ನೈಸ್ ಕಾಮಗಾರಿಗೆ ನಿರ್ಬಂಧ ವಿಧಿಸಲು ರೈತರ ಆಗ್ರಹ

KannadaprabhaNewsNetwork |  
Published : Aug 30, 2025, 01:00 AM IST
29ಕೆಆರ್ ಎಂಎನ್ 1.ಜೆಪಿಜಿರಾಮನಗರದ ಐಜೂರು ವೃತ್ತದಲ್ಲಿ ರಾಜ್ಯ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ರಾಮನಗರ: ಕಳಂಕಿತ ನೈಸ್ ಕಂಪನಿಗೆ ಯಾವುದೇ ರೀತಿಯ ಕಾಮಗಾರಿ ನಡೆಸದಂತೆ ನಿರ್ಬಂಧ ವಿಧಿಸಬೇಕು ಎಂದು ಒತ್ತಾಯಿಸಿ ರಾಜ್ಯ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ರೈತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ರಾಮನಗರ: ಕಳಂಕಿತ ನೈಸ್ ಕಂಪನಿಗೆ ಯಾವುದೇ ರೀತಿಯ ಕಾಮಗಾರಿ ನಡೆಸದಂತೆ ನಿರ್ಬಂಧ ವಿಧಿಸಬೇಕು ಎಂದು ಒತ್ತಾಯಿಸಿ ರಾಜ್ಯ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ರೈತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ನಗರದ ಐಜೂರು ವೃತ್ತದಲ್ಲಿ ಸೇರಿದ ರೈತರು, ನೈಸ್ ಕಂಪನಿ ಕೃಷಿಕರ ಮೇಲೆ ನಡೆಸುತ್ತಿರುವ ದೌರ್ಜನ್ಯ ಮತ್ತು ರೈತ ಹೋರಾಟಗಾರರ ಮೇಲಿನ ಅಪಪ್ರಚಾರವನ್ನು ತೀವ್ರವಾಗಿ ಖಂಡಿಸಿದರು.

ಈ ವೇಳೆ ಮಾತನಾಡಿದ ಸಿಐಟಿಯು ರಾಜ್ಯಾಧ್ಯಕ್ಷೆ ವರಲಕ್ಷ್ಮಿ, ಬೆಂಗಳೂರಿನಿಂದ ಮೈಸೂರಿನವರೆಗೆ ಹೆದ್ದಾರಿ ರಸ್ತೆ ನಿರ್ಮಾಣ ಸಂಬಂಧ ಸರ್ಕಾರ ನೈಸ್ ಕಂಪನಿ ಜೊತೆ ಕ್ರಿಯಾ ಒಪ್ಪಂದ ಮಾಡಿಕೊಂಡು 28 ವರ್ಷಗಳು ಕಳೆದಿದ್ದು, ನೈಸ್ ರಸ್ತೆ ನಿರ್ಮಾಣ ಕಾರ್ಯಗತವಾಗಿಲ್ಲ. ಈ ಯೋಜನೆಗೆ ಗುರುತಿಸಲಾಗಿದ್ದ ರೈತರ ಭೂಮಿಯ ಸ್ವಾಧೀನವನ್ನು ರದ್ದುಪಡಿಸದೆ ಹಾಗೇಯೆ ಮುಂದುವರಿಸಿಕೊಂಡು ಬರುತ್ತಿರುವುದು ರೈತರಿಗೆ ಮಾಡುತ್ತಿರುವ ಅನ್ಯಾಯವಾಗಿದೆ ಎಂದು ಟೀಕಿಸಿದರು.

ರೈತರು ಹಾಗೂ ರೈತ ಮುಖಂಡರ ಮೇಲೆ ನಿಂದನೆ, ಬೆದರಿಕೆ ಮುಂತಾದ ನೈಸ್ ಕಂಪನಿ ದೌರ್ಜನ್ಯ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ನೈಸ್ ಅಕ್ರಮಗಳ ವಿರುದ್ಧದ ಹೋರಾಟಗಾರ ರೈತ ನಾಯಕ ಎನ್.ವೆಂಕಟ ಚಲಯ್ಯರವರಿಗೆ ಸೂಕ್ತ ರಕ್ಷಣೆ ಒದಗಿಸಬೇಕು. ರೈತರ ಒಪ್ಪಿಗೆ ಇಲ್ಲದ, ರೈತರ ಗಮನಕ್ಕೆ ಬಾರದಂತೆ ಭೂ ಸ್ವಾಧೀನ ಮಾಡಿರುವ ಎಲ್ಲ ಪ್ರಕರಣಗಳನ್ನು ರದ್ದುಪಡಿಸಬೇಕು ಎಂದು ವರಲಕ್ಷ್ಮಿ ಆಗ್ರಹಿಸಿದರು.

ರಾಜ್ಯ ಪ್ರಾಂತ ರೈತಸಂಘ ಜಿಲ್ಲಾ ಸಂಚಾಲಕ ಅಂಕಪ್ಪ ಮಾತನಾಡಿ, ನೈಸ್ ಆಕ್ರಮ ಕುರಿತ ಸದನ ಸಮಿತಿ ಮತ್ತು ಸಂಪುಟ ಉಪಸಮಿತಿಗಳ ಶಿಪಾರಸ್ಸುಗಳನ್ನು ಜಾರಿಗೊಳಿಸಬೇಕು. ಕೆಐಎಡಿಬಿ ಹಾಗೂ ನೈಸ್ ಕಂಪನಿಯ ಅಕ್ರಮ ಮೈತ್ರಿಯಿಂದ ಹಗಲು ದರೋಡೆ ಮಾಡಿರುವ ಎಲ್ಲಾ ಹೆಚ್ಚುವರಿ ಭೂಮಿಯನ್ನು ವಾಪಸು ಪಡೆದುಕೊಳ್ಳಬೇಕು ಎಂದು ಹೇಳಿದರು.

ಭೂ ಸ್ವಾಧೀನ ಪ್ರಕಟಣೆ ಮತ್ತು ಕೋರ್ಟ್ ತೀರ್ಪುಗಳ ಹೆಸರಿನಲ್ಲಿ ರೈತರ ಮೇಲಿನ ನೈಸ್ ಕಂಪನಿಯ ದಬ್ಬಾಳಿಕೆ-ದೌರ್ಜನ್ಯ ನಿಲ್ಲಿಸಬೇಕು. ಟೋಲ್ ಸಂಗ್ರಹಿಸುತ್ತಿರುವ ರಸ್ತೆಗೆ ಭೂಮಿ ಕಳೆದುಕೊಂಡ ರೈತರಿಗೆ ಒಪ್ಪಂದದಂತೆ ಹೆಚ್ಚಿನ ಪರಿಹಾರ ಹಾಗೂ ನಿವೇಶನ ಒದಗಿಸಬೇಕು. ನೈಸ್ ಕಂಪನಿಗೆ ಗುತ್ತಿಗೆಗೆ ನೀಡಿರುವ ಎಲ್ಲಾ ಸರ್ಕಾರಿ ಭೂಮಿಗಳನ್ನು ವಾಪಸ್ಸು ಪಡೆದು. ಮನೆ ನಿವೇಶನಕ್ಕಾಗಿ ಅರ್ಜಿ ಹಾಕಿಕೊಂಡಿರುವ ಎಲ್ಲಾ ವಸತಿ ರಹಿತರಿಗೆ ಮನೆ ಒದಗಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ನೈಸ್ ಭೂ ಸ್ವಾಧೀನ ಹೋರಾಟ ಸಮಿತಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ನಾರಾಯಣಪ್ಪ, ಉಪಾಧ್ಯಕ್ಷ ರಾದ ಸಿದ್ದರಾಮಯ್ಯ, ಕುಂಟೀರಪ್ಪ, ಜಿಲ್ಲಾ ಕಾರ್ಯ ದರ್ಶಿ ಚಂದ್ರಶೇಖರ್, ಸಹ ಕಾರ್ಯದರ್ಶಿ ರಾಜೇಶ್, ನಗರ ಜಿಲ್ಲಾ ಉಪಾಧ್ಯಕ್ಷ ಸಣ್ಣ ರಂಗಯ್ಯ ಮತ್ತಿತರರು ಭಾಗವಹಿಸಿದ್ದರು.

ಕೋಟ್‌................ನೈಸ್ ಕಂಪನಿಯ ಪಾಲುದಾರಿಕೆ ಕುರಿತು ರಾಜ್ಯ ಸರ್ಕಾರ ಸಲಹಾ ಸಮಿತಿ ನೇಮಿಸಿರುವ ಹಿನ್ನೆಲೆಯಲ್ಲಿ, ಕಳಂಕಿತ ನೈಸ್ ಕಂಪನಿಗೆ ಯಾವುದೇ ರೀತಿಯ ಕಾಮಗಾರಿ ನಡೆಸದಂತೆ ನಿರ್ಬಂಧ ವಿಧಿಸಬೇಕು. ಬಿಎಂಐಸಿ ಯೋಜನೆ ಹಾಗೂ ನೈಸ್ ಕಂಪನಿ ಪಾಲುದಾರಿಕೆಯನ್ನು ರದ್ದುಗೊಳಿಸಬೇಕು. ನೈಸ್ ಕಂಪನಿಯ ಭೂ ಸ್ವಾಧೀನ ಹಾಗೂ ರಸ್ತೆ ನಿರ್ಮಾಣದ ಹಗರಣಗಳನ್ನು ತನಿಖೆಗೆ ಒಳಪಡಿಸಿ ಶಿಕ್ಷಿಸಬೇಕು.

-ವರಲಕ್ಷ್ಮಿ, ರಾಜ್ಯಾಧ್ಯಕ್ಷೆ, ಸಿಐಟಿಯು

29ಕೆಆರ್ ಎಂಎನ್ 1.ಜೆಪಿಜಿ

ರಾಮನಗರದ ಐಜೂರು ವೃತ್ತದಲ್ಲಿ ರಾಜ್ಯ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವ್ಯಕ್ತಿಯ ಅಕ್ರಮ ಬಂಧನದಲ್ಲಿಟ್ಟಿದ್ದಕ್ಕೆ ಸರ್ಕಾರಕ್ಕೆ ದಂಡ!
ಯಶವಂತಪುರ ಮೆಟ್ರೋ ಪ್ರವೇಶದ್ವಾರ ಸ್ಥಳಾಂತರ