ಸಮರ್ಪಕ ವಿದ್ಯುತ್‌ ಪೂರೈಕೆಗೆ ರೈತರ ಆಗ್ರಹ

KannadaprabhaNewsNetwork |  
Published : Oct 22, 2023, 01:00 AM IST
ಹಗಲು ವೇಳೆ 5 ತಾಸು ತ್ರೀಫೇಸ್ ವಿದ್ಯುತ್ ಪೂರೈಸಲು ಆಗ್ರಹಿಸಿ ಬೆಳವಡಿ ಹೆಸ್ಕಾಂ ಕಛೇರಿ ಮುಂದೆ ರೈತರು ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಸಮರ್ಪಕ ವಿದ್ಯುತ್‌ ಪೂರೈಕೆಗೆ ರೈತರ ಆಗ್ರಹ

ಕನ್ನಡಪ್ರಭ ವಾರ್ತೆ ಬೈಲಹೊಂಗಲ ತಾಲೂಕಿನ ದೊಡವಾಡ, ನನಗುಂಡಿಕೊಪ್ಪ, ಗುಡಿಕಟ್ಟಿ ಸೇರಿದಂತೆ ವಿವಿಧ ಗ್ರಾಮಗಳ ರೈತರು ನೀರಾವರಿ ಪಂಪಸೆಟ್‌ಗಳಿಗೆ ಅಸಮರ್ಪಕ ವಿದ್ಯುತ್ ಪೂರೈಕೆ ಖಂಡಿಸಿ, ಮಲ್ಲಮ್ಮನ ಬೆಳವಡಿಯಲ್ಲಿನ ಹೆಸ್ಕಾಂ ಶಾಖಾ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು. ಮಧ್ಯರಾತ್ರಿ ವಿದ್ಯುತ್ ಪೂರೈಸುತ್ತಿದ್ದಾರೆ. ಇದರಿಂದ ರೈತರಿಗೆ ತೊಂದರೆಯಾಗುತ್ತಿದೆ. ದಿನಕ್ಕೆ 5 ತಾಸು ತ್ರೀಫೇಸ್ ವಿದ್ಯುತ್ ಪೂರೈಕೆಯ ಸರ್ಕಾರದ ಆದೇಶ ಅಧಿಕಾರಿಗಳು ಪಾಲಿಸುತ್ತಿಲ್ಲ. ಹೆಸ್ಕಾಂ ಬೈಲಹೊಂಗಲ ತಾಲೂಕು ಮತ್ತು ಬೆಳವಡಿ ಶಾಖಾಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲ. ಅ.24 ರವರೆಗೆ ಗಡುವು ನೀಡುತ್ತಿದ್ದೇವೆ. ಅಷ್ಟರೊಳಗಾಗಿ ಹಗಲು ವೇಳೆ 5 ಗಂಟೆ ತ್ರೀಫೇಸ್ ವಿದ್ಯುತ್ ಪೂರೈಸದಿದ್ದರೆ, ಸಾವಿರಾರು ರೈತರು ಟ್ರ್ಯಾಕ್ಟರ್‌ಗಳ ಮೂಲಕ ಮಲ್ಲಮ್ಮನ ಬೆಳವಡಿ ವೃತ್ತದಲ್ಲಿ ರಸ್ತೆ ರೋಖೋ ನಡೆಸುತ್ತೇವೆ ಎಂದು ಎಚ್ಚರಕೆ ನೀಡಿದರು. ಗದಿಗೆಪ್ಪ ಅರಳಿಮರದ, ಅನಿಲ ಬಶೆಟ್ಟಿ, ನಿಂಗಪ್ಪ ಚೌಡಣ್ಣವರ, ಅಡಿವೆಪ್ಪ ಗುಂಡ್ಲೂರ, ಹನಮಂತ ಚಂದರಗಿ, ಸಂಗಪ್ಪ ಮಾಡಲಗಿ, ಕಿಟ್ಟು ಚರಂತಿಮಠ ಹಾಗೂ ದೊಡವಾಡ, ನನಗುಂಡಿಕೊಪ್ಪ, ಗುಡಿಕಟ್ಟಿ ಗ್ರಾಮಗಳ ನೂರಾರು ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

PREV

Recommended Stories

ಕಾರ್ಮಿಕರು ಒಪ್ಪಿದ್ರೆ 10 ಗಂಟೆ ಕೆಲಸಕ್ಕೆ ಓಕೆ : ಲಾಡ್‌
‘ಸಾವಿರಾರು ಶವ ಹೂಳಲು ಧರ್ಮಸ್ಥಳ ಗ್ರಾಮದಲ್ಲಿ ಮಹಾಭಾರತ ಯುದ್ಧ ನಡೆದಿಲ್ಲ’