ರೈತರು ಎಫ್ಐಡಿ ಹೊಂದುವುದು ಕಡ್ಡಾಯ: ಜಿಲ್ಲಾಧಿಕಾರಿ ಜಾನಕಿ

KannadaprabhaNewsNetwork |  
Published : Dec 23, 2023, 01:46 AM IST
(ಫೋಟೋ 22ಬಿಕೆಟಿ1, ಡಿಸಿ ಜಾನಕಿ) | Kannada Prabha

ಸಾರಾಂಶ

ಬಾಗಲಕೋಟೆ ಜಿಲ್ಲೆಯ ಎಲ್ಲ 9 ತಾಲೂಕುಗಳನ್ನು ತೀವ್ರ ಬರಪೀಡಿತ ಪ್ರದೇಶಗಳೆಂದು ಕರ್ನಾಟಕ ರಾಜ್ಯ ಸರ್ಕಾರವು ಘೋಷಿಸಿರುವ ಹಿನ್ನೆಲೆಯಲ್ಲಿ ರೈತರಿಗೆ ಬೆಳೆ ನಷ್ಟ ಪರಿಹಾರ ಹಾಗೂ ಇನ್ಫುಟ್ ಸಬ್ಸಿಡಿಯನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿಯಾದ ಜಮೀನಿನ ವಿಸ್ತೀರ್ಣದ ಆಧಾರದ ಮೇಲೆ ಮತ್ತು ಬೆಳೆ ಸಮೀಕ್ಷೆ ಆಧಾರದ ಮೇಲೆ ವಿತರಿಸಲಾಗುವುದು. ಆದ್ದರಿಂದ ರೈತರು ತಾವು ಹೊಂದಿರುವ ಎಲ್ಲಾ ಸರ್ವೆ ನಂಬರ್‌ಗಳ ಸಾಗುವಳಿ ವಿಸ್ತೀರ್ಣವನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎಂ ಜಾನಕಿ ತಿಳಿಸಿದ್ದಾರೆ .

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಜಿಲ್ಲೆಯ ಎಲ್ಲ 9 ತಾಲೂಕುಗಳನ್ನು ತೀವ್ರ ಬರಪೀಡಿತ ಪ್ರದೇಶಗಳೆಂದು ಕರ್ನಾಟಕ ರಾಜ್ಯ ಸರ್ಕಾರವು ಘೋಷಿಸಿರುವ ಹಿನ್ನೆಲೆಯಲ್ಲಿ ರೈತರಿಗೆ ಬೆಳೆ ನಷ್ಟ ಪರಿಹಾರ ಹಾಗೂ ಇನ್ಫುಟ್ ಸಬ್ಸಿಡಿಯನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿಯಾದ ಜಮೀನಿನ ವಿಸ್ತೀರ್ಣದ ಆಧಾರದ ಮೇಲೆ ಮತ್ತು ಬೆಳೆ ಸಮೀಕ್ಷೆ ಆಧಾರದ ಮೇಲೆ ವಿತರಿಸಲಾಗುವುದು. ಆದ್ದರಿಂದ ರೈತರು ತಾವು ಹೊಂದಿರುವ ಎಲ್ಲಾ ಸರ್ವೆ ನಂಬರ್‌ಗಳ ಸಾಗುವಳಿ ವಿಸ್ತೀರ್ಣವನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎಂ ಜಾನಕಿ ತಿಳಿಸಿದ್ದಾರೆ .

ಬೆಳೆ ನಷ್ಟ ಪರಿಹಾರವನ್ನು ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗುತ್ತದೆ. ರೈತರು ತಮ್ಮ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಗಳಿಗೆ ಆಧಾರ್‌ ಜೋಡಣೆಯೊಂದಿಗೆ ಎನ್‌ಪಿಸಿಐ ಮ್ಯಾಪಿಂಗ್ ಮಾಡಿಸುವುದು ಕೂಡ ಅತ್ಯವಶ್ಯ. ಪ್ರಸ್ತುತ ಜಿಲ್ಲೆಯ ಒಟ್ಟು 5,39,621 ರೈತರ ತಾಕುಗಳ (ಜಮೀನು) ಪೈಕಿ 4,33,851 ರೈತರ ತಾಕುಗಳ ನೋಂದಣಿ ಕಾರ್ಯ ಪೂರ್ಣಗೊಂಡಿದ್ದು, ಇನ್ನೂ 1,05,770 ಭೂ-ಹಿಡುವಳಿಗಳ ನೋಂದಣಿ ಕಾರ್ಯ ಫ್ರೂಟ್ಸ್ ತಂತ್ರಾಂಶದಲ್ಲಿ ಬಾಕಿ ಇದೆ.

ಬಾಗಲಕೋಟೆ ಜಿಲ್ಲೆಯು ಫ್ರೂಟ್ಸ್ ತಂತ್ರಾಂಶದಲ್ಲಿ ರೈತರ ಜಮೀನಿನ ವಿವರಗಳನ್ನು ದಾಖಲಿಸುವಲ್ಲಿ (ಶೇ. 80.40) ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿದೆ. ರೈತರು ಬೆಂಬಲ ಬೆಲೆ ಯೋಜನೆಗಾಗಿ, ಬ್ಯಾಂಕಿನಿಂದ ಬೆಳೆ ಸಾಲ ಪಡೆಯಲು, ಬೆಳೆ ವಿಮೆ ಪರಿಹಾರ ಪಡೆಯಲು, ಬೆಳೆ ಸಮೀಕ್ಷೆ ಮಾಹಿತಿಗಾಗಿ, ಬೆಳೆ ಹಾನಿ ಪರಿಹಾರಕ್ಕಾಗಿ, ಕೃಷಿ ಪರಿಕರ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಫ್ರೂಟ್ಸ್ ತಂತ್ರಾಂಶದಲ್ಲಿ ರೈತರ ಎಲ್ಲಾ ಭೂ-ಹಿಡುವಳಿಗಳ ಪಹಣಿ ಜೋಡಣೆ ಮಾಡುವುದು ಅತ್ಯವಶ್ಯಕವಾಗಿದೆ.

ರೈತರು, ಬೇರೆ ಕಡೆ ನೆಲೆಸಿರುವ ಜಮೀನು ಮಾಲೀಕರು, ಹೊಸದಾಗಿ ಭೂಮಿ ಖರೀದಿ ಮಾಡಿರುವ ರೈತರು ಮತ್ತು ಈಚೆಗೆ ವಾರ್ಸಾ ಹೊಂದಿರುವ ರೈತರು, ಜಮೀನು ದಾಖಲೆಗಳೊಂದಿಗೆ ಆಧಾರ್‌ ಕಾರ್ಡ್‌, ಜಾತಿ ದೃಢೀಕರಣ ಪತ್ರ, ಪೋಟೋ, ಬ್ಯಾಂಕ್ ಪಾಸ್ ಬುಕ್ ಮತ್ತು ಜಮೀನಿನ ಪಹಣಿ ಪತ್ರಿಕೆ ಇತ್ಯಾದಿ ವಿವರಗಳೊಂದಿಗೆ ಹತ್ತಿರದ ಕಂದಾಯ ಇಲಾಖೆ ಗ್ರಾಮ ಆಡಳಿತಾಧಿಕಾರಿಗಳು, ರೈತ ಸಂಪರ್ಕ ಕೇಂದ್ರ, ತೋಟಗಾರಿಕೆ ಇಲಾಖೆ, ರೇಷ್ಮೆ ಇಲಾಖೆ, ಪಶು ಸಂಗೋಪನೆ ಇಲಾಖೆ ಮತ್ತು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗಳಲ್ಲಿ ಅರ್ಜಿ ಸಲ್ಲಿಸಿ ರೈತರ ನೋಂದಣಿ ಸಂಖ್ಯೆ ಪಡೆಯಲು ಹಾಗೂ ಈಗಾಗಲೇ ಎಫ್ಐಡಿ ಹೊಂದಿದ ರೈತರು ತಮ್ಮ ಎಲ್ಲಾ ಭೂ-ಹಿಡುವಳಿಗಳ ಮಾಹಿತಿಯನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸಿಕೊಳ್ಳಲು ರೈತರಲ್ಲಿ ಜಿಲ್ಲಾಧಿಕಾರಿಗಳು ಕೋರಿದ್ದಾರೆ.

---

ಬೆಳೆ ನಷ್ಟ ಪರಿಹಾರವನ್ನು ನೇರ ನಗದು ವರ್ಗಾವಣೆ (ಡಿ.ಬಿ.ಟಿ.) ಮೂಲಕ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗುತ್ತದೆ. ರೈತರು ತಮ್ಮ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಗಳಿಗೆ ಆಧಾರ್‌ ಜೋಡಣೆಯೊಂದಿಗೆ ಎನ್.ಪಿ.ಸಿ.ಐ ಮ್ಯಾಪಿಂಗ್ ಮಾಡಿಸುವುದು ಕೂಡಾ ಅತ್ಯವಶ್ಯ.

-ಕೆ.ಎಂ ಜಾನಕಿ, ಜಿಲ್ಲಾಧಿಕಾರಿ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅತಿವೇಗ ಎಂದರೆ ನಿರ್ಲಕ್ಷ್ಯದ ಚಾಲನೆ ಅಲ್ಲ: ಹೈಕೋರ್ಟ್‌
‘ಜಾಹೀರಾತಲ್ಲಿ ಗಾಂಧೀಜಿ ಬಳಕೆ ಗಾಂಧೀಜಿಯರ ಮೌಲ್ಯಗಳ ಹತ್ಯೆ’