ಕನ್ನಡಪ್ರಭ ವಾರ್ತೆ ಹಾಸನ
ರೈತರನ್ನು ಇತ್ತೀಚಿನ ವರ್ಷಗಳಿಂದ ಬ್ಯಾಂಕ್ನವರು ಒಂದು ಲಕ್ಷಕ್ಕೆ ೨ ಲಕ್ಷ, ೩ಲಕ್ಷಕ್ಕೆ ೬ ಲಕ್ಷ ಬಡ್ಡಿ ಸಮೇತ ಸೇರಿಸಿ ಕೋರ್ಟ್ಗೆ ಅಲೆಸುತ್ತಿದ್ದಾರೆ. ಇದರ ಪರಿಣಾಮವಾಗಿ ರೈತರು ಆತ್ಮಹತ್ಯೆಯ ದಾರಿಯನ್ನು ಹಿಡಿಯುವುದು ಅನಿವಾರ್ಯವಾಗಿದೆ ಎಂದರು. ನಾಡಿನ ರೈತರು ಪಂಪ್ಸೆಟ್ಗಳಿಗೆ ಸರ್ಕಾರದ ನಿಯಮದಂತೆ ೧೦ ಗಂಟೆ ವಿದ್ಯುತ್ ಕೊಡುವುದಾಗಿ ಹೇಳಿ, ಇಂದು ಅನ್ನ ನೀಡುವ ರೈತನಿಗೆ ರಾತ್ರಿ ಎರಡು ಗಂಟೆ, ಬೆಳಗ್ಗೆ ೨ ಗಂಟೆ ವಿದ್ಯುತ್ ಕೊಡುವುದರ ಮೂಲಕ ಆಹಾರ ಬೆಳೆಗಳನ್ನು ಉತ್ಪಾದನೆ ಮಾಡದಂತೆ ತೊಂದರೆ ಕೊಡುತ್ತಿದ್ದಾರೆ. ಇಂತಹ ಸಮಸ್ಯೆಯನ್ನು ವಿದ್ಯುತ ಇಲಾಖೆ ಮಾಡುತ್ತಿದ್ದರೂ ಸಹ ಸಂಬಂಧಪಟ್ಟ ಸರ್ಕಾರವಾಗಲೀ, ಅಧಿಕಾರಿಗಳಾಗಲೀ, ಕೂಡಲೇ ರೈತರ ಪರ ಬಂದು ಹಗಲಿನಲ್ಲಿ ೧೦ ಗಂಟೆ ವಿದ್ಯುತ್ ಕಡ್ಡಾಯವಾಗಿ ಕೊಡುವಂತಾಗಬೇಕು ಎಂದು ಒತ್ತಾಯಿಸಿದರು.
ದಶಕಗಳಿಂದ ಆನೆ ಹಾವಳಿ, ರೈತರ ಮೇಲೆ ನಿರಂತರವಾಗಿ ನಡೆಯುತ್ತಿದ್ದರೂ, ಪ್ರಾಣಹಾನಿಯಾಗುತ್ತಿದ್ದರೂ ಪ್ರಾಣಿ-ಪಕ್ಷಿಗಳ ಬಗ್ಗೆ ಕಟ್ಟುನಿಟ್ಟಿನ ಕಾನೂನು ಇದ್ದರು ರೈತನ ಪ್ರಾಣಕ್ಕೆ ಯಾವುದೇ ಬೆಲೆಯಿಲ್ಲದಂತಾಗಿದೆ. ಆದುದರಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಒಬ್ಬರ ಮೇಲೆ ಒಬ್ಬರು ದೂರಿ ಕೈ ಚೆಲ್ಲಿ ಕುಳಿತಿರುವುದನ್ನು ಬಿಟ್ಟರೆ ಸಮಂಜಸವಾದ ಕ್ರಮ ತೆಗೆದುಕೊಂಡು ರೈತರನ್ನು ಆನೆ ಹಾವಳಿಯಿಂದ ಮುಕ್ತಿಗೊಳಿಸಬೇಕು. ತಾಲೂಕು ಕಚೇರಿಯಲ್ಲಿ ರೆವಿನ್ಯೂ ಅಧಿಕಾರಿಯಾಗಲಿ, ಗ್ರಾಮ ಲೆಕ್ಕಿಗರಾಗಲೀ, ಮಧ್ಯವರ್ತಿಗಳ ಮೂಲಕವೇ ರೈತರ ದಾಖಲೆಗಳನ್ನು ಮಾಡುತ್ತಿದ್ದಾರೆಯೇ ಹೊರತು ನೇರವಾಗಿ ಬಂದ ರೈತರಿಗೆ ತಿಂಗಳುಗಟ್ಟಲೆ ಅಲೆಸುತ್ತಿದ್ದು ಅವರ ದಾಖಲೆಗಳನ್ನು ಕಳೆಯುತ್ತಿದ್ದಾರೆ. ಇದರ ಪರಿಣಾಮವಾಗಿ ರೈತರು ಕೃಷಿ ಕೆಲಸ ಬಿಟ್ಟು ತಾಲೂಕು ಕಚೇರಿಯ ಬಾಗಿಲಲ್ಲಿ ಕಾಯುವಂತಾಗಿದೆ. ಕೃಷಿ ಬೆಳೆಗಳನ್ನು ಬೆಳೆಯುವ ಸಲುವಾಗಿ ಸರ್ಕಾರಿ ಬ್ಯಾಂಕ್ಗಳ ಜೊತೆಗೆ ಖಾಸಗಿ ಫೈನಾನ್ಸ್ಗಳ ಮೊರೆ ಹೋಗಿದ್ದು, ಅಧಿಕ ಬಡ್ಡಿ ದರದಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು. ಸರ್ಕಾರಿ ಆಸ್ಪತ್ರೆಯಲ್ಲಿರುವ ಅವ್ಯವಸ್ಥೆಯ ಬಗ್ಗೆ ಸರಿಪಡಿಸಿಕೊಡುವ ಬಗ್ಗೆ. ಸರ್ಕಾರದಿಂದ ರೋಗಿಗಳಿಗೆ ಉಚಿತ ಔಷಧೋಪಚಾರಗಳಿದ್ದರೂ ಅವರಿಗೆ ಸಿಗದೇ ಖಾಸಗಿ ಆಸ್ಪತ್ರೆ ಅವಲಂಬಿಸುವಂತಾಗಿದೆ ಎಂದು ತಮ್ಮ ಅಳಲು ತೋಡಿಕೊಂಡರು.ಎಲ್ಲಾ ಸಮಸ್ಯೆಗಳನ್ನು ಒಂದು ವಾರದೊಳಗೆ ತಾಲೂಕಿನ ಅಧಿಕಾರಿಗಳಿಗೆ ಸೂಚನೆ ನೀಡಿ ಕ್ರಮ ತೆಗೆದುಕೊಳ್ಳಬೇಕಾಗಿ ಕೋರುತ್ತೇವೆ. ಇಲ್ಲವಾದಲ್ಲಿ ಜಿಲ್ಲಾಧಿಕಾರಿಯ ಕಚೇರಿಯ ಮುಂದೆ ರೈತಪರ ಹೋರಾಟವನ್ನು ಮುಂದುವರಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.