ನರಗುಂದ: ರಾಜ್ಯ ಸರ್ಕಾರವು ಮಹಾರಾಷ್ಟ್ರ ಮಾದರಿಯಲ್ಲಿ ಕಬ್ಬಿನ ಬೆಲೆ ನಿಗದಿ ಮಾಡಬೇಕೆಂದು ಕರ್ನಾಟಕ ರೈತ ಸಂಘ ಹಾಗೂ ಹಸಿರುಸೇನೆ ತಾಲೂಕು ಅಧ್ಯಕ್ಷ ಉಮೇಶ ಮರ್ಚಪ್ಪನವರ ಆಗ್ರಹಿಸಿದರು.
ಆದ್ದರಿಂದ ಈ ಹಿಂದೆ ಹಲವಾರು ಬಾರಿ ರಾಜ್ಯ ರೈತ ಸಂಘಟನೆಗಳು, ಕಬ್ಬು ಬೆಳೆಗಾರರ ಸಂಘದಿಂದ ಸರ್ಕಾರಕ್ಕೆ ಕಬ್ಬಿಗೆ ಯೋಗ್ಯ ಬೆಲೆ ನಿಗದಿ ಮಾಡಬೇಕೆಂದು ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲವೆಂದು ಆರೋಪಿಸಿದರು.
ವಿವಿಧ ಜಿಲ್ಲೆಗಳಲ್ಲಿ ಕಬ್ಬು ಬೆಳೆದ ಬೆಳೆಗಾರರು ಹಲವು ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದರೂ ಸರ್ಕಾರ ಗಮನ ಹರಿಸುತ್ತಿಲ್ಲ. ಇನ್ನು ಕಾಲ ಮಿಂಚಿಲ್ಲ. ಹೋರಾಟ ರಾಜ್ಯ ವ್ಯಾಪ್ತಿ ಹರಡುವ ಮುನ್ನ ಎಚ್ಚೆತ್ತು ಕಬ್ಬನ್ನು ಮಹಾರಾಷ್ಟ್ರ ಮಾದರಿಯಲ್ಲಿ ಬೆಲೆ ನಿಗದಿ ಮಾಡಿ ಕಬ್ಬು ಖರೀದಿ ಮಾಡಬೇಕು ಎಂದರು.ತಹಸೀಲ್ದಾರ್ ಶ್ರೀಶೈಲ ತಳವಾರ ಅವರು ರೈತರ ಮನವಿ ಸ್ವೀಕರಿಸಿ ಸರ್ಕಾರಕ್ಕೆ ಮನವಿ ರವಾನೆ ಮಾಡಲಾಗುವುದೆಂದು ತಿಳಿಸಿದರು. ಈ ಸಂದರ್ಭದಲ್ಲಿ ಶೇಖರಗೌಡ ಪೊಲೀಸಪಾಟೀಲ, ಬಸಯ್ಯ ಹೊರಗಿನಮಠ, ಹನುಮಂತಗೌಡ ಭೂಸನ್ನವರ, ಶಾಲಗೌಡ ಬಾಳಗೌಡರ, ಕುಮಾರಗೌಡ ಕಪ್ಲ, ಮಹಾಂತೇಶ ಚಿನವಾಳರ, ಯಂಕಪ್ಪ ಕಲ್ಲಾಪೂರ ಮುಂತಾದವರು ಇದ್ದರು.8ರಂದು ಕನಕದಾಸರ ಜಯಂತಿ ಆಚರಣೆ
ಮುಖ್ಯ ಅತಿಥಿಗಳಾಗಿ ಸಂಸದ ಬಸವರಾಜ ಬೊಮ್ಮಾಯಿ, ವಿಧಾನಪರಿಷತ್ ಸದಸ್ಯ ಸಲೀಂ ಅಹ್ಮದ್, ಶಾಸಕ ಜಿ.ಎಸ್. ಪಾಟೀಲ, ಸಂಸದ ಪಿ.ಸಿ. ಗದ್ದಿಗೌಡರ, ರಾಜ್ಯ ವಿಕೇಂದ್ರೀಕರಣ ಯೋಜನೆ ಉಪಾಧ್ಯಕ್ಷ ಡಿ.ಆರ್. ಪಾಟೀಲ, ವಿಧಾನಪರಿಷತ್ ಸದಸ್ಯರಾದ ಎಸ್.ವಿ. ಸಂಕನೂರ ಇತರರು ಆಗಮಿಸುವರು ಎಂದು ಪ್ರಕಟಣೆ ತಿಳಿಸಿದೆ.