ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ರೈತ ನಾಯಕಿ ಸುನಂದ ಜಯರಾಂ, ರೈತ ಸಂಘದ ಅಧ್ಯಕ್ಷ ಕೆ.ಬೋರಯ್ಯ, ಮಂಡ್ಯ ರಕ್ಷಣಾ ವೇದಿಕೆ ಅಧ್ಯಕ್ಷ ಶಂಕರ್ ಬಾಬು, ಕರವೇ ಅಧ್ಯಕ್ಷ ಚಂದಗಾಲು ಶಂಕರ್, ರೈತ ಸಂಘದ ಕಿರಂಗೂರು ಪಾಪು , ಜಗದೀಶ್ ಸೇರಿದಂತೆ ಇತರರು ಕೆಲ ಕಾಲ ಧರಣಿ ನಡೆಸಿದರು.
ಪಟ್ಟಣದ ತಾಲೂಕು ಕಚೇರಿ ಎದುರು ರೈತ ಸತ್ಯಾಗ್ರಹ ಧರಣಿ ನಡೆಸುತ್ತಿದ್ದರೂ ಸ್ಥಳೀಯ ಶಾಸಕರು ಹಾಗೂ ತಾಲೂಕು ಆಡಳಿತ ಅವರ ಸಮಸ್ಯೆ ಕುರಿತು ಕೇಳದೆ ಇರುವುದು ತಾಲೂಕು ಆಡಳಿತಕ್ಕೆ ಶೋಭೆಯಲ್ಲ ಎಂದು ಕಿಡಿಕಾರಿದರು.ರೈತ ನಾಯಕಿ ಸುನಂದ ಜಯರಾಂ ಮಾತನಾಡಿ,ಸಾರ್ವಜನಿಕ ರಸ್ತೆಯನ್ನು ಒತ್ತುವರಿ ಮಾಡಿಕೊಂಡಿದ್ದರೂ ಅದನ್ನು ಕೇಳದ ಅಧಿಕಾರಿಗಳ ವೈಪಲ್ಯ ಎದ್ದು ತೋರುತ್ತಿದೆ. ಕೂಡಲೇ ತಹಸೀಲ್ದಾರ್ ಅವರು ಸ್ಥಳ ಪರಿಶೀಲಿಸಿ ಸಂಬಂಧಿಸಿದ ಅಧಿಕಾರಿಗಳ ಮೂಲಕ ಸಮಸ್ಯೆ ಬಗೆಹರಿಸಬೇಕು. ಇಲ್ಲದಿದ್ದರೆ ಮುಂದಿನ ಹೋರಾಟವನ್ನು ಉಗ್ರಪಡಿಸುವ ಕಾರ್ಯಕ್ಕೆ ನಿಲ್ಲಬೇಕಾಗುತ್ತದೆ ಎಂದು ಎಚ್ಚರಿಸಿದರು.
ನೀರಾವರಿ, ಕೃಷಿ ಹಾಗೂ ಸಂಬಂಧಿಸಿದ ಇಲಾಖೆ ಅಧಿಕಾರಿಗಳ ಬಳಿ ಚರ್ಚಿಸಿ, ಸಮಸ್ಯೆ ಬಗೆಹರಿಸಲಾಗುವುದು ಎಂದು ತಹಸೀಲ್ದಾರ್ ಧರಣಿ ಕುಳಿತ ರೈತನಿಗೆ ಭರವಸೆ ನೀಡಿದರು.
ಕಳೆದ 20 ವರ್ಷಗಳಿಂದ ಅಧಿಕಾರಿಗಳು ಭರವಸೆ ನೀಡುತ್ತಿದ್ದಾರೆ ವಿನಃ ಸಮಸ್ಯೆ ಬಗೆಹರಿಸಿಲ್ಲ. ಹಾಗಾಗಿ ಶಾಶ್ವತ ಪರಿಹಾರ ಈಡೇರಿಸುವರೆಗೆ ಧರಣಿ ಸತ್ಯಾಗ್ರಹ ಮುಂದುವರಿಸಲಾಗಿದೆ ಎಂದು ರೈತ ಡಿ.ಪ್ರಭಾಕರ್ ತಿಳಿಸಿದರು.