ಹಾನಗಲ್ಲ: ಕೃಷಿಗೆ ಚಟುವಟಿಕೆಗಳಿಗೆ ಆತಂಕ ಸೃಷ್ಟಿಸಿದ ಮುಳ್ಳು ಸಜ್ಜಿ ಕಸ ಹತೋಟಿಗೆ ಕೃಷಿ ಅಧಿಕಾರಿಗಳು, ಕೃಷಿ ತಜ್ಞರು ಸೂಕ್ತ ಔಷಧಿ ಹಾಗೂ ನಿರ್ಮೂಲನಾ ಪದ್ಧತಿಗಳನ್ನು ಸೂಚಿಸದಿದ್ದರೆ ರೈತರು ದೊಡ್ಡ ಆತಂಕಕ್ಕೆ ಈಡಾಗಬೇಕಾಗುತ್ತದೆ ಎಂದು ಮಾಸನಕಟ್ಟಿಯ ಕೃಷಿಕ ರಾಜಶೇಖರ ಹಲಸೂರ ಮನವಿ ಮಾಡಿದ್ದಾರೆ.ಮಂಗಳವಾರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಈ ವಿಷಯವನ್ನು ಹಾಗನಲ್ಲಿನ ಕೃಷಿ ಇಲಾಖೆಯ ಅಧಿಕಾರಿಗಳ ಗಮನಕ್ಕೂ ತರಲಾಗಿದೆ. ಈ ಮುಳ್ಳಿನ ಸಜ್ಜಿ ಕಸ ರೈತರು ಬೆಳೆಯುವ ಸಜ್ಜಿ ಬೆಳೆಯಂತೆ ಹಸಿರಾಗಿ ಎತ್ತರವಾಗಿ ಬೆಳೆಯುತ್ತದೆ. ಈ ಮುಳ್ಳು ಸಜ್ಜಿ ಕಸದ ಹತೋಟಿಗೆ ಬೇಕಾದ ಸಲಹೆ ಕೃಷಿ ಅಧಿಕಾರಿಗಳು ಹಾಗೂ ಕೃಷಿ ತಜ್ಞರಿಂದ ಬೇಕಾಗಿದೆ.
ಹಾನಗಲ್ಲ: 2025- 26ನೇ ಸಾಲಿಗೆ ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಡಿ ನಡೆಯುತ್ತಿರುವ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಸತಿ ನಿಲಯಗಳಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಜಾತಿಯ ವಿದ್ಯಾರ್ಥಿಗಳಿಗೆ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಿದ್ದು, ಆ. 31ರ ಒಳಗಾಗಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಅದಿಕಾರಿಗಳು ತಿಳಿಸಿದ್ದಾರೆ.
ಇಲ್ಲಿನ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗೆ 1ರಿಂದ 5ನೇ ತರಗತಿಯಲ್ಲಿ ಪ್ರಸ್ತುತ ವರ್ಷಕ್ಕೆ ಖಾಲಿ ಇರುವ 1 ಮತ್ತು 2ನೇ ತರಗತಿಯ ಖಾಲಿಯಿರುವ ಸ್ಥಾನಗಳಿಗೆ ಅರ್ಜಿ ನಮೂನೆ ಪಡೆದು ದಾಖಲಾತಿಗಳನ್ನು ಲಗತ್ತಿಸಿ ಅರ್ಜಿ ಸಲ್ಲಿಸಬಹುದು ಎಂದು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಮೊ. 9480843150, ದೂ. 08379- 262776 ಕಚೇರಿ ವೇಳೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.