ರಾಮನಗರ: ಕೆಆರ್ ಎಸ್ ಜಲಾಶಯದಿಂದ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿನಿತ್ಯ 3500 ಕ್ಯುಸೆಕ್ ನೀರು ಹರಿಸಲು ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ಆದೇಶ ಹೊರಡಿಸಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತಸಂಘ ಜಿಲ್ಲಾ ಘಟಕದ ನೇತೃತ್ವದಲ್ಲಿ ರೈತರು ನಗರದಲ್ಲಿ ಬುಧವಾರ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ರೈತ ಮುಖಂಡ ಕುಮಾರಸ್ವಾಮಿ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮಿಳುನಾಡಿಗೆ ಒಂದಿಂಚು ನೀರನ್ನು ಬಿಡಬಾರದು. ಒಂದು ವೇಳೆ ರಾಜ್ಯಸರ್ಕಾರ ನೀರು ಹರಿಸಿದರೆ ಆಗಸ್ಟ್ 3ರಂದು ಬೆಂಗಳೂರಿನಲ್ಲಿ ಕರ್ನಾಟಕ ಮತ್ತು ತಮಿಳುನಾಡು ಮುಖ್ಯಮಂತ್ರಿಗಳ ಸಭೆ ನಡೆಯಲು ಬಿಡುವುದಿಲ್ಲ. ಅಲ್ಲಿ ಆಗುವ ಅನಾಹುತಕ್ಕೆ ಸರ್ಕಾರವೇ ಹೊಣೆ ಆಗಬೇಕಾಗುತ್ತದೆ ಎಚ್ಚರಿಕೆ ನೀಡಿದರು.
ಈಗಾಗಲೇ ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ದಕ್ಷಿಣ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ ಉಂಟಾಗಿದೆ. ಕೆರೆಗಳು, ಕೊಳವೆ ಬಾವಿಗಳು ಬತ್ತಿದ್ದು, ರೈತರ ಬೆಳೆಗಳು ಒಣಗುತ್ತಿವೆ. ಕೆಆರ್ ಎಸ್ ಜಲಾಶಯದ ಸಂಗ್ರಹವೂ ಅಪಾಯ ಮಟ್ಟದಲ್ಲಿದ್ದು, ಒಂದು ಬೆಳೆಗೂ ನೀರು ಸಾಕಾಗುವುದಿಲ್ಲ. ಇಂತಹ ಸಂದರ್ದಲ್ಲಿ 4 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಡುವಂತೆ ಆದೇಶಿಸಿರುವುದು ರೈತರ ಬದುಕಿನೊಂದಿಗೆ ಚೆಲ್ಲಾಟವಾಡಿದಂತಾಗಿದೆ ಎಂದು ಟೀಕಿಸಿದರು.ತಮಿಳುನಾಡು ಕಾವೇರಿ ನೀರನ್ನು ಕೇವಲ ಕೃಷಿಗಷ್ಟೇ ಅಲ್ಲ ಉದ್ಯಮಕ್ಕೂ ಬಳಸಿಕೊಂಡು ಕರ್ನಾಟಕದ ಪಾಲನ್ನು ಲೂಟಿ ಮಾಡುತ್ತಿದೆ. ಸಿಡಬ್ಲುಆರ್ ಸಿ ಆದೇಶದಲ್ಲಿ ಕರ್ನಾಟಕದ ಕುಡಿಯುವ ನೀರು, ಜಾನುವಾರುಗಲ ನೀರು, ಪರಿಸರದ ಅಗತ್ಯವನ್ನು ಪರಿಗಣಿಸಿಯೇ ಇಲ್ಲ. ನ್ಯಾಯಧೀಕರಣದ ತೀರ್ಪಿನಲ್ಲಿ ಕರ್ನಾಟಕದ ಮೊದಲು ಕುಡಿಯುವ ನೀರು ಎಂಬ ಸ್ಪಷ್ಟ ನಿಬಂಧನೆ ಇದ್ದರೂ ಅದನ್ನು ಗಾಳಿಗೆ ತೂರಲಾಗಿದೆ ಎಂದು ಕುಮಾರಸ್ವಾಮಿ ದೂರಿದರು.
ಕರ್ನಾಟಕ ಸರ್ಕಾರ ತಕ್ಷಣವೇ ಎಲ್ಲಾ ರಾಜಕೀಯ ಪಕ್ಷಗಳ ಸಭೆ ಕರೆದು ಏಕಾಭಿಪ್ರಾಯದ ನಿರ್ಣಯ ಮಾಡಬೇಕು. ಅಗತ್ಯ ಬಿದ್ದರೆ ಕಾವೇರಿ ಉಳಿಸಿ, ಕರ್ನಾಟಕ ಉಳಿಸಿ ಚಳವಳಿ ಮೂಲಕ ಬೃಹತ್ ಹೋರಾಟಕ್ಕೆ ರೈತಸಂಘ ಸಿದ್ಧವಿದೆ. ಸಿಡಬ್ಲ್ಯುಆರ್ ಸಿ ಮತ್ತು ಕೇಂದ್ರ ಸರ್ಕಾರ ಕರ್ನಾಟಕದ ರೈತರ ಕಣ್ಣೀರಿಗೆ ಬೆಲೆ ಕೊಡದಿದ್ದರೆ ಅದರ ಪರಿಣಾಮ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಕೋಟ್ ................
-ಮಲ್ಲಯ್ಯ, ರಾಜ್ಯ ಉಪಾಧ್ಯಕ್ಷರು, ರೈತಸಂಘ.
ಮುಖ್ಯಮಂತ್ರಿಗಳು ಸಚಿವ ಸಂಪುಟ ರಚನೆ ಮಾಡುವ ದಾಹದಲ್ಲಿ ರಾಜ್ಯದ ಜನರ ಕುಡಿಯುವ ನೀಿನ ಸಮಸ್ಯೆಯನ್ನು ಮರೆತಿರುವುದು ಈ ನಾಡಿನ ದುರ್ದೈವ. ಕೂಡಲೇ ಸರ್ಕಾರ ಸಿಡಬ್ಲ್ಯೂಆರ್ ಸಿ ವರದಿಯ ವಿರುದ್ಧ ಮೇಲ್ಮನವಿ ಸಲ್ಲಿಸಬೇಕು.
29ಕೆಆರ್ ಎಂಎನ್ 3.ಜೆಪಿಜಿ