ಕನ್ನಡಪ್ರಭ ವಾರ್ತೆ ಹಳಿಯಾಳ
ಬುಧವಾರ ಮರಾಠ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜು. 20ರಂದು ತಾಲೂಕು ಆಡಳಿತದ ವಿರುದ್ಧ ಪ್ರತಿಭಟನೆ ನಡೆಸಿ ನಮ್ಮ ಕೂಗನ್ನು ರಾಜ್ಯ ಸರ್ಕಾರಕ್ಕೆ ತಲುಪಿಸಲಾಗುವುದೆಂದರು.
ತಾಲೂಕಿನಲ್ಲಿ ಜೂನ್ 1ರಿಂದ ಇಲ್ಲಿಯವರೆಗೆ ವಾಡಿಕೆಯಂತೆ 448 ಮಿ.ಮಿ ಮಳೆಯಾಗಬೇಕಾಗಿತ್ತು, ಆದರೆ ಕೇವಲ 284 ಮಿಮಿ ಮಳೆಯಾಗಿದೆ. ಕಳೆದೊಂದು ವಾರದಿಂದ ತಾಲೂಕಿನೆಲ್ಲೆಡೆ ಮಳೆಯು ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಬಿರುಬಿಸಿಲಿನ ವಾತಾವರಣದಿಂದ ಭತ್ತ ಸೇರಿದಂತೆ ಗೋವಿನಜೋಳ ಹಾಗೂ ವಿವಿಧ ಬೆಳೆಗಳು ಒಣಗುವ ಹಂತ ತಲುಪಿವೆ. ರೈತರು ಇದ್ದ ಬೆಳೆಯನ್ನು ಸಂರಕ್ಷಿಸಲು ಹರಸಾಹಸ ಪಡುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.ತಾಲೂಕಿನ ಸದ್ಯದ ಪರಿಸ್ಥಿತಿ ಮನಗಂಡು ರಾಜ್ಯ ಸರ್ಕಾರವು ತಕ್ಷಣ ಹಳಿಯಾಳ ವಿಧಾನಸಭಾ ಕ್ಷೇತ್ರವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು, ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಎನ್.ಡಿ.ಆರ್.ಎಫ್) ಹಾಗೂ ರಾಜ್ಯ ವಿಪತ್ತು ಪರಿಹಾರ ನಿಧಿ(ಎಸ್.ಡಿ.ಆರ್.ಎಫ್) ಮಾರ್ಗಸೂಚಿಯಂತೆ ಬರಪರಿಹಾರ ಕಾಮಗಾರಿ ಆರಂಭಿಸಿ ರೈತರ ನೆರವಿಗೆ ಧಾವಿಸಬೇಕು ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ತಾಲೂಕು ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಶಂಕರ ಕಾಜಗಾರ, ಪ್ರಮುಖರಾದ ಸುರೇಶ ಶಿವಣ್ಣನವರ, ರಾಮದಾಸ ಬೆಳಗಾಂವಕರ, ಬಳಿರಾಮ ಮೋರಿ, ಮಂಜುಳಾ ಗೌಡಾ, ನಕುಲ ಕೆಂಚಣ್ಣನವರ, ಸಾತೇರಿ ಗೋಡೆಮನಿ, ಮಹೇಶ ಪಾಳೇಕರ, ಚಂದ್ರು ಲಕ್ಕನಗೌಡ ಹಾಗೂ ಇತರ ರೈತ ಮುಖಂಡರು ಇದ್ದರು.