ಕಾರ್ಖಾನೆಗೆ ಭೂಮಿ ನೀಡಿದ ರೈತರಿಗೆ ಕೆಲಸ ಕೊಡಲು ಒಪ್ಪಿಗೆ: ಮುಷ್ಕರ ವಾಪಸ್

KannadaprabhaNewsNetwork |  
Published : Jul 25, 2024, 01:19 AM IST
57 | Kannada Prabha

ಸಾರಾಂಶ

ನಂಜನಗೂಡು ತಾಲೂಕಿನ ಅಳಗಂಚಿ ಗ್ರಾಮದ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆ ಮುಂಭಾಗ ಕಾರ್ಖಾನೆಗೆ ಭೂಮಿ ನೀಡಿದ ರೈತರು ಹಾಗೂ ಕೆ.ಐ.ಎ.ಡಿ.ಬಿ ಅಧಿಕಾರಿಗಳ ನಡುವೆ ಬುಧವಾರ ಸಭೆ ನಡೆದು, 42 ರೈತರಮಕ್ಕಳನ್ನು ಹೊರಗುತ್ತಿಗೆ ಆಧಾರದ ಮೇಲೆ ಕೆಲಸಕ್ಕೆ ತೆಗೆದುಕೊಳ್ಳಲು ಕಾರ್ಖಾನೆ ಒಪ್ಪಿಗೆ ನೀಡಿರುವ ಪತ್ರವನ್ನು ಮುಷ್ಕರ ನಿರತ ರೈತರಿಗೆ ನೀಡಲಾಯಿತು.

ಕನ್ನಡಪ್ರಭ ವಾರ್ತೆ ನಂಜನಗೂಡು

ತಾಲೂಕಿನ ಅಳಗಂಚಿ ಗ್ರಾಮದ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆ ಮುಂಭಾಗ ಕಾರ್ಖಾನೆಗೆ ಭೂಮಿ ನೀಡಿದ ರೈತರು ಹಾಗೂ ಕೆ.ಐ.ಎ.ಡಿ.ಬಿ ಅಧಿಕಾರಿಗಳ ನಡುವೆ ಬುಧವಾರ ಸಭೆ ನಡೆದು, 42 ರೈತರಮಕ್ಕಳನ್ನು ಹೊರಗುತ್ತಿಗೆ ಆಧಾರದ ಮೇಲೆ ಕೆಲಸಕ್ಕೆ ತೆಗೆದುಕೊಳ್ಳಲು ಕಾರ್ಖಾನೆ ಒಪ್ಪಿಗೆ ನೀಡಿರುವ ಪತ್ರವನ್ನು ಮುಷ್ಕರ ನಿರತ ರೈತರಿಗೆ ನೀಡಲಾಯಿತು.

ಒಪ್ಪಂದಕ್ಕೆ ಸ್ಪಂದಿಸಿರುವ ಕಾರ್ಖಾನೆಗೆ ಭೂಮಿ ನೀಡಿದ ರೈತರು ಕೆಲಸ ನೀಡುವಂತೆ ಒತ್ತಾಯಿಸಿ ಕಳೆದ 169 ದಿನಗಳಿಂದ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ಕೈಬಿಟ್ಟಿದ್ದಾರೆ. ಕೊಟ್ಟ ಮಾತಿನಂತೆ ಕಾಯಂ ಉದ್ಯೋಗ ಕೊಡಲು ತಪ್ಪಿದರೆ ಮತ್ತೆ ತೀವ್ರವಾದ ಹೋರಾಟವನ್ನು ಮಾಡುವ ಎಚ್ಚರಿಕೆಯನ್ನು ನೀಡಿದ್ದಾರೆ.

ಒಪ್ಪಂದದ ಅನುಸಾರ 42 ರೈತಮಕ್ಕಳನ್ನು, ಸದ್ಯಕ್ಕೆ ಹೊರಗುತ್ತಿಗೆ ಆಧಾರದ ಮೇಲೆ ಕೆಲಸಕ್ಕೆ ತೆಗೆದುಕೊಳ್ಳಲಾಗುತ್ತದೆ.‌ಕಾರ್ಖಾನೆಯಲ್ಲಿ ಕಾಯಂ ಉದ್ಯೋಗ ಮಾಡುತ್ತಿರುವ ಕಾರ್ಮಿಕರು ವಯೋ ನಿವೃತ್ತಿ ಹೊಂದಿದ ನಂತರ ಅವರ ಸ್ಥಾನಗಳಿಗೆಈ 42 ಮಂದಿಯನ್ನುಕಾಯಂಗೊಳಿಸಲು ತೀರ್ಮಾನಿಸಲಾಗಿದೆ, ಇವರೆಲ್ಲರಿಗೂ ಕಾನೂನಿನ ಪ್ರಕಾರ ನೀಡಬೇಕಿದ್ದ ಎಲ್ಲ ಸೌಲಭ್ಯಗಳನ್ನು ನೀಡಲಾಗುತ್ತದೆ. ಭವಿಷ್ಯದಲ್ಲಿ ಹೆಚ್ಚುವರಿ ಉದ್ಯೋಗಗಳು ಸೃಷ್ಟಿಯಾಗುವ ಸಂದರ್ಭದಲ್ಲಿ ಇವರನ್ನು ಆದ್ಯತೆಯ ಮೇರೆಗೆನೇಮಿಸಿಕೊಳ್ಳುವುದಾಗಿಕಾರ್ಖಾನೆಯವರುತಿಳಿಸಿದ್ದಾರೆ. ಈ ಕುರಿತು ಒಮ್ಮತಕ್ಕೆ ಬರಲಾಗಿದೆ. ಈ ವಿಷಯವನ್ನು ಪ್ರಸ್ತಾಪಿಸಿ ಕೆ.ಐ.ಎ.ಡಿ.ಬಿಗೆ ಕಾರ್ಖಾನೆಯ ವತಿಯಿಂದ ಪತ್ರವನ್ನು ನೀಡಲಾಗಿದೆ.

ಈ ವಿಷಯವನ್ನು ಕೆಐಎಡಿಬಿಯ ಪರವಾಗಿ ಸ್ಥಳಕ್ಕೆ ಆಗಮಿಸಿದ್ದ ಕೆ.ಐ.ಎ.ಡಿ.ಬಿ , ಎಇಇ ಅರುಣ್ ಕುಮಾರ್ ಹಾಗೂ ಎಇ ಶಬರೀಶ್ ತಿಳಿಸಿ, ರೈತ ಮುಖಂಡರಿಗೆ ಪತ್ರವನ್ನು ಹಸ್ತಾಂತರಿಸಿದರು.

ಜನಾಂದೋಲನಗಳ ಮಹಾಮೈತ್ರಿಯ ರಾಜ್ಯ ಸಂಚಾಲಕರಾದ ಉಗ್ರ ನರಸಿಂಹೇಗೌಡ, ಎಐಯುಟಿಯುಸಿ ಕಾರ್ಮಿಕ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ್ ಮೇಟಿ, ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಬೊಕ್ಕಹಳ್ಳಿ ನಂಜುಂಡಸ್ವಾಮಿ, ಅಖಿಲ ಭಾರತ ರೈತ ಕೃಷಿ ಕಾರ್ಮಿಕ ಸಂಘಟನೆಯ ಜಿಲ್ಲಾ ಸಂಚಾಲಕ ಬಸವರಾಜು, ರೈತ ಮಹಿಳೆಯರಾದ ಕೆಂಬಾಳಮ್ಮ, ಲಕ್ಷ್ಮಮ್ಮ, ಮಹಾದೇವಮ್ಮ, ಪುಟ್ಟಮ್ಮ, ರಾಜು, ಪುನೀತ್ ಮಂಜು, ಮಹೇಶ್, ಮಹದೇವೇಗೌಡ, ಬಸವಣ್ಣ, ಮಹದೇವ್ ಮುಂತಾದ ಪ್ರತಿಭಟನಾಕಾರರು ಇದ್ದರು.

ನಂಜನಗೂಡು ತಾಲೂಕಿನ ಅಳಗಂಚಿ ಗ್ರಾಮದ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆ ಮುಂಭಾಗ ಕಾರ್ಖಾನೆಗೆ ಭೂಮಿ ನೀಡಿದ ರೈತರು ಹಾಗೂ ಕೆ.ಐ.ಎ.ಡಿ.ಬಿ ಅಧಿಕಾರಿಗಳ ನಡುವೆ ಬುಧವಾರ ಸಭೆ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಚ್ಚೆತ್ತ ಬೆಂ.ವಿವಿ: ಲೋಪ ಸರಿಪಡಿಸಿ 400 ವಿದ್ಯಾರ್ಥಿಗಳ ಫಲಿತಾಂಶ ಪ್ರಕಟ
ಕುದುರೆಗಳಲ್ಲಿ ಗ್ಲ್ಯಾಂಡರ್ಸ್ ರೋಗ ಪತ್ತೆ: ಟರ್ಫ್ ಕ್ಲಬ್‌ ಸುತ್ತ ಪ್ರಾಣಿ ಸಂಚಾರ ನಿರ್ಬಂಧ