ಕನ್ನಡಪ್ರಭ ವಾರ್ತೆ ಬೆಳಗಾವಿ
ಜೂನ್ನಲ್ಲಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಕೃಷ್ಣಾ, ಮಲಪ್ರಭಾ, ಘಟಪ್ರಭಾ, ಮಾರ್ಕಂಡೇಯ, ಹಿರಣ್ಯಕೇಶಿ, ದೂಧಗಂಗಾ, ವೇದಗಂಗಾ ಎಂಬ ಸಪ್ತ ನದಿಗಳು ಖಾಲಿಯಾಗಿದ್ದವು. ಮಲಪ್ರಭಾ, ಹಿಡಕಲ್, ರಾಕಸಕೊಪ್ಪ ಜಲಾಶಯಗಳಲ್ಲೂ ನೀರಿನ ಅಭಾವದಿಂದ ಕುಡಿಯುವ ನೀರಿಗಾಗಿ ಹಾಹಾಕಾರ ಎದ್ದಿತ್ತು.
ಮಳೆ ಬರುತ್ತದೆ ಎಂಬ ಆಶಯದಲ್ಲಿ ಸಾವಿರಾರು ರೂಪಾಯಿ ಖರ್ಚು ಮಾಡಿ ಬಿತ್ತನೆ ಮಾಡಿದ್ದ ರೈತರ ಬೆಳೆಗಳು ಒಣಗುವ ಹಂತ ತಲುಪಿದ್ದವು. ಕಳೆದ ಮೂರು ದಿನಗಳ ಉತ್ತಮ ಮಳೆಯಿಂದ ಒಣಗುತ್ತಿದ್ದ ಬೆಳೆಗಳಿಗೆ ಜೀವ ಕಳೆ ಬಂದಿದೆ. ಇದರಿಂದ ರೈತಾಪಿ ವರ್ಗ ಹರ್ಷಗೊಂಡಿದೆ. ಖಾನಾಪುರ ಅರಣ್ಯ ಪ್ರದೇಶ ಮತ್ತು ಮಹಾರಾಷ್ಟ್ರದ ಪಶ್ಚಿಮಘಟ್ಟದಲ್ಲಿ ಭಾರಿ ಮಳೆಯಿಂದಾಗಿ ಕೃಷ್ಣಾ ನದಿಗೆ 15 ಸಾವಿರ ಕ್ಯೂಸೆಕ್, ಹಿಡಕಲ್ ಜಲಾಶಯಕ್ಕೆ 1600 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಮಹಾರಾಷ್ಟ್ರದಲ್ಲಿ ಮಳೆ ಮುಂದುವರಿದರೆ ಜಿಲ್ಲೆಯ ನದಿಗಳು ಮತ್ತಷ್ಟು ತುಂಬುವ ಭರವಸೆಯಿದೆ.ಘಟಪ್ರಭಾ, ವೇದಗಂಗಾ ಹೆಚ್ಚಿನ ಒಳಹರಿವುನದಿಗಳ ಪಾತ್ರದಲ್ಲಿ ಭಾನುವಾರವೂ ಮಳೆ ಮುಂದುವರಿದಿದ್ದು, ಸಪ್ತ ನದಿಗಳು ಉಕ್ಕಿ ಹರಿಯುತ್ತಿವೆ. ಮಹಾರಾಷ್ಟ್ರದಲ್ಲಿ ವರುಣ ಆರ್ಭಟದಿಂದ ವೇದಗಂಗಾ, ದೂದಗಂಗಾ ನದಿಗಳು ಅಪಾಯದ ಮಟ್ಟ ಮೀರಿವೆ. ನಿಪ್ಪಾಣಿ ತಾಲೂಕಿನ ಕಾರದಗಾ-ಭೋಜ, ಬಾರವಾಡ-ಕನ್ನೂರ, ಭೋಜವಾಡಿ-ಗಜವರವಾಡಿ ಮೂರು ಸೇತುವೆಗಳು ಮುಳುಗಿವೆ. ಈ ನದಿಗಳಿಗೆ ಯಾರೂ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಗೋಕಾಕ್ ಫಾಲ್ಸ್ಗೆ ಕಳೆ
ನಗರದಲ್ಲಿ ಸುರಿದ ಮಳೆಯಿಂದ ಅವಾಂತರಗಳು ಸೃಷ್ಟಿಯಾಗಿವೆ. ಬೆಳಗಾವಿಯ ವೀರಭದ್ರ ನಗರದಲ್ಲಿ ಚರಂಡಿ ಬ್ಲಾಕ್ ಆಗಿ ನಾಲ್ಕು ಮನೆಗಳಿಗೆ ನೀರು ನುಗ್ಗಿ ದವಸ-ಧಾನ್ಯ ಹಾಳಾಗಿದೆ. ಚರಂಡಿ ಸ್ವಚ್ಛಗೊಳಿಸದ ಪಾಲಿಕೆಯ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶನಿವಾರ ಸಂಜೆಯಿಂದ ಭಾನುವಾರ ಮಧ್ಯಾಹ್ನದವರೆಗೆ ನಗರದ ವಿವಿಧ ಬಡಾವಣೆಗಳಲ್ಲಿ 20ಕ್ಕೂ ಅಧಿಕ ಮರಗಳು ಬಿದ್ದಿವೆ. ಇದರಿಂದ ಎರಡು ಮನೆ ಮತ್ತು ಒಂದು ಕಾರು ಹಾನಿಯಾಗಿವೆ ಎಂದು ಪಾಲಿಕೆ ಪರಿಸರ ವಿಭಾಗದ ಎಂಜಿನಿಯರ್ ಹನಮಂತ ಕಲಾದಗಿ ಮಾಹಿತಿ ನೀಡಿದ್ದಾರೆ. ರಸ್ತೆಗೆ ಬಿದ್ದ ಮರಗಳನ್ನು ತೆರವು ಮಾಡುತ್ತಿದ್ದೇವೆ. ಸಿಬ್ಬಂದಿ 24x7 ಕೆಲಸ ಮಾಡುತ್ತಿರುವುದಾಗಿ ತಿಳಿಸಿದ್ದಾರೆ.ಜಿಲ್ಲೆಯಲ್ಲಿ ಉತ್ತಮ ಮಳೆ