ಅವೈಜ್ಞಾನಿಕವಾಗಿ ಸೇರಿಸಿರುವ ಅರಣ್ಯ ಪ್ರದೇಶ ರದ್ದುಗೊಳಿಸಿ ಪುನಃ ಸರ್ವೆಗೆ ರೈತ ಸಂಘ ವಿನಂತಿ

KannadaprabhaNewsNetwork |  
Published : Mar 07, 2026, 12:45 AM IST
ಅವೈಜ್ಞಾನಿಕವಾಗಿ ಸೇರಿಸಿರುವ ಪರಿಭಾವಿತ ಅರಣ್ಯ ಪ್ರದೇಶವನ್ನು ರದ್ದುಗೊಳಿಸಿ             ಪುನಃ ಸರ್ವೆ ಮಾಡಿಸಿಕೊಡುವ ಬಗ್ಗೆ ವಿನಂತಿ ಪತ್ರ ಸಲ್ಲಿಕೆ | Kannada Prabha

ಸಾರಾಂಶ

ತರೀಕೆರೆಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ತರೀಕೆರೆ ವಿಧಾನ ಸಭಾ ಕ್ಷೇತ್ರದಿಂದ ಗುರುವಾರ, ತರೀಕೆರೆ ತಾಲೂಕಿನಲ್ಲಿ ಅವೈಜ್ಞಾನಿಕವಾಗಿ ಸೇರಿಸಿರುವ ಪರಿಭಾವಿತ ಅರಣ್ಯ ಪ್ರದೇಶ ರದ್ದುಗೊಳಿಸಿ ಪುನಃ ಸರ್ವೆ ಮಾಡಿಸುವ ಬಗ್ಗೆ ತರೀಕೆರೆ ಉಪ ವಿಭಾಗಾಧಿಕಾರಿಗಳಿಗೆ ಪತ್ರ ಸಲ್ಲಿಸಿ ವಿನಂತಿಸಿದೆ.

ಕನ್ನಡಪ್ರಭ ವಾರ್ತೆ, ತರೀಕೆರೆ

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ತರೀಕೆರೆ ವಿಧಾನ ಸಭಾ ಕ್ಷೇತ್ರದಿಂದ ಗುರುವಾರ, ತರೀಕೆರೆ ತಾಲೂಕಿನಲ್ಲಿ ಅವೈಜ್ಞಾನಿಕವಾಗಿ ಸೇರಿಸಿರುವ ಪರಿಭಾವಿತ ಅರಣ್ಯ ಪ್ರದೇಶ ರದ್ದುಗೊಳಿಸಿ ಪುನಃ ಸರ್ವೆ ಮಾಡಿಸುವ ಬಗ್ಗೆ ತರೀಕೆರೆ ಉಪ ವಿಭಾಗಾಧಿಕಾರಿಗಳಿಗೆ ಪತ್ರ ಸಲ್ಲಿಸಿ ವಿನಂತಿಸಿದೆ.ತರೀಕೆರೆ ತಾಲೂಕಿನ ಹಲುವಾರು ಕಡೆ ರೈತರು ಸುಮಾರು 50-60 ವರ್ಷಗಳಿಂದ ಸಾಗುವಳಿ ಚೀಟಿ ಪಡೆದು ಸಾಗುವಳಿ ಮಾಡಿಕೊಂಡು ಬೆಳೆ ಬೆಳೆದುಕೊಂಡು ಪಹಣಿ ಕೂಡ ಹೊಂದಿದ್ದಾರೆ. ಆದರೆ ಅರಣ್ಯ ಇಲಾಖೆಯವರು ಕಂದಾಯ ಇಲಾಖೆ ಸಾಗುವಳಿ ನಕ್ಷೆ ಪಡೆಯದೆ ಕಂದಾಯ ಭೂಮಿಯನ್ನು ಅವೈಜ್ಞಾನಿಕವಾಗಿ ಸರ್ವೆ ಮಾಡಿ ರೈತರ ಅನಭವದಲ್ಲಿರುವ ಜಮೀನುಗಳನ್ನು ಪರಿಭಾವಿತ ಅರಣ್ಯ ಪ್ರದೇಶವೆಂದು ಘೋಷಿಸಿರುತ್ತಾರೆ.

ಸಾಗುವಳಿ ಮಾಡುತ್ತಿರುವ ಹಾಗೂ ಅನುಭವದಲ್ಲಿರುವ ರೈತರು ಫೋಡಿ ದುರಸ್ತಿ ಮಾಡಿಸಲು ತರೀಕೆರೆ ಭೂನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಿದರೆ. ಅವರು ಅರಣ್ಯ ಇಲಾಖೆ ಅನುಮತಿ ಕೇಳುತ್ತಿದ್ದಾರೆ. ಹಾಗಾಗಿ ದಯಮಾಡಿ ಕೂಡಲೇ ಅರಣ್ಯ ಇಲಾಖೆಯವರು ಅವೈಜ್ಞಾನಿಕವಾಗಿ ಸರ್ವೆ ಮಾಡಿ ಪರಿಭಾವಿತ ಅರಣ್ಯ ಪ್ರದೇಶಕ್ಕೆ ಸೇರಿಸಿರುವ ನಮ್ಮ ಅನುಭವದಲ್ಲಿರುವ ಮತ್ತು ಸಾಗುವಳಿ ಪತ್ರ ಪಡೆದ ಎಲ್ಲಾ ರೈತರ ಜಮೀನನ್ನು ಪುನಃ ನಿಷ್ಪಕ್ಷಪಾ ಸರ್ವೆ ಮಾಡಿಸಿ ಪರಿಭಾವಿತ ಅರಣ್ಯ ಪ್ರದೇಶಕ್ಕೆ ಸೇರಿಸಿರುವ ಜಮೀನು ಕೈಬಿಟ್ಟು ರೈತರಿಗೆ ಪೋಡಿ ಮತ್ತು ದುರಸ್ತಿ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಬೇಕಾಗಿ ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇವೆ.ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ತರೀಕೆರೆ ವಿಧಾನ ಸಭಾ ಕ್ಷೇತ್ರ ದರ್ಶನ್ ಕೆ.ವಿ. ಜಿಲ್ಲಾಧ್ಯಕ್ಷ ತಿಪ್ಪೇಶ್, ಕಾರ್ಯಾಧ್ಯಕ್ಷ ದೇವರಾಜ್ ಟಿ.ಎಸ್.ರಂಗನೇಹಳ್ಳಿ ಆನಂದ್, ವಿನೋದ್ ಕೆಂಚಾಪುರ, ಶರತ್, ಮೋಹನ್, ರಂಜಿತ್, ಕಿರಣ್, ಯಶವಂತ್, ಜೋಸೆಫ್, ಉಮೇಶ್ ಭಾಗವಹಿಸಿದ್ದರು,5ಕೆಟಿಅರ್.ಕೆ.1ಃ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ತರೀಕೆರೆ ವಿಧಾನ ಸಭಾ ಕ್ಷೇತ್ರ ವತಿಯಿಂದ ಉಪ ವಿಭಾಗಾಧಿಕಾರಿಗಳಿಗೆ ವಿನಂತಿ ಪತ್ರ ಸಲ್ಲಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯುಪಿಎಸ್‌ಸಿ ಪರೀಕ್ಷೆಯಲ್ಲಿ ಬಳ್ಳಾರಿಯ ಅನಿರುದ್ಧ ಕಟ್ಟಿಮನಿಗೆ 786ನೇ ರ‍್ಯಾಂಕ್‌
ವಿದ್ಯೆ ಯಾರೂ ಕದಿಯಲಾಗದ ಆಸ್ತಿ