ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸಲು ರೈತ ಸಂಘ ಆಗ್ರಹ

KannadaprabhaNewsNetwork |  
Published : Sep 10, 2026, 01:30 AM IST
ಜಿಲ್ಲೆಯ ಕೆರೆ-ಕಟ್ಟೆಗಳಿಗೆ ನೀರು ತುಂಬಿಸಲು ಒತ್ತಾಯಿಸಿ ಧರಣಿ | Kannada Prabha

ಸಾರಾಂಶ

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ, ಜಿಲ್ಲೆಯ ಕೆರೆ-ಕಟ್ಟೆಗಳಿಗೆ ನೀರು ತುಂಬಿಸಲು ಒತ್ತಾಯಿಸಿ ರಾಜ್ಯ ಸರ್ಕಾರದ ವಿರುದ್ಧ ಕನ್ನಡಪರ ಸಂಘಟನೆಗಳ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ, ಜಿಲ್ಲೆಯ ಕೆರೆ-ಕಟ್ಟೆಗಳಿಗೆ ನೀರು ತುಂಬಿಸಲು ಒತ್ತಾಯಿಸಿ ರಾಜ್ಯ ಸರ್ಕಾರದ ವಿರುದ್ಧ ಕನ್ನಡಪರ ಸಂಘಟನೆಗಳ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.

ನಗರದ ಜಿಲ್ಲಾಡಳಿತ ಭವನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಒಣಗಿದ ಬೆಳೆ ಹಾಗೂ ಗುರಿಗಳನ್ನು ಹಿಡಿದು ಕೊಂಡು ಧರಣಿ ನಡೆಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರ ಹಾಗೂ ತಮಿಳುನಾಡಿನ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡಪರ ಸಂಘಟನೆಯ ಮುಖಂಡ ಚಾ.ರಂ.ಶ್ರೀನಿವಾಸ್ ಗೌಡ ಮಾತನಾಡಿ, ರಾಜ್ಯದಲ್ಲಿ ಬರದ ವಾತಾವರಣ ನಿರ್ಮಾಣವಾಗಿದ್ದು, ರೈತಾಪಿ ವರ್ಗ ಸಾಕಷ್ಟು ಸಂಕಷ್ಟವನ್ನು ಎದುರಿಸುತ್ತಿದೆ. ರಾಜ್ಯದ ಕೆರೆ-ಕಟ್ಟೆಗಳು ನೀರು ಇಲ್ಲದೆ ಬರಿದಾಗಿದೆ. ರಾಜ್ಯ ಸರ್ಕಾರ ನಾಡಿನ ರೈತರು ಹಾಗೂ ಸಾರ್ವಜನಿಕರ ಹಿತವನ್ನು ಮರೆತು ತಮಿಳುನಾಡಿಗೆ ನೀರು ಬಿಡಲು ಮುಂದಾಗಿರುವುದು ಅತ್ಯಂತ ಖಂಡನೀಯ ಎಂದರು.

ಜಿಲ್ಲೆಯಲ್ಲಿರುವ ಕೆಲವು ಕೆರೆಗಳಿಗೆ ನಾಟಕೀಯ ರೀತಿಯಲ್ಲಿ ನೀರು ಬಿಡಲಾಗುತ್ತಿದೆ. ಕೆರೆಗಳಿಗೆ ನೀರು ತುಂಬಿಸಲು ಒಂದು ವಾರದ ಗಡುವು ನೀಡುತ್ತೇವೆ. ಇಲ್ಲವಾದರೇ ಮುಂದಿನ ದಿನಗಳಲ್ಲಿ ಚಾಮರಾಜನಗರ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಮಾಜ ಸೇವಕ ಶ್ರೀನಿಧಿ ಕುದರ್, ಹೋರಾಟಗಾರರಾದ ಪಣ್ಯದಹುಂಡಿ ರಾಜು, ಅಮಚವಾಡಿ ಶಿವು, ಮುತ್ತಿಗೆ ಗೋವಿಂದರಾಜು, ನಿಜಧ್ವನಿ ಗೋವಿಂದರಾಜು, ರಾಚಪ್ಪ, ಕುಮಾರ್, ಶಿವಣ್ಣ ಹೊಸೂರು, ಚಾ.ಸಿ.ಸೋಮನಾಯಕ, ಲಿಂಗರಾಜು, ಜಗದೀಶ್, ಶಿವು, ವೀರಭದ್ರ, ಶ್ರೀಕಾಂತ್, ಚಾ.ಸಿ.ಸಿದ್ದರಾಜು ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬುದ್ಧ ಮನುಕುಲಕ್ಕೆ ನೀಡಿದ ಸಂದೇಶ ಕರುಣೆ-ಅಹಿಂಸೆ: ಡಾ. ಬೂವನಹಳ್ಳಿ ನಾಗರಾಜು
ಸೋಲೂರು ಹೋಬಳಿಯ ಸಮಗ್ರ ಅಭಿವೃದ್ದಿ: ಶಾಸಕ ಶ್ರೀನಿವಾಸ್‌