ಪಿಎಂ ಕಿಸಾನ್ ಸಮ್ಮಾನ್ ನಿಧಿಯಿಂದ ರೈತರಿಗೆ ಅನುಕೂಲ: ಶಾಸಕ ಜನಾರ್ದನ ರೆಡ್ಡಿ

KannadaprabhaNewsNetwork |  
Published : Jun 21, 2024, 01:07 AM IST
19 ಝಇೆVಅಅ ಝಇ10 | Kannada Prabha

ಸಾರಾಂಶ

ಪಿಎಂ ಕಿಸಾನ್ ಸಮ್ಮಾನ್ ನಿಧಿಯ ಯೋಜನೆಯಿಂದ ರೈತರಿಗೆ ಅನುಕೂಲವಾಗಿದೆ.

ಕನ್ನಡಪ್ರಭ ವಾರ್ತೆ ಗಂಗಾವತಿ

ಪಿಎಂ ಕಿಸಾನ್ ಸಮ್ಮಾನ್ ನಿಧಿಯ ಯೋಜನೆಯಿಂದ ರೈತರಿಗೆ ಅನುಕೂಲವಾಗಿದೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು.

ಇಲ್ಲಿಯ ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರದಲ್ಲಿ ನಡೆದ ಪ್ರಧಾನಮಂತ್ರಿಗಳ ಕಿಸಾನ್ ಸಮ್ಮಾನ್ ನಿಧಿಯ 17ನೇ ಕಂತಿನ ಹಣವನ್ನು ನೇರವಾಗಿ ರೈತರ ಖಾತೆಗಳಿಗೆ ಜಮಾ ಮಾಡುವ ಮತ್ತು ಕೃಷಿ ಸಖಿಯರಿಗೆ ಪ್ರಮಾಣಪತ್ರ ವಿತರಿಸುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪಿಎಂ ಕಿಸಾನ್ ಸಮ್ಮಾನ್ ನಿಧಿಯು ಕೇಂದ್ರ ಸರ್ಕಾರದ ಉತ್ತಮ ಯೋಜನೆಯಾಗಿದ್ದು, ಜಿಲ್ಲೆಯ ಗಂಗಾವತಿಯ 15376 ರೈತರು ₹52 ಕೋಟಿಯಷ್ಟು ಪ್ರಯೋಜನ ಪಡೆದಿದ್ದಾರೆ. ದೇಶದಲ್ಲಿ 11 ಕೋಟಿಗೂ ಹೆಚ್ಚು ರೈತರು ಇದರ ಸದುಪಯೋಗ ಪಡೆದಿದ್ದಾರೆ. ಗ್ರಾಮೀಣ ಭಾಗದಲ್ಲಿ ಕೃಷಿ ಮತ್ತು ಪಶು ಸಖಿಯರು ಉತ್ತಮ ಕಾರ್ಯನಿರ್ವಹಿಸುತ್ತಿದ್ದು, ಕೃಷಿಕರ ಉನ್ನತಿಗೆ ಶ್ರಮಿಸಬೇಕೆಂದು ತಿಳಿಸಿದರು. ಡ್ರೋಣ್ ಸಖಿಯರು ಡ್ರೋಣ್ ತಂತ್ರಜ್ಞಾನವನ್ನು ರೈತರಿಗೆ ಇನ್ನು ಹೆಚ್ಚಿನ ರೀತಿಯಲ್ಲಿ ತಲುಪಿಸಬೇಕೆಂದು ತಿಳಿಸಿದರು.

ಮುಖ್ಯ ಅತಿಥಿಯಾಗಿದ್ದ ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ ಮಾತನಾಡಿ, ಪ್ರಧಾನಮಂತ್ರಿಗಳು ಗ್ರಾಮೀಣ ಭಾಗದ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಿದ್ದು, 10ನೇ ತರಗತಿ ಪಾಸಾದ ಯುವತಿಯವರಿಗೆ ಗ್ರಾಮೀಣ ಪ್ರದೇಶದಲ್ಲಿ ಪಶು ಸಖಿಯರಾಗಿ ಮತ್ತು ಕೃಷಿ ಸಖಿಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಚೆನ್ನಾಗಿ ಕಾರ್ಯನಿರ್ವಹಿಸುವ ಸಖಿಯರಿಗೆ ರಾಜ್ಯ ಸರ್ಕಾರ ಪ್ರಶಸ್ತಿ ನೀಡಿ ಪ್ರೋತ್ಸಾಹಿಸಬೇಕೆಂದು ಹೇಳಿದರು.

ಸಹಾಯಕ ಕೃಷಿ ನಿರ್ದೇಶಕ ಸಂತೋಷ ಪಟ್ಟದಕಲ್ಲ ಮತ್ತು ಕೃಷಿ ಮಹಾವಿದ್ಯಾಲಯ ಗಂಗಾವತಿಯ ವಿಶೇಷಾಧಿಕಾರಿ ಡಾ. ವಿಶ್ವನಾಥ ಜೆ. ಮಾತನಾಡಿದರು.

ಪ್ರಾಸ್ತಾವಿಕವಾಗಿ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ರಾಘವೇಂದ್ರ ಎಲಿಗಾರ ಮಾತನಾಡಿದರು. ಕಾರ್ಯಕ್ರಮದಲ್ಲಿ ವಿಜ್ಞಾನಿಗಳಾದ ಡಾ. ಕವಿತಾ ಉಳ್ಳಿಕಾಶಿ, ಡಾ. ಜ್ಯೋತಿ ಆರ್., ಜೆ. ರಾಧಾ ಮತ್ತು ಹಿರಿಯ ತಾಂತ್ರಿಕ ಅಧಿಕಾರಿಗಳಾದ ಜಿ. ನಾರಪ್ಪ, ಶೃತಿ ಹಾಗೂ ಫಕೀರಪ್ಪ ಅರಭಾಂವಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''