ರಾಗಿ ಖರೀದಿಯ ಬಾಕಿ ಹಣಕ್ಕಾಗಿ ರೈತರ ಮನವಿ

KannadaprabhaNewsNetwork |  
Published : Aug 30, 2025, 01:00 AM IST
29ಎಚ್ಎಸ್ಎನ್13 : ಹೊಳೆನರಸೀಪುರ ತಾ. ಹಳ್ಳಿಮೈಸೂರು ಹೋಬಳಿಯ ಕರವೇ ರೈತ ಘಟಕ ಹಾಗೂ ಯುವಕ ಘಟಕದ ಅಧ್ಯಕ್ಷ ಹಾಗೂ ಸದಸ್ಯರು ರಾಗಿ ಖರೀದಿ ಕೇಂದ್ರಕ್ಕೆ ರಾಗಿ ನೀಡಿದ ರೈತರಿಗೆ ಹಣ ಪಾವತಿ ಮಾಡಿಲ್ಲವೆಂದು ಉಪ ತಹಸೀಲ್ದಾರ್ ರೂಪೇಶ್ ಅವರಿಗೆ ಮನವಿ ಪತ್ರ ನೀಡಿದರು.  | Kannada Prabha

ಸಾರಾಂಶ

ತಾಲೂಕು ಕರವೇ ಯುವ ಘಟಕದ ಅಧ್ಯಕ್ಷ ದಯಾನಂದ ಮಾತನಾಡಿ, ತಾಲೂಕಿನ ತೆರೆದಿದ್ದ ರಾಗಿ ಖರೀದಿ ಕೇಂದ್ರಕ್ಕೆ ರೈತರು ನೀಡಿದ ರಾಗಿಗೆ ಈಗಾಗಲೇ ಹಣ ಪಾವತಿ ಮಾಡಿದ್ದಾರೆ. ಆದರೆ ಹಳ್ಳಿಮೈಸೂರು ಹೋಬಳಿಯ ರೈತರು ನೀಡಿರುವ ರಾಗಿಗೆ ಇನ್ನೂ ಹಣ ಪಾವತಿ ಮಾಡದ ಕಾರಣದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಮುಂಗಾರು ಬೆಳೆಗೆ ಅಗತ್ಯವಾದ ರಸಗೊಬ್ಬರ ಹಾಗೂ ಇತರೆ ಅಗತ್ಯತೆಗಳನ್ನು ಕೊಳ್ಳಲಾಗದೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದ್ದರಿಂದ ರೈತರ ಸಮಸ್ಯೆಯ ತೀವ್ರತೆಯನ್ನು ಅರಿತು ರೈತರು ನೀಡಿದ ರಾಗಿಗೆ ಹಣ ಪಾವತಿಸಲು ಅಗತ್ಯ ಕ್ರಮಕೈಗೊಳ್ಳಬೇಕೆಂದು ತಹಸೀಲ್ದಾರ್‌ ಅನುಪಸ್ಥಿತಿಯಲ್ಲಿ ಉಪ ತಹಸೀಲ್ದಾರ್ ರೂಪೇಶ್ ಅವರಿಗೆ ಮನವಿ ಮಾಡಿದ್ದೇವೆ ಎಂದರು.

ಕನ್ನಡಪ್ರಭ ವಾರ್ತೆ ಹೊಳೆನರಸೀಪುರ

ತಾಲೂಕಿನ ಹಳ್ಳಿಮೈಸೂರು ಹೋಬಳಿಯ ಕರ್ನಾಟಕ ರಕ್ಷಣಾ ವೇದಿಕೆ ರೈತ ಘಟಕ ಹಾಗೂ ಯುವ ಘಟಕದ ಅಧ್ಯಕ್ಷ ಹಾಗೂ ಸದಸ್ಯರು ರಾಗಿ ಖರೀದಿ ಕೇಂದ್ರಕ್ಕೆ ಭೇಟಿ ನೀಡಿ, ನಾಲ್ಕೈದು ತಿಂಗಳಾದರೂ ಸರ್ಕಾರ ರೈತರಿಗೆ ಹಣ ಪಾವತಿ ಮಾಡಿಲ್ಲದ ಕಾರಣ ಉಪ ತಹಸೀಲ್ದಾರ್‌ ರೂಪೇಶ್ ಅವರಿಗೆ ಮನವಿ ಪತ್ರ ನೀಡಿದರು.

ತಾಲೂಕು ಕರವೇ ಯುವ ಘಟಕದ ಅಧ್ಯಕ್ಷ ದಯಾನಂದ ಮಾತನಾಡಿ, ತಾಲೂಕಿನ ತೆರೆದಿದ್ದ ರಾಗಿ ಖರೀದಿ ಕೇಂದ್ರಕ್ಕೆ ರೈತರು ನೀಡಿದ ರಾಗಿಗೆ ಈಗಾಗಲೇ ಹಣ ಪಾವತಿ ಮಾಡಿದ್ದಾರೆ. ಆದರೆ ಹಳ್ಳಿಮೈಸೂರು ಹೋಬಳಿಯ ರೈತರು ನೀಡಿರುವ ರಾಗಿಗೆ ಇನ್ನೂ ಹಣ ಪಾವತಿ ಮಾಡದ ಕಾರಣದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಮುಂಗಾರು ಬೆಳೆಗೆ ಅಗತ್ಯವಾದ ರಸಗೊಬ್ಬರ ಹಾಗೂ ಇತರೆ ಅಗತ್ಯತೆಗಳನ್ನು ಕೊಳ್ಳಲಾಗದೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದ್ದರಿಂದ ರೈತರ ಸಮಸ್ಯೆಯ ತೀವ್ರತೆಯನ್ನು ಅರಿತು ರೈತರು ನೀಡಿದ ರಾಗಿಗೆ ಹಣ ಪಾವತಿಸಲು ಅಗತ್ಯ ಕ್ರಮಕೈಗೊಳ್ಳಬೇಕೆಂದು ತಹಸೀಲ್ದಾರ್‌ ಅನುಪಸ್ಥಿತಿಯಲ್ಲಿ ಉಪ ತಹಸೀಲ್ದಾರ್ ರೂಪೇಶ್ ಅವರಿಗೆ ಮನವಿ ಮಾಡಿದ್ದೇವೆ ಎಂದರು.

ತಾಲೂಕಿನ ಹಳ್ಳಿಮೈಸೂರು ಹೋಬಳಿ ಕರ್ನಾಟಕ ರಕ್ಷಣಾ ವೇದಿಕೆ ರೈತ ಘಟಕ ಅಧ್ಯಕ್ಷ ಬಾಲು ಹಾಗೂ ಯುವಕ ಘಟಕದ ಅಧ್ಯಕ್ಷ ಭರತ್, ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಯ್ಯಪ್ಪನ ಮಾಲೆ ಧರಿಸಿದ ಬಾಲಕನ ಮೇಲೆ ಶಿಕ್ಷಕ ಹಲ್ಲೆ!
ತಂದೆಗೆ ಕಿರುಕುಳ ನೀಡದಂತೆ ಚೈತ್ರಾ ಕುಂದಾಪುರಗೆ ಆದೇಶ