ಲಿಂಕ್‌ ಕಾಮಗಾರಿ ವಿರುದ್ಧ ರೈತರ ಪ್ರತಿಭಟನೆ

KannadaprabhaNewsNetwork |  
Published : Apr 23, 2025, 12:36 AM IST
ಗುಬ್ಬಿತಾಲೂಕು ಕಂದಸಂದ್ರ ವ ವ್ಯಾಪ್ತಿಯಲ್ಲಿ ಬರುವ ಹೇಮಾವತಿ ಲಿಂಕ್  ಕೆನಾಲ್ ಕಾಮಗಾರಿ ಮಾಡಲು ಸಂಬಂಧಪಟ್ಟ ಗುತ್ತಿಗೆದಾರರು ಹಾಗೂ ಇಂಜಿನಿಯರ್ ಗಳು ಪೊಲೀಸ್ ಸಮೇತ ಕಾಮಗಾರಿ ಕೆಲಸ ಮಾಡಲು ಬಂದಿದ್ದ ವಿರುದ್ಧ ರೈತರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿ | Kannada Prabha

ಸಾರಾಂಶ

ತಾಲೂಕು ಕಂದಸಂದ್ರವ ವ್ಯಾಪ್ತಿಯಲ್ಲಿ ಬರುವ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿಗೆ ರೈತರು ಹಾಗೂ ಗ್ರಾಮಸ್ಥರು ತಡೆಯೊಡ್ಡಿದ ಘಟನೆ ನಡೆದಿದೆ.

ಕನ್ನಡಪ್ರಭ ವಾರ್ತೆ ಗುಬ್ಬಿ

ತಾಲೂಕು ಕಂದಸಂದ್ರವ ವ್ಯಾಪ್ತಿಯಲ್ಲಿ ಬರುವ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿಗೆ ರೈತರು ಹಾಗೂ ಗ್ರಾಮಸ್ಥರು ತಡೆಯೊಡ್ಡಿದ ಘಟನೆ ನಡೆದಿದೆ. ಈ ಹಿಂದೆ ರೈತರು ಪ್ರತಿಭಟನೆ ಮಾಡಿದ್ದ ಕಾರಣ ಇಂದು ಸಂಬಂಧಪಟ್ಟ ಗುತ್ತಿಗೆದಾರರು ಹಾಗೂ ಎಂಜಿನಿಯರ್ ಗಳು ಪೊಲೀಸ್ ಸಮೇತ ಕಾಮಗಾರಿ ಕೆಲಸ ಮಾಡಲು ಆಗಮಿಸಿದ್ದರು. ಈ ವೇಳೆ ಸ್ಥಳಕ್ಕೆ ಬಂದ ರೈತರು ಗ್ರಾಮಸ್ಥರು ಕಾಮಗಾರಿ ನಡೆಸದಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು. ಈ ವೇಳೆ ಮಾತನಾಡಿದ ರೈತ ಗಂಗಣ್ಣ ಮಾತನಾಡಿ ಕಾಮಗಾರಿ ಬಗ್ಗೆ ಕೆಲಸ ಮಾಡಬಾರದೆಂದು ಹೋರಾಟ ಮಾಡುತ್ತಾ ಬರುತ್ತಿದ್ದೇವೆ. ಈ ಜಾಗದಲ್ಲಿ ಕೆಲಸ ಮಾಡಬಾರದೆಂದು ತಡೆಯಾಜ್ಞೆ ಇದೆ. ಹೀಗಿರುವಾಗ ಪೊಲೀಸರನ್ನು ಮುಂದೆ ಬಿಟ್ಟು ಕಾಮಗಾರಿ ಕೆಲಸ ಮಾಡುತ್ತಿರುವುದು ಖಂಡನೀಯ. ಜಿಲ್ಲೆಯ ರೈತರಿಗೆ ದೊಡ್ಡ ಅನ್ಯಾಯವಾಗಿದೆ. ಅನ್ನ ನೀಡುವ ರೈತರ ಬಾಯಿಗೆ ಮಣ್ಣು ಹಾಕುತ್ತಿದ್ದಾರೆ ಎಂದು ಕಿಡಿಕಾರಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವ್ಯಕ್ತಿಯ ಅಕ್ರಮ ಬಂಧನದಲ್ಲಿಟ್ಟಿದ್ದಕ್ಕೆ ಸರ್ಕಾರಕ್ಕೆ ದಂಡ!
ಯಶವಂತಪುರ ಮೆಟ್ರೋ ಪ್ರವೇಶದ್ವಾರ ಸ್ಥಳಾಂತರ