ಕನ್ನಡಪ್ರಭ ವಾರ್ತೆ ಜೇವರ್ಗಿ
ತಾಲೂಕಿನ ಮಿತಿಯೊಳಗೆ ಗ್ರೀನ್ ಫೀಲ್ಡ್ ರಾಷ್ಟ್ರೀಯ ಹೆದ್ದಾರಿ 150ಸಿ ಚನ್ನೈನಿಂದ ಸೂರತ್ಗೆ ಹಾದು ಹೋಗಿರುವುದರಿಂದ ರೈತರ ಜಮೀನಿಗೆ ಸರಿಯಾದ ಬೆಲೆ ನೀಡದೆ, ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂಸ್ವಾಧೀನ ಅಧಿಕಾರಿ ಹಾಗೂ ಯೋಜನಾ ನಿರ್ದೇಶಕರು ಮೋಸ ಮಾಡಿದ್ದಾರೆ. ಅವರ ವಿರುದ್ಧ ಸೂಕ್ತಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಆರೋಪಿಸಿದರು.
ಬೆಳಗ್ಗೆ 11ಕ್ಕೆ ಎತ್ತಿನ ಬಂಡಿಗಳ ಮೂಲಕ ಹಳ್ಳಿಗಳಿಂದ ಬಂದ ರೈತರು ಪಟ್ಟಣದ ಬಸವೇಶ್ವರ ವೃತ್ತದಿಂದ ಬಿಜಾಪುರ ರಸ್ತೆಯಲ್ಲಿರುವ ಪಿಎನ್ಸಿ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.ಪಕ್ಕದ ಯಾದಗಿರಿ ಜಿಲ್ಲೆಯಲ್ಲಿ ರೈತರ ಜಮೀನಿಗೆ 20ರಿಂದ 25 ಲಕ್ಷ ರು. ನೀಡಿದ್ದು, ಜೇವರ್ಗಿ ತಾಲೂಕಿನ ರೈತರ ಜಮೀನಿಗೆ 10ರಿಂದ 15 ಲಕ್ಷ ಪರಿಹಾರ ನೀಡಿ ಮೋಸ ಮಾಡಿದ್ದಾರೆ. ಸೂಕ್ತ ಭೂ ಪರಿಹಾರ ನೀಡಿಲ್ಲ. ಹೀಗಾಗಿ ಜಮೀನು ಕಳೆದು ಕೊಂಡ ರೈತರಿಗೆ ಅನ್ಯಾಯವಾಗಿದೆ. ಈಗಾಗಲೆ ನಡೆಸಲಾಗುತ್ತಿರುವ ರಸ್ತೆ ಕಾಮಗಾರಿ ಸಂಪೂರ್ಣ ಕಳಪೆ ಮಟ್ಟದಾಗಿದ್ದು, ರಸ್ತೆಗೆ ಬಳಿಸಲಾಗುತ್ತಿರುವ ಮುರುಂ ಸಂಪೂರ್ಣ ಮಣ್ಣು ಮಿಶ್ರಿತವಾಗಿದೆ. ಆರಂಭದ ಹಂತದಲ್ಲಿಯೆ ಗುಣಮಟ್ಟ ಕಾಯ್ದುಕೊಳ್ಳಲಾಗದ ಗುತ್ತಿಗೆದಾರರು ಬೃಹತ್ ರಸ್ತೆ ಕಾಮಗಾರಿ ಗುಣಮಟ್ಟ ಇವರಿಂದ ಕಷ್ಟಸಾಧ್ಯ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಕೊಡಲಿ ಪೆಟ್ಟು ಬಿಳುವ ಸಾಧ್ಯತೆಗಳು ಗೋಚರಿಸುತ್ತಿವೆ ಎಂದು ಪ್ರತಿಭಟನಾಕಾರರು ದೂರಿದರು. ನಂತರ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ವಿಶೇಷ ಭೂ ಸ್ವಾಧೀನಾಧಿಕಾರಿ ರಾಮಚಂದ್ರ ಗಡೇದ, ತಹಸೀಲ್ದಾರ ಮಲ್ಲಣ್ಣ ಯಲಗೋಡ ಅವರಿಗೆ ಮನವಿ ಸಲ್ಲಿಸಿದರು. ಅಧಿಕಾರಿಗಳು ಬೇಡಿಕೆ ಈಡೆರಿಸುವ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.
- ಡಾ.ಅಜಯಸಿಂಗ್, ಕೆಕೆಆರ್ಡಿಬಿ ಅಧ್ಯಕ್ಷ