ರೈತರ ಸಾಲ ಮರುಪಾವತಿ, ಬಡ್ಡಿ ವಿನಾಯಿತಿ ನೀಡಿ

KannadaprabhaNewsNetwork |  
Published : Aug 23, 2026, 02:00 AM IST
ಕ್ಯಾಪ್ಷನ22ಕೆಡಿವಿಜಿ31ದಾವಣಗೆರೆಯಲ್ಲಿ ಶ್ರೀರಾಮ್ ಫೈನಾನ್ಸ್ ಸಂಸ್ಥೆ ವತಿಯಿಂದ ಅಯೋಜಿಸಿದ್ದ ವಿದ್ಯಾರ್ಥಿ ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮವನ್ನು  ಸ್ವಾಮೀಜಿ, ಸಚಿವರು ಉದ್ಘಾಟಿಸಿದರು. .......ಕ್ಯಾಪ್ಷನ22ಕೆಡಿವಿಜಿ32ದಾವಣಗೆರೆಯಲ್ಲಿ ಶ್ರೀರಾಮ್ ಫೈನಾನ್ಸ್ ಸಂಸ್ಥೆ ವತಿಯಿಂದ ಅಯೋಜಿಸಿದ್ದ ವಿದ್ಯಾರ್ಥಿ ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮದಲ್ಲಿ ಸಚಿವ ಕೆ.ಎಸ್‌.ಬಸವಂತಪ್ಪ ಮಾತನಾಡಿದರು. | Kannada Prabha

ಸಾರಾಂಶ

Farmers' loan repayment, interest waiver

ಸಚಿವ ಬಸವಂತಪ್ಪ ತಾಕೀತು । ಶ್ರೀರಾಮ್ ಫೈನಾನ್ಸ್‌ನಿಂದ ವಿದ್ಯಾರ್ಥಿ ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮ

-----

ಕನ್ನಡಪ್ರಭ ವಾರ್ತೆ ದಾವಣಗೆರೆ

ಬರಗಾಲದ ಹಿನ್ನೆಲೆಯಲ್ಲಿ ರೈತರು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಶ್ರೀರಾಮ್ ಫೈನಾನ್ಸ್ ಸಂಸ್ಥೆಯು ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡದಿದ್ದರೂ, ಸಾಲ ಮರುಪಾವತಿಯಲ್ಲಿ ಅಥವಾ ಬಡ್ಡಿಯಲ್ಲಿ ಸಾಧ್ಯವಾದಷ್ಟು ವಿನಾಯಿತಿ ನೀಡುವ ಮೂಲಕ ಸಂಕಷ್ಟದಲ್ಲಿರುವ ರೈತರಿಗೆ ನೆರವಾಗಬೇಕು ಎಂದು ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಸಾರಿಗೆ ಸಚಿವ ಕೆ.ಎಸ್. ಬಸವಂತಪ್ಪ ಮನವಿ ಮಾಡಿದರು.

ನಗರದ ಎಕೆಎಸ್ ಹಾಲ್ ನಲ್ಲಿ ಶನಿವಾರ ಶ್ರೀರಾಮ್ ಫೈನಾನ್ಸ್ ಸಂಸ್ಥೆಯ ಸೇವಾ ಸಂಕಲ್ಪ ವತಿಯಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರೋತ್ಸಾಹ ಹಾಗೂ ಮಾರ್ಗದರ್ಶನ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂಸ್ಥೆಯ ಸಿಎಸ್‌ಆರ್ ನಿಧಿಯನ್ನು ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಬಳಸಿಕೊಂಡು ಕೆರೆಗಳ ನಿರ್ಮಾಣ, ಪುನಶ್ಚೇತನ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡರೆ, ಇದರಿಂದ ನೂರಾರು ರೈತ ಕುಟುಂಬಗಳಿಗೆ ಅನುಕೂಲವಾಗುವುದರ ಜೊತೆಗೆ ಅಂತರ್ಜಲ ವೃದ್ಧಿ ಹಾಗೂ ಪರಿಸರ ಸಂರಕ್ಷಣೆಗೆ ಶಾಶ್ವತ ಕೊಡುಗೆ ನೀಡಿದಂತಾಗುತ್ತದೆ ಎಂದು ಅವರು ಸಲಹೆ ನೀಡಿದರು.

ಶ್ರೀರಾಮ್ ಫೈನಾನ್ಸ್ ಸಂಸ್ಥೆಯು ವಾಣಿಜ್ಯ ಚಟುವಟಿಕೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳಿಗೂ ಆದ್ಯತೆ ನೀಡುತ್ತಿರುವುದು ಶ್ಲಾಘನೀಯ. ಬಡ ಮತ್ತು ಕಷ್ಟಪಟ್ಟು ದುಡಿಯುವ ಕುಟುಂಬಗಳ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರತಿಭಾ ಪುರಸ್ಕಾರ ಹಾಗೂ ಪ್ರೋತ್ಸಾಹ ಧನ ನೀಡುತ್ತಿರುವುದು ಅವರ ಶೈಕ್ಷಣಿಕ ಹಾಗೂ ಭವಿಷ್ಯದ ಬದುಕಿಗೆ ಉತ್ತಮ ಉತ್ತೇಜನ ನೀಡಲಿದೆ ಎಂದರು.

ವಿದ್ಯಾರ್ಥಿಗಳು ಶ್ರದ್ಧೆ, ಪರಿಶ್ರಮ ಹಾಗೂ ಆತ್ಮವಿಶ್ವಾಸದಿಂದ ವಿದ್ಯಾಭ್ಯಾಸ ಮಾಡಬೇಕು. ಭವಿಷ್ಯದಲ್ಲಿ ಶ್ರೀ ರಾಮ್ ಫೈನಾನ್ಸ್ ಸೇರಿದಂತೆ ವಿವಿಧ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿ, ಸಂಸ್ಥೆ, ಕುಟುಂಬ ಹಾಗೂ ಸಮಾಜಕ್ಕೆ ಕೀರ್ತಿ ತರುವಂತಾಗಬೇಕು ಎಂದು ಸಚಿವರು ಕರೆ ನೀಡಿದರು.

ಸಾಣೇಹಳ್ಳಿ ಮಠದ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯವಹಿಸಿ ಮಾತನಾಡಿ, ಮಾನವ ಜನ್ಮ ಅತ್ಯಂತ ಅಪರೂಪವಾಗಿದ್ದು, ಅದನ್ನು ಸಾರ್ಥಕಪಡಿಸಿಕೊಳ್ಳಲು ಧರ್ಮ, ಭಕ್ತಿ ಹಾಗೂ ಸನ್ಮಾರ್ಗದ ಹಾದಿಯಲ್ಲಿ ಸಾಗಬೇಕು ಎಂದು ಹೇಳಿದರು.

ಪಂಚಭೂತಗಳಿಂದ ಕೂಡಿರುವ ಮಾನವ ಶರೀರ ಹಾಗೂ ದೊರೆತಿರುವ ಜೀವನದ ಮೌಲ್ಯವನ್ನು ಅರಿತು ಸದ್ಗುಣ ಮತ್ತು ಭಕ್ತಿಯೊಂದಿಗೆ ಬದುಕಬೇಕು ಎಂದರು.

ಇಂದಿನ ಆಧುನಿಕ ಜೀವನದಲ್ಲಿ ಮಾನವ ಹಣ, ಆಸ್ತಿ-ಪಾಸ್ತಿ, ಬಂಗಾರ ಹಾಗೂ ಸಂಪತ್ತಿನ ಹಿಂದೆ ಓಡುತ್ತ ನೆಮ್ಮದಿಯನ್ನು ಕಳೆದುಕೊಳ್ಳುತ್ತಿದ್ದಾನೆ. ಎಷ್ಟೇ ಸಂಪತ್ತು ಗಳಿಸಿದರೂ ಮನಸ್ಸಿನಲ್ಲಿ ಶಾಂತಿ ಇಲ್ಲದಿದ್ದರೆ ಜೀವನ ಸಾರ್ಥಕವಾಗುವುದಿಲ್ಲ. ಭಕ್ತಿ, ಸತ್ಚಿಂತನೆ ಹಾಗೂ ಧಾರ್ಮಿಕ ಮೌಲ್ಯ ಅಳವಡಿಸಿಕೊಂಡಾಗ ಮಾತ್ರ ನಿಜವಾದ ನೆಮ್ಮದಿ ದೊರೆಯುತ್ತದೆ ಎಂದು ತಿಳಿಸಿದರು.

ಮಕ್ಕಳಿಗೆ ಕೇವಲ ಶೈಕ್ಷಣಿಕ ಜ್ಞಾನ ನೀಡುವುದಷ್ಟೇ ಪೋಷಕರ ಕರ್ತವ್ಯವಲ್ಲ. ಉತ್ತಮ ಸಂಸ್ಕಾರ, ಸದ್ಗುಣ, ಮಾನವೀಯತೆ ಹಾಗೂ ಸಮಾಜದ ಬಗ್ಗೆ ಕಾಳಜಿಯನ್ನು ಬೆಳೆಸುವುದು ಅತ್ಯಂತ ಅಗತ್ಯ. ಇಂತಹ ಮಕ್ಕಳೇ ಭವಿಷ್ಯದಲ್ಲಿ ಉತ್ತಮ ಸಮಾಜ ನಿರ್ಮಾಣಕ್ಕೆ ಕಾರಣರಾಗುತ್ತಾರೆ ಎಂದರು.

ಸಮಾರಂಭದಲ್ಲಿ ಸಂಸ್ಥೆಯ ಶ್ರೀಧರ್ ಮಠ ಅಧ್ಯಕ್ಷತೆ ವಹಿಸಿದ್ದರು. ರಾಮಲಿಂಗೇಗೌಡ, ಪಿ.ಜಿ.ವಿನಯ್ ಕುಮಾರ್, ಶಿವಾನಂದ ಎಂ.ಸವದತ್ತಿ, ಕೆ.ಎ. ಅದಿತ್, ಬಸವರಾಜ ಇನ್ನಿತರರಿದ್ದರು.

....ಕೋಟ್‌....

ಮಾನವರು ಅಹಂಕಾರವನ್ನು ತೊರೆದು ಸನ್ಮಾರ್ಗಕ್ಕೆ ಶರಣಾಗಬೇಕು. ತಾನು ಗಳಿಸಿದ ಸಂಪತ್ತಿನಲ್ಲಿ ಒಂದು ಭಾಗವನ್ನು ಸಮಾಜ ಸೇವೆ, ಶಿಕ್ಷಣ ಹಾಗೂ ಬಡವರ ಕಲ್ಯಾಣಕ್ಕೆ ವಿನಿಯೋಗಿಸುವ ಮೂಲಕ ಜೀವನವನ್ನು ಧನ್ಯಗೊಳಿಸಿಕೊಳ್ಳಬೇಕು.

-ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಸಾಣೇಹಳ್ಳಿ

.........

ಫೋಟೊ: 22ಕೆಡಿವಿಜಿ31

ದಾವಣಗೆರೆಯಲ್ಲಿ ಶ್ರೀರಾಮ್ ಫೈನಾನ್ಸ್ ಸಂಸ್ಥೆ ವತಿಯಿಂದ ಆಯೋಜಿಸಿದ್ದ ವಿದ್ಯಾರ್ಥಿ ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮವನ್ನು ಸ್ವಾಮೀಜಿ, ಸಚಿವರು ಉದ್ಘಾಟಿಸಿದರು.

.......

ಫೋಟೊ 22ಕೆಡಿವಿಜಿ32

ದಾವಣಗೆರೆಯಲ್ಲಿ ಶ್ರೀರಾಮ್ ಫೈನಾನ್ಸ್ ಸಂಸ್ಥೆ ವತಿಯಿಂದ ಆಯೋಜಿಸಿದ್ದ ವಿದ್ಯಾರ್ಥಿ ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮದಲ್ಲಿ ಸಚಿವ ಕೆ.ಎಸ್‌.ಬಸವಂತಪ್ಪ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಮಿಳುನಾಡಿಗೆ 24 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಖಂಡಿಸಿ ಪಂಜಿನ ಮೆರವಣಿಗೆ
ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಪ್ರಗತಿಗೆ ಶ್ರಮಿಸಿದ್ದ ಡಿ.ದೇವರಾಜ ಅರಸು: ಡಾ.ಬಿರಾದಾರ