ಇಂದು ಕೃಷ್ಣಾರತಿಗೆ ರೈತರಿಂದ ಸಕಲ ಸಿದ್ಧತೆ

KannadaprabhaNewsNetwork |  
Published : Sep 04, 2026, 03:15 AM IST
ಜಮಖಂಡಿ ತಾಲುಕಿನ ಹಿಪ್ಪರಗಿ ಬಳಿ ಉತ್ತರವಾಹಿಸಿ ಯಾಗಿರುವ ಕೃಷ್ಣೆಯ ಚಿತ್ರ. | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಜಮಖಂಡಿಕೃಷ್ಣ ಜನ್ಮಾಷ್ಟಮಿ ಹಾಗೂ ಮುರುಗೇಶ ನಿರಾಣಿಯವರ ಜನ್ಮದಿನದ ನಿಮಿತ್ತ ತಾಲೂಕಿನ ಹಿಪ್ಪರಗಿ ಗ್ರಾಮದ ಸಂಗಮೇಶ್ವರ ಮಠದ ಹತ್ತಿರ ಉತ್ತರವಾಹಿನಿ ಕೃಷ್ಣೆಗೆ ವಿಶೇಷ ಪೂಜೆ ಸಲ್ಲಿಸಿ ಗಂಗಾರತಿ ಮಾದರಿಯಲ್ಲಿ ಕೃಷ್ಣಾರತಿ ಮಾಡುವ ಕಾರ್ಯಕ್ರಮಕ್ಕೆ ಕೃಷ್ಣಾ ತೀರದ ರೈತರು ಸಿದ್ಧತೆ ಮಾಡಿಕೊಂಡಿದ್ದಾರೆ.

ಕನ್ನಡಪ್ರಭ ವಾರ್ತೆ ಜಮಖಂಡಿ

ಕೃಷ್ಣ ಜನ್ಮಾಷ್ಟಮಿ ಹಾಗೂ ಮುರುಗೇಶ ನಿರಾಣಿಯವರ ಜನ್ಮದಿನದ ನಿಮಿತ್ತ ತಾಲೂಕಿನ ಹಿಪ್ಪರಗಿ ಗ್ರಾಮದ ಸಂಗಮೇಶ್ವರ ಮಠದ ಹತ್ತಿರ ಉತ್ತರವಾಹಿನಿ ಕೃಷ್ಣೆಗೆ ವಿಶೇಷ ಪೂಜೆ ಸಲ್ಲಿಸಿ ಗಂಗಾರತಿ ಮಾದರಿಯಲ್ಲಿ ಕೃಷ್ಣಾರತಿ ಮಾಡುವ ಕಾರ್ಯಕ್ರಮಕ್ಕೆ ಕೃಷ್ಣಾ ತೀರದ ರೈತರು ಸಿದ್ಧತೆ ಮಾಡಿಕೊಂಡಿದ್ದಾರೆ.

3ನೇ ಬಾರಿಗೆ ನಡೆಯುತ್ತಿರುವ ಈ ಬೃಹತ್‌ ಧಾರ್ಮಿಕ ಉತ್ಸವ ಈ ಬಾರಿಯೂ ಮತ್ತೊಂದು ಐತಿಹಾಸಿಕ ಯಶಸ್ಸು ಗಳಿಸುವ ಎಲ್ಲ ಲಕ್ಷಣಗಳು ನಿಚ್ಚಳವಾಗಿವೆ, ಕೃಷ್ಣಾ ಉತ್ಸವ ಹಾಗೂ ಆರತಿ ಸಾನ್ನಿಧ್ಯವನ್ನು ನೊಣವಿನಕೇರಿಯ ವೀರಗಂಗಾಧರ ಅಜ್ಜಯ್ಯ, ಉತ್ತರ ಪ್ರದೇಶದ ದೇವಗಿರಿ ಬಾಬಾ, ಹಿಪ್ಪರಗಿ ಸಂಗಮೇಶ್ವರ ಮಠದ ಪ್ರಭುಜೀ ಬೆನ್ನಾಳ ಮಹಾರಾಜರು, ನಿಡಸೋಸಿಯ ನಿಜಲಿಂಗೇಶ್ವರ ಶ್ರೀಗಳು ವಹಿಸಿಕೊಳ್ಳಲಿದ್ದಾರೆ.

ಆರ್‌ಎಸ್‌ಎಸ್‌ ಉತ್ತರ ಕರ್ನಾಟಕದ ಪ್ರಮುಖ ಅರವಿಂದರಾವ ದೇಶಪಾಂಡೆ, ಗಣಪತಿ ಹೆಗಡೆ, ರಾಘವೇಂದ್ರ ಕಾಗವಾಡ ಹಾಗೂ ಹಿಂದೂ ಜಾಗರಣಾ ವೇದಿಕೆ ಜಗದೀಶ ಕಾರಂತ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ ನಿರಾಣಿ ಹಾಗೂ ಸಾವಯವ ಕೃಷಿ ಹಾಗೂ ಗೋರಕ್ಷಣೆಯಲ್ಲಿ ತೊಡಗಿಕೊಂಡ ಇಬ್ಬರು ಪ್ರಮುಖರು ವೇದಿಕೆ ಮೇಲೆ ಉಪಸ್ಥಿತರಿರಲಿದ್ದಾರೆ.

ಸಾಯಂಕಾಲ 3.30ಕ್ಕೆ ಕೃಷ್ಣಾ ಉತ್ಸವಕ್ಕೆ ಶೋಭಾಯಾತ್ರೆ ಮೂಲಕ ಚಾಲನೆ ದೊರೆಯಲಿದ್ದು, ಸಂಜೆ 7 ಗಂಟೆಗೆ ಭವ್ಯಆರತಿ ನೆರವೇರಲಿದೆ, ಹಿಪ್ಪರಗಿ ಗ್ರಾಮದ ಸಂಗಮೇಶ್ವರ ಮಠದ ಆವರಣದ ಕೃಷ್ಣಾ ನದಿ ತೀರದಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು ಕಾರ್ಯಕ್ರಮಕ್ಕಾಗಿ ಶ್ರೀಶೈಲ ದೇವಸ್ಥಾನದ ಪುರೊಹಿತರೊಂದಿಗೆ ಧರ್ಮರಥ ಆಗಮಿಸಿದ್ದು, ಕೃಷ್ಣಾ ಆರತಿ ಮಾಡಲು ಕಾಶಿಯ ಪಂಡಿತರು ಈಗಾಗಲೇ ಬಂದಿದ್ದಾರೆ, ನದಿಯಲ್ಲಿ ಪೂಜೆ ಹಾಗೂ ಆರತಿ ಮಾಡುವದಕ್ಕೆ ಸುತ್ತಮುತ್ತಲಿನ ಗ್ರಾಮಗಳಲ್ಲಿರುವ ಬೋಟ್‌ಗಳನ್ನು ತರಿಸಲಾಗುವುದು, ಹಿಪ್ಪರಗಿ ಜಲಾಶಯ ಹಾಗೂ ಮಠದ ಆವರಣ ಅಲಂಕೃತ ವಿದ್ಯುತ ದೀಪಗಳಿಂದ ಜನಮನ ಸೆಳೆಯುತ್ತಿದೆ. ವಾದ್ಯಮೇಳಗಳು, ಕಲಾತಂಡಗಳು ಆಗಮಿಸಲಿದ್ದು, ಬೃಹತ್‌ ಶಾಮಿಯಾನ, ಭೋಜನ ವ್ಯವಸ್ಥೆ ಸೇರಿದಂತೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ.

ಶ್ರೀಶೈಲ ಮಲ್ಲಿಕಾರ್ಜುನ ಕಲ್ಯಾಣೋತ್ಸವ, ಶ್ರೀಶೈಲದಿಂದ ಆಗಮಿಸುವ ಧರ್ಮರಥದ ಶೋಭಾ ಯಾತ್ರೆ, ರೈತರಿಗೆ ಗೋಧಾನ, ಜಲಾಶಯಕ್ಕೆ ಬಾಗಿನ ಅರ್ಪಣೆ, ಸಸಿ ನೆಡುವದು, ಸಾವಯವ ಕೃಷಿಗೆ ಉತ್ತೇಜನ, ಹೋಮ ಹವನ ಸೇರಿದಂತೆ ಹಲವಾರು ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮೀತಿಯವರು ತಿಳಿಸಿದ್ದಾರೆ. ಕೃಷ್ಣಾ ಆರತಿ ಈ ಭಾಗದ ಪ್ರತಿ ಮನೆಯ ಹಬ್ಬ. ಜೀವನಕೊಟ್ಟ ಮಹಾಮಾಯಿಗೆ ದೀಪ ಬೆಳುಗುವುದು ನಮ್ಮ ಪಾಲಿಗೆ ದೀಪಾವಳಿ. ಕಳೆದ 2 ವರ್ಷಗಳಿಗಿಂತ ಈ ಬಾರಿ ಹೆಚ್ಚು ಜನ ಸೇರಲಿದ್ದಾರೆ.ಐತಿಹಾಸಿಕ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿ.ಸಂಗಮೇಶ ಆರ್. ನಿರಾಣಿಕಾರ್ಯನಿರ್ವಾಹಕ ನಿರ್ದೇಶಕರು ನಿರಾಣಿ ಫೌಂಡೇಶನ್

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಎಂಗೆ ಇಂದು ಮನವಿ
ಶರಣರ ವಚನಗಳಲ್ಲಿ ಸಮಾಜ ಸುಧಾರಣೆಯ ಶಕ್ತಿ