೋಜ ಮತ್ತು ಗಾಯಿತ್ರಿ ಅವರ ಸಾಧನೆಯೇ ಎಲ್ಲರಿಗೂ ಮಾದರಿಯಾಗಿದೆ. ಈ ಸಾಧಕರು ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದ್ದಲ್ಲದೆ, ಕಾರ್ಯಕ್ರಮಕ್ಕೆ ಕಳೆಕಟ್ಟಿದ್ದಾರೆ ಎಂದು ಹೇಳಿದರು.
- - -
ಗಂಡು ಮಕ್ಕಳು ಉತ್ತಮವಾಗಿ ಕೆಲಸ ಮಾಡಿ, ಸಂಪಾದಿಸಿ ಕುಟುಂಬವನ್ನು ನಿರ್ವಹಿಸುವ ಜವಾಬ್ದಾರಿ ಹೊತ್ತುಕೊಳ್ಳಬೇಕು. ಅದಕ್ಕೆ ಬೇಕಾದ ಸಿದ್ಧತೆಯನ್ನು ಓದಿನಿಂದಲೋ, ಕೌಶಲ್ಯದಿಂದಲೋ ಮಾಡಿಕೊಳ್ಳಿ. ಮುಂದೆ ಮದುವೆಯಾದಾಗ ಹೆಂಡತಿ ದುಡಿಯದ ಗಂಡನನ್ನು ಒಪ್ಪಿಕೊಳ್ಳಲ್ಲ, ಒದ್ದು ಹೊರಗೆ ಹೋಗುವಳು. ಈಗಿನ ವಾತಾವರಣವೇ ಹಾಗಿದೆ
- - - -5ಕೆಡಿವಿಜಿ 39, 40: