ಕನ್ನಡಪ್ರಭ ವಾರ್ತೆ ಇಂಡಿ
ಪ್ರತಿಭಟನೆ ಮೆರವಣಿಗೆ ನಗರದ ಅಗಸಿ ಹನುಮಾನ ದೇವಸ್ಥಾನದಿಂದ ಹೊರಟು, ಮಹಾವೀರ, ಅಂಬೇಡ್ಕರ್, ಬಸವೇಶ್ವರ ವೃತ್ತದ ಮೂಲಕ ತೆರಳಿ,ಬಸವೇಶ್ವರ ವೃತ್ತದಲ್ಲಿ ರಸ್ತೆ ತಡೆ ನಡೆಸಿದರು.ನಂತರ ಪ್ರತಿಭಟನೆ ಮಿನಿ ವಿಧಾನಸೌಧ ತಲುಪಿತು.
ಈ ಸಂದರ್ಭದಲ್ಲಿ ಮಾತನಾಡಿದ ರೈತ ಯುವ ಮುಖಂಡ ಪ್ರಶಾಂತ ಲಾಳಸಂಗಿ, ಅಶೋಕ ಅಕಲಾದಿ,ಅನೀಲಗೌಡ ಬಿರಾದಾರ, ಕಾಸುಗೌಡ ಬಿರಾದಾರ, ಶೀಲವಂತ ಉಮರಾಣಿ, ಬಾಳು ಮುಳಜಿ, ದೇವೆಂದ್ರ ಕುಂಬಾರ, ಮಾಜಿ ಶಾಸಕ ರವಿಕಾಂತ ಪಾಟೀಲ, ಬಿ.ಡಿ.ಪಾಟೀಲ ಪ್ರತಿ ವರ್ಷ ಗುತ್ತಿ ಬಸವಣ್ಣ ಏತ ನೀರಾವರಿ ಕಾಲುವೆಗೆ ನೀರು ಹರಿಸಲಾಗುತ್ತಿತ್ತು. ಈ ವರ್ಷ ಒಂದು ಸಲವೂ ಈ ಕಾಲುವೆಗೆ ನೀರು ಹರಿಸಿಲ್ಲ. ಇದರಿಂದ ರೈತರಿಗೆ ಹಾಗೂ ಜಾನುವಾರಗಳಿಗೆ ಕುಡಿಯುವ ನೀರಿನ ತೊಂದರೆಯಾಗಿದೆ. ಎರಡು ದಿನದಲ್ಲಿ ಕಾಲುವೆಗೆ ನೀರು ಹರಿಸಬೇಕು. ಎಲ್ಲಾ ಕಾಲುವೆಗಳಿಗೆ ನೀರು ಹರಿಸಿ ಕೇವಲ ಗುತ್ತಿ ಬಸವಣ್ಣ ಏತ ನೀರಾವರಿ ಕಾಲುವೆಗೆ ತೆನ್ನಿಹಳ್ಳಿಯಿಂದ ಕಾಲುವೆಯ ಕೊನೆಯ ಹಂತದವರೆಗೆ ನೀರು ಹರಿಸದೇ ಇರುವುದು ಕೆಲ ರೈತರಿಗೆ ಅನ್ಯಾಯ ಮಾಡಿದಂತಾಗುತ್ತದೆ.ಕೂಡಲೇ ಕಾಲುವೆಗೆ ನೀರು ಹರಿಸಬೇಕು. ಇಂಡಿ ತಾಲೂಕು ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು. ರೈತರ ತಾಳ್ಮೆ ಪರಿಕ್ಷೀಸಬೇಡಿ . ಒಂದು ವೇಳೆ ರೈತರ ತಾಳ್ಮೆ ಪರೀಕ್ಷೀಸಿಲು ಮುಂದಾದರೆ ಸುಮ್ಮನೆ ಇರುವುದಿಲ್ಲ. ಒಂದು ವಾರದವಳಿಗೆ ಟೇಲ್ ಎಂಡ್ ವರಿಗೆ ನೀರು ಹರಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಇಲ್ಲವಾದರೆ ಎಲ್ಲ ರೈತರೊಂದಿಗೆ ಸೇರಿ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಚ್ಚರಿಸಿದರು.
ನಂತರ ಶಿರಸ್ತೇದಾರ ಎಸ್.ಆರ್.ಮುಜಗೊಂಡ ಅವರಿಗೆ ಮನವಿ ಸಲ್ಲಿಸಿದರು. ಸಂತೋಷಗೌಡ ಪಾಟೀಲ, ಮಹೇಶ ಹೂಗಾರ,ಸಾಗರ ಬಿರಾದಾರ,
ನೀರು ಹರಿಸುವ ಭರವೆ ಧರಣಿ ಸ್ಥಗಿತ: ಸುದ್ದಿ ತಿಳಿದು ತಕ್ಷಣ ಸ್ಥಳಕ್ಕಾಗಮಿಸಿದ ಕೃಷ್ಣಾ ಮೇಲ್ದಂಡೆ ಯೋಜನೆಯ ಸಾಹಯಕ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ ಅತನೂರ,ಸಿಪಿಐ ಪ್ರದೀಪ ಭೀಸೆ ರೈತರನ್ನು ಸಮಾಧಾನ ಪಡಿಸಿದರು.