ಕನ್ನಡಪ್ರಭ ವಾರ್ತೆ ಮೈಸೂರು
ರೈತರ ಬಳಿ ಇದ್ದ ಪ್ರತಿಕೃತಿ ವಶಕ್ಕೆ ಪಡೆಯಲು ಪೊಲೀಸರು ಮುಂದಾದಾಗ ಆಕ್ರೋಶ ವ್ಯಕ್ತಪಡಿಸಿದ ರೈತರು ಬೆಂಕಿ ಹಚ್ಚಿದರು. ತಕ್ಷಣವೇ ಪೊಲೀಸರು ತಳ್ಳಿ ಪ್ರತಿಕೃತಿ ವಶಕ್ಕೆ ಪಡೆದರು.
ದಲೈವಾಲಾ ದೇಶದ ರೈತರಿಗಾಗಿ ಪ್ರಾಣ ಕಳೆದುಕೊಳ್ಳಲು ಸಿದ್ಧ ಎಂದು 49 ದಿನದಿಂದ ಸಹಸ್ರಾರು ರೈತರ ಸಮ್ಮುಖದಲ್ಲಿ ಉಪವಾಸ ನಡೆಸುತ್ತಿದ್ದರೂ ಕೇಂದ್ರ ಸರ್ಕಾರ ನಿರ್ಲಕ್ಷ್ಯ ಮಾಡಿರುವುದು ಖಂಡನೀಯ. ರೈತ ವಿರೋಧಿ ಧೋರಣೆಗೆ ಧಿಕ್ಕಾರ ಎಂದು ಕೂಗಿದರು.ನಗರದ ಗನ್ ಹೌಸ್ ವೃತ್ತದಲ್ಲಿ ನೂರಾರು ರೈತರು ಧರಣಿಗೆ ಮುಂದಾದಾಗ ಪೊಲೀಸರು ವಶಕ್ಕೆ ಪಡೆದರು.
ಕೇಂದ್ರ ಸರ್ಕಾರ ರೈತ ಚಳವಳಿಯನ್ನು ದುರ್ಬಲಗೊಳಿಸಲು ಧಿಕ್ಕು ತಪ್ಪಿಸಲು ಪ್ರಯತ್ನಿಸುತ್ತಿದೆ. ಇದಕ್ಕೆ ಯಾರು ಸೊಪ್ಪು ಹಾಕುತ್ತಿಲ್ಲ. ಚಳವಳಿಗಾರರ ಬಗ್ಗೆ ತಪ್ಪು ಕಲ್ಪನೆ ಮೂಡಿಸುತ್ತಿದೆ. ಇದು ಸರಿಯಾದ ಬೆಳವಣಿಗೆ ಅಲ್ಲ. ಇದೇ ಚಳವಳಿಯಲ್ಲಿ ಪೊಲೀಸರ ಗುಂಡಿಗೆ ಬಲಿಯಾದ ಶುಭಕರಣ ಸಿಂಗ್ ಕುಟುಂಬಕ್ಕೆ ಸರ್ಕಾರ ಒಂದು ಕೂಟಿ ರು.ಪರಿಹಾರ ನೀಡಲು ಹೋಗಿತ್ತು. ಆದರೆ, ಅವರ ಕುಟುಂಬ ಪರಿಹಾರ ಬೇಡ ಎಂದು ತಿರಸ್ಕರಿಸಿ, ಮೊದಲು ರೈತರ ಸಮಸ್ಯೆ ಬಗೆಹರಿಸಿ ಎಂದು ಸರ್ಕಾರಕ್ಕೆ ಎಚ್ಚರಿಸಿತು. ಇದು ರೈತರ ಚಳಿವಳಿಯ ಬದ್ಧತೆಯನ್ನು ಎತ್ತಿ ತೋರಿಸಿದೆ ಎಂದರು.
ರೈತರ ಹೋರಾಟದ ಸಮಸ್ಯೆಗಳ ಬಗ್ಗೆ ಪರಿಹಾರ ಕ್ರಮ ಕೈಗೊಳ್ಳಲು ಸುಪ್ರೀಂ ಕೋರ್ಟ್ ನೇಮಿಸಿದ್ದ ಹೈ ಕೋರ್ಟ್ ನ್ಯಾಯಾಧೀಶರ ಅಧ್ಯಕ್ಷತೆಯ ನವಾಬಸಿಂಗ್ ಸಮಿತಿ ಮಧ್ಯಂತರ ವರದಿಯನ್ನು ನ.22 ರಂದು ನೀಡಿದೆ. ರೈತರ ಕೃಷಿ ಉತ್ಪನ್ನಗಳಿಗೆ ಎಂ.ಎಸ್.ಪಿ ಖಾತ್ರಿ ವ್ಯವಸ್ಥೆ ಜಾರಿ ಮಾಡುವುದು ಅತ್ಯವಶ್ಯಕ ಎಂದು ಸಮಿತಿ ವರದಿ ನೀಡಿದ್ದರೂ ಕೂಡ ಕೇಂದ್ರ ಸರ್ಕಾರ ಏನು ಪ್ರತಿಕ್ರಿಯೆ ನೀಡುತ್ತಿಲ್ಲ. ಇದರರ್ಥ ಏನು ಎಂದು ಅವರು ಪ್ರಶ್ನಿಸಿದರು.
ಪ್ರತಿಭಟನೆಯಲ್ಲಿ ಪಿ.ಸೋಮಶೇಖರ್, ಬರಡನಪುರ ನಾಗರಾಜ್, ಕಿರಗಸೂರ್ ಶಂಕರ್, ನೀಲಕಂಠಪ್ಪ, ಕೆ.ಸಿದ್ದೇಶ್, ವಿಜಯೇಂದ್ರ ಪೈ, ವೆಂಕಟೇಶ್, ಪರಶಿವಮೂರ್ತಿ, ಕೆಂಡಗಣ್ಣಪ್ಪ, ಮಹದೇವಸ್ವಾಮಿ, ಪ್ರದೀಪ್, ಮಂಜುನಾಥ್, ಬಸವರಾಜು, ಹಂಪಾಪುರ ರಾಜೇಶ್, ವರಕೋಡು ನಾಗೇಶ್, ಮಂಜುನಾಥ್, ಕಾಟೂರು ಮಹದೇವಸ್ವಾಮಿ, ನಾಗೇಶ್, ಶ್ರೀಕಂಠ, ಗೌರಿಶಂಕರ್, ಪಿ.ರಾಜು, ಕೋಟೆ ಸುನಿಲ್, ವಾಜಮಂಗಲ ನಾಗೇಂದ್ರ, ಮಾಲಿಂಗ ನಾಯಕ, ಚಾಮರಾಜು, ಧನಗಳ್ಳಿ ಕೆಂಡಗಣ್ಣ ಸ್ವಾಮಿ, ಚುಂಚುರಾಯನ ಹುಂಡಿ ಗಿರೀಶ್, ಕೂಡನಹಳ್ಳಿ ಸೋಮಣ್ಣ, ಪ್ರಕಾಶ್ ದೇವನೂರು ಮಹದೇವಸ್ವಾಮಿ, ತಗಡೂರು ಮಾದೇವಸ್ವಾಮಿ ಮೊದಲಾದವರು ಇದ್ದರು.