ಬಿಪಿಎಲ್ ಕಾರ್ಡ್ ರದ್ದು: ರೈತ ಸಂಘ ವಿರೋಧ

KannadaprabhaNewsNetwork |  
Published : Sep 26, 2025, 01:00 AM IST
ಕೆ ಕೆ ಪಿ ಸುದ್ದಿ 02: | Kannada Prabha

ಸಾರಾಂಶ

ಕನಕಪುರ: ನಾವು ಬಡವರ ಪರ ಪಕ್ಷ ಎಂದು ಅಧಿಕಾರಕ್ಕೆ ಬಂದ ರಾಜ್ಯ ಸರ್ಕಾರ ಬಡವರ ಪಡಿತರ ಆಹಾರ ಚೀಟಿಯನ್ನು ಅವೈಜ್ಞಾನಿಕವಾಗಿ ರದ್ದು ಮಾಡಿ, ಬಡವರ ಅನ್ನ ಕಿತ್ತುಕೊಳ್ಳುತ್ತಿದೆ ಎಂದು ರೈತ ಸಂಘದ ರಾಜ್ಯ ಸಂಚಾಲಕ ಚೀಲೂರು ಮುನಿರಾಜು ಆರೋಪಿಸಿದರು.

ಕನಕಪುರ: ನಾವು ಬಡವರ ಪರ ಪಕ್ಷ ಎಂದು ಅಧಿಕಾರಕ್ಕೆ ಬಂದ ರಾಜ್ಯ ಸರ್ಕಾರ ಬಡವರ ಪಡಿತರ ಆಹಾರ ಚೀಟಿಯನ್ನು ಅವೈಜ್ಞಾನಿಕವಾಗಿ ರದ್ದು ಮಾಡಿ, ಬಡವರ ಅನ್ನ ಕಿತ್ತುಕೊಳ್ಳುತ್ತಿದೆ ಎಂದು ರೈತ ಸಂಘದ ರಾಜ್ಯ ಸಂಚಾಲಕ ಚೀಲೂರು ಮುನಿರಾಜು ಆರೋಪಿಸಿದರು. ಬಿಪಿಎಲ್ ಕಾರ್ಡ್ ರದ್ದು ಖಂಡಿಸಿ, ರೈತರ ಬಿಪಿಎಲ್ ಕಾರ್ಡ್ ಹಿಂತಿರುಗಿಸುವಂತೆ ಒತ್ತಾಯಿಸಿ ತಾಲೂಕು ಆಡಳಿತದ ಮೂಲಕ ಗುರುವಾರ ರೈತ ಸಂಘದ ನೇತೃತ್ವದಲ್ಲಿ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಂದ ಅಧಿಕಾರಕ್ಕೆ ಬಂದಿದೆ. ಗ್ಯಾರಂಟಿ ಯೋಜನೆಯಿಂದ ಬರಿದಾಗಿರುವ ಸರ್ಕಾರವನ್ನು ಉಳಿಸಿಕೊಳ್ಳಲು ಈಗ ಬಡವರ ಬಿಪಿಎಲ್ ಕಾರ್ಡನ್ನು ಕಿತ್ತು ಹಾಕುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಬಿಪಿಎಲ್ ಕಾರ್ಡ್‌ನಿಂದ ಲಕ್ಷಾಂತರ ಕುಟುಂಬಗಳು ಜೀವನ ನಡೆಸುತ್ತಿವೆ. ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿವೆ. ಆರೋಗ್ಯ ಸೇವೆ, ಮಕ್ಕಳ ಶಿಕ್ಷಣ, ವಿದ್ಯಾರ್ಥಿ ವೇತನ ಸೇರಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಹಲವು ರೀತಿಯ ಸವಲತ್ತುಗಳು ಬಿಪಿಎಲ್ ಕಾರ್ಡ್‌ನಿಂದ ಸಿಗುತ್ತಿವೆ. ಸಿದ್ದರಾಮಯ್ಯ ಸರ್ಕಾರ ರಾಜ್ಯದಲ್ಲಿ 12 ಲಕ್ಷ ಬಿಪಿಎಲ್ ಕಾರ್ಡ ಅನರ್ಹ ಗೊಳಿಸಿದೆ. 12 ಲಕ್ಷ ಕುಟುಂಬಗಳು ಸಿದ್ದರಾಮಯ್ಯನ ಸರ್ಕಾರ ಗ್ಯಾರಂಟಿ ಯೋಜನೆ ಘೋಷಣೆ ಮಾಡಿದ ಮೇಲೆ ಬಿಪಿಎಲ್ ಕಾರ್ಡ್ ಮಾಡಿಸಿಲ್ಲ. ಹತ್ತಾರು ವರ್ಷಗಳಿಂದ ಬಿಪಿಎಲ್ ಕಾರ್ಡದಾರರಾಗಿ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿದ್ದರೂ ಏಕಾಏಕಿ ಅವರ ಬಿಪಿಎಲ್ ಕಾರ್ಡ್ ರದ್ದು ಮಾಡಿರುವುದು ಸರಿಯಲ್ಲ ಎಂದು ಕಿಡಿಕಾರಿದರು.

ಪ್ರಗತಿಪರ ಸಂಘಟನೆಯ ಕುಮಾರಸ್ವಾಮಿ, ಡಿ.ಕೆ.ರಾಮಕೃಷ್ಣ ಮಾತನಾಡಿ ಬಡವರು ಮಕ್ಕಳ ಶಿಕ್ಷಣಕ್ಕಾಗಿ ಸಾಲ ಪಡೆಯಲು ಐಟಿಆರ್ ಮಾಡಿಸುತ್ತಾರೆ. ಸಣ್ಣಪುಟ್ಟ ವ್ಯವಹಾರ ನಡೆಸಲು ಜಿಎಸ್‌ಟಿ ಮಾಡಿಸುತ್ತಾರೆ. ಅದನ್ನೇ ನೆಪವಾಗಿಸಿಕೊಂಡು ಸರ್ಕಾರ ಬಡವರ ಬಿಪಿಎಲ್ ಕಾರ್ಡ್ ರದ್ದು ಮಾಡುವುದು ವೈಜ್ಞಾನಿಕವಾಗಿದ್ದು ಕೂಡಲೇ ಬಿಪಿಎಲ್ ಕಾರ್ಡಗಳನ್ನು ಹಿಂತಿರುಗಿಸಬೇಕೆಂದು ಆಗ್ರಹಿಸಿದರು.

ವಿವಿಧ ಸಂಘಟನೆ ಮುಖಂಡರಾದ ಗಬ್ಬಾಡಿ ಕಾಳೇಗೌಡ, ಕನ್ನಡ ಭಾಸ್ಕರ್, ಸ್ಟುಡಿಯೋ ಚಂದ್ರು, ಶೇಖರ್, ಸುವರ್ಣಮ್ಮ, ಶಿವಸ್ವಾಮಿ ಉಪಸ್ಥಿತರಿದ್ದರು. ಆಹಾರ ಇಲಾಖೆ ವಿರುದ್ಧ ಘೋಷಣೆ ಕೂಗಿ ಗ್ರೇಡ್ -2 ತಹಸಿಲ್ದಾರ್ ಮನೋಹರ್‌ಗೆ ಮನವಿ ಪತ್ರ ಸಲ್ಲಿಸಿದರು.

ಕೆ ಕೆ ಪಿ ಸುದ್ದಿ 02:

ರದ್ದು ಮಾಡಿರುವ ಬಿಪಿಎಲ್‌ ಕಾರ್ಡ್‌ಗಳನ್ನು ಹಿಂತಿರುಗಿಸಬೇಕೆಂದು ಆಗ್ರಹಿಸಿ ರೈತ ಸಂಘದ ರಾಜ್ಯ ಸಂಚಾಲಕ ಚೀಲೂರು ಮುನಿರಾಜು ನೇತೃತ್ವದಲ್ಲಿ ಗ್ರೇಡ್ -2 ತಹಸಿಲ್ದಾರ್ ಮನೋಹರ್‌ಗೆ ಮನವಿ ಪತ್ರ ಸಲ್ಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ