ಶಾಸಕ ಗಣೇಶ್‌ ಪ್ರಸಾದ್‌ ಗೆ ಕೃತಜ್ಞತೆ ಸಲ್ಲಿಸಿದ ಮಲೆಯೂರು ಸುತ್ತ ಮುತ್ತಲಿನ ರೈತರು

KannadaprabhaNewsNetwork |  
Published : Apr 19, 2026, 01:30 AM IST
ಡಿಸ್ ಪ್ಲೇ ಚೆನ್ನಾಗಿರಲಿ ಜಾಹೀರಾತು ನೀಡುತ್ತಾರೆ | Kannada Prabha

ಸಾರಾಂಶ

ಮೈಸೂರು ನಗರದ ದೇವಗೀತಾ ನಿವಾಸದಲ್ಲಿ ಶನಿವಾರ ಬೆಳಗ್ಗೆ ಮಲೆಯೂರು ಗ್ರಾಮದ ಸುತ್ತ ಮುತ್ತಲಿನ ರೈತರು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಭೇಟಿ ಮಾಡಿ ಸನ್ಮಾನಿಸಿ ಅಭಿನಂದಿಸಿದರು.

ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ

ತಾಲೂಕಿನ ೧೧೦ ಕೆರೆ- ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯ ಶಂಕುಸ್ಥಾಪನೆ ಏಪ್ರಿಲ್ ೨೧ರಂದು ಗುಂಡ್ಲುಪೇಟೆಯಲ್ಲಿ ನಡೆಯಲು ಕಾರಣರಾದ ಗುಂಡ್ಲುಪೇಟೆ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ರನ್ನು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಲೆಯೂರು ಗ್ರಾಮದ ಸುತ್ತ ಮುತ್ತಲಿನ ರೈತರು ಅಭಿನಂದಿಸಿದರು.

ಮೈಸೂರು ನಗರದ ದೇವಗೀತಾ ನಿವಾಸದಲ್ಲಿ ಶನಿವಾರ ಬೆಳಗ್ಗೆ ಮಲೆಯೂರು ಗ್ರಾಮದ ಸುತ್ತ ಮುತ್ತಲಿನ ರೈತರು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಭೇಟಿ ಮಾಡಿ ಸನ್ಮಾನಿಸಿ ಅಭಿನಂದಿಸಿದರು.

೧೦೦ ಕೆರೆ, ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಲೆಯೂರು ಗ್ರಾಮದ ಸಮೀಪ ಕನಕಗಿರಿ ಕ್ಷೇತ್ರದ ಬಳಿಯ ಕೆರೆ ಹಾಗೂ ಶ್ರೀರಾಂಪುರ ಹೊಸಕೆರೆಗೆ ನೀರು ತುಂಬಿಸಿ ಎಂದು ರೈತರು ಶಾಸಕರಲ್ಲಿ ಮನವಿ ಮಾಡಿದರು.

ಈ ಸಂಬಂಧ ಅಧಿಕಾರಿಗಳೊಂದಿಗೆ ಚರ್ಚಿಸಿ ಕನಕಗಿರಿ ಕ್ಷೇತ್ರದ ಬಳಿಯ ಕೆರೆ ಹಾಗೂ ಶ್ರೀರಾಂಪುರ ಹೊಸಕೆರೆಗೆ ನೀರು ತುಂಬಿಸುವ ಭರವಸೆಯನ್ನು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ರೈತರಿಗೆ ನೀಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೂರು ಕೊಟ್ಟವಳ ವರಿಸಲು ವ್ಯಕ್ತಿಗೆ ಪೊಲೀಸ್‌ ಬೆದರಿಕೆ
ಕಾಳಸಂತೆಯಲ್ಲಿ ಐಪಿಎಲ್ ಟಿಕೆಟ್‌:ಕೆಎಸ್‌ಸಿಎ ಸದಸ್ಯನ ವಿಚಾರಣೆ