ಬಸ್‌ ನಿಲ್ದಾಣದಲ್ಲಿ ರೈತರಿಂದ ಪ್ರತಿಭಟನೆ

KannadaprabhaNewsNetwork |  
Published : May 25, 2025, 01:10 AM IST
ಗುಬ್ಬಿಪಟ್ಟಣದ ಬಸ್ ನಿಲ್ದಾಣದಲ್ಲಿ ರೈತ ಸಂಘದ ವತಿಯಿಂದ ದಿಡೀರ್ ಪ್ರತಿಭಟನೆಯನ್ನು ಮಾಡುವ ಮೂಲಕ ರಸ್ತೆ ತಡೆದು ತಮ್ಮ ಅಕ್ರೋಶವನ್ನು ವ್ಯಕ್ತಪಡಿಸಿದರು. | Kannada Prabha

ಸಾರಾಂಶ

ರೈತ ಸಂಘದ ವತಿಯಿಂದ ಪಟ್ಟಣದ ಬಸ್ ನಿಲ್ದಾಣದಲ್ಲಿ ಪ್ರತಿಭಟನೆಯನ್ನು ಮಾಡುವ ಮೂಲಕ ಹೇಮಾವತಿ ಲಿಂಕ್‌ ಕೆನಾಲ್‌ ಕುರಿತು ತಮ್ಮ ಅಕ್ರೋಶವನ್ನು ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಗುಬ್ಬಿ

ರೈತ ಸಂಘದ ವತಿಯಿಂದ ಪಟ್ಟಣದ ಬಸ್ ನಿಲ್ದಾಣದಲ್ಲಿ ಪ್ರತಿಭಟನೆಯನ್ನು ಮಾಡುವ ಮೂಲಕ ಹೇಮಾವತಿ ಲಿಂಕ್‌ ಕೆನಾಲ್‌ ಕುರಿತು ತಮ್ಮ ಅಕ್ರೋಶವನ್ನು ವ್ಯಕ್ತಪಡಿಸಿದರು. ಗುಬ್ಬಿ ತಾಲೂಕಿನಿಂದ ಯಾವುದೇ ಕಾರಣಕ್ಕೂ ರಾಮನಗರ ಹಾಗೂ ಮಾಗಡಿ ಭಾಗಕ್ಕೆ ಹೇಮಾವತಿ ಲಿಂಕ್ ಕೆನಾಲ್ ಮೂಲಕ ನೀರನ್ನು ಹರಿಸಲು ಸಾಧ್ಯವಿಲ್ಲ.

ಜಿಲ್ಲೆಯ ಜನಪ್ರತಿನಿಧಿಗಳು ಇದರ ಬಗ್ಗೆ ಎಚ್ಚೆತ್ತುಕೊಳ್ಳದೆ ಹೋದರೆ ಮುಂದಿನ ದಿನದಲ್ಲಿ ದೊಡ್ಡ ಪಾಠವನ್ನು ನಾವು ಕಲಿಸಬೇಕಾಗುತ್ತದೆ ಕೇವಲ ಡಿ.ಕೆ .ಶಿವಕುಮಾರ್ ಅವರಿಗೋಸ್ಕರ ಜಿಲ್ಲೆಯ ಸಚಿವರುಗಳು ಶಾಸಕರುಗಳು ಸುಮ್ಮನಾದರೆ ಇಡೀ ಜಿಲ್ಲೆಯೇ ಮುಂದಿನ ದಿನದಲ್ಲಿ ನೀರಾವರಿ ಇಲ್ಲದೆ ಮರುಭೂಮಿಯಾಗಿ ನಿರ್ಮಾಣವಾಗುತ್ತದೆ ಎಂದು ಜಿಲ್ಲಾ ರೈತ ಸಂಘದ ಅಧ್ಯಕ್ಷ ಗೋವಿಂದರಾಜು ತಿಳಿಸಿದರು. ಸೋಮವಾರ ಕರೆದಿರುವಂತಹ ಪೂರ್ವಭಾವಿ ಸಭೆಯಲ್ಲಿ ಎಲ್ಲಾ ಮುಖಂಡರುಗಳು ರಾಜಕೀಯ ಜನಪ್ರತಿನಿಧಿಗಳು ಆಗಮಿಸಿ ಬೃಹತ್ ಹೋರಾಟಕ್ಕೆ ಸಿದ್ಧರಾಗಬೇಕು ಎಂದು ಮನವಿಯನ್ನ ಮಾಡಿದ್ದಾರೆ.

ತಾಲೂಕು ಅಧ್ಯಕ್ಷ ವೆಂಕಟೇಗೌಡ ಮಾತನಾಡಿ ಡಿ.ಕೆ.ಶಿವಕುಮಾರ್ ಅವರ ಅಧಿಕಾರ ಶಾಶ್ವತವಲ್ಲ ಎಂದು ಅವರು ತಿಳಿದುಕೊಳ್ಳುವುದು ಉತ್ತಮ ಜಿಲ್ಲೆಗೆ ಮರಣ ಶಾಸನ ಮಾಡಲು ಹೊರಟಿರುವಂತಹ ಯೋಜನೆಯನ್ನು ಕೈ ಬಿಡದೆ ಹೋದರೆ ದೊಡ್ಡ ಮಟ್ಟದಲ್ಲಿ ಹೋರಾಟ ಮಾಡುವುದಂತೂ ಸತ್ಯ ಎಂದು ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಂಗಡಗಿ, ನಾಲತವಾಡಗೆ ಪಿಯು ಕಾಲೇಜು ಪರಿಶೀಲಿಸಿ ಮಂಜೂರು
ಲಗಾನಿ ಹೆಸರಿನಲ್ಲಿ ಕಬ್ಬು ಬೆಳೆಗಾರರ ಲೂಟಿ