ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಕರವೇ ಜಿಲ್ಲಾಧ್ಯಕ್ಷ ಡಿ.ಎಸ್.ವೇಣು ನೇತೃತ್ವದಲ್ಲಿ ಪೆಟ್ಟಿಗೆ ಅಂಗಡಿ ಅಳವಡಿಸಿದ್ದ ಸ್ಥಳದಲ್ಲಿ ನಿಂತು ತಾಲೂಕು ಆಡಳಿತ ಮತ್ತು ಪುರಸಭೆ ವಿರುದ್ಧ ಘೋಷಣೆ ಕೂಗಿ ಅಕ್ರಮ ಪೆಟ್ಟಿಗೆ ಅಂಗಡಿಯನ್ನು ತೆರವುಗೊಳಿಸುವಂತೆ ಆಗ್ರಹಿಸಿದರು.
ಕರವೇ ಜಿಲ್ಲಾಧ್ಯಕ್ಷ ಡಿ.ಎಸ್.ವೇಣು ಮಾತನಾಡಿ, ಪ್ರತಿನಿತ್ಯ ತಾಲೂಕು ಕಚೇರಿಗೆ ಸಾವಿರಾರು ಜನರು ಬಂದು ಹೋಗುತ್ತಾರೆ. ಇವರಿಗೆ ತೊಂದರೆ ನೀಡಿ ರಸ್ತೆಯಲ್ಲಿ ಅನಧಿಕೃತವಾಗಿ ಪೆಟ್ಟಿಗೆ ತಂದಿಟ್ಟಿದ್ದರು. ತೆರವುಗೊಳಿಸುವಂತೆ ಪ್ರತಿಭಟಿಸಲಾಯಿತು ಎಂದರು.ಪಟ್ಟಣದ ಎಲ್ಲಾ ಪಾದಚಾರಿ ಮಾರ್ಗವನ್ನೂ ಅನಧಿಕೃತ ಪೆಟ್ಟಿಗೆ ಅಂಗಡಿಗಳು ಅತಿಕ್ರಮಿಸಿವೆ. ವರ್ತಕರು ಫುಟ್ ಪಾತ್ ಒತ್ತುವರಿ ಮಾಡಿ ಖಾಯಂ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಪುರಸಭೆ, ತಾಲೂಕು ಆಡಳಿತ ಮತ್ತು ಪೊಲೀಸ್ ಇಲಾಖೆ ಪಾದಚಾರಿಗಳ ಸುಗಮ ಸಂಚಾರಕ್ಕೆ ಯಾವುದೇ ಕ್ರಮ ವಹಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಾಲೂಕಿನಲ್ಲಿ ತಲೆಎತ್ತಿರುವ ಕ್ಲಬ್ ಗಳಿಗೆ ಕಡಿವಾಣ ಹಾಕಬೇಕು. ರಸ್ತೆ ಬದಿಯಲ್ಲಿ ಪೆಟ್ಟಿಗೆ ಅಂಗಡಿಗಳ ತೆರವಿಗೆ ಅವಕಾಶ ನೀಡದಂತೆ ಶಾಸಕ ಎಚ್.ಟಿ.ಮಂಜು ರವರು ಅಧಿಕಾರಿಗಳಿಗೆ ಸೂಚನೆ ನೀಡಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಗೆ ಮಣಿದು ಪೆಟ್ಟಿಗೆ ಅಂಗಡಿ ತೆರವು
ಕರವೇ ಕಾರ್ಯಕರ್ತರು, ರೈತ ಮುಖಂಡರ ಪ್ರತಿಭಟನೆಗೆ ಮಣಿದ ತಾಲೂಕು ಆಡಳಿತ ಜೆಸಿಬಿ ಕಾರ್ಯಾಚರಣೆ ನಡೆಸಿ ಪೆಟ್ಟಿಗೆ ಅಂಗಡಿಯನ್ನು ತೆರವುಗೊಳಿಸಿ ಕಚೇರಿ ಮುಂದಿನ ರಸ್ತೆಯನ್ನು ಸಾರ್ವಜರ್ನಿಕರಿಗೆ ಮುಕ್ತಗೊಳಿಸಿತು.
ಪೆಟ್ಟಿಗೆ ಅಂಗಡಿಯಿಟ್ಟು ಜನ ಸಂಚಾರಕ್ಕೆ ಅಡ್ಡಿಪಡಿಸಿದ್ದರೂ ತಾಲೂಕು ಆಡಳಿತ ಯಾವುದೇ ಕ್ರಮ ವಹಿಸಿರಲಿಲ್ಲ. ಕರವೇ ಕಾರ್ಯರ್ತರು ಪೆಟ್ಟಿಗೆ ಅಂಗಡಿ ತೆರವಿಗೆ ಪ್ರತಿಭಟನೆ ಆರಂಭಿಸಿದ ಕೂಡಲೇ ಅಕ್ರಮ ಪೆಟ್ಟಿಗೆ ಅಂಗಡಿ ತೆರವಿಗೆ ಅಗತ್ಯ ಕ್ರಮವಹಿಸಿದ ತಹಸೀಲ್ದಾರ್ ಡಾ.ಎಸ್.ಯು.ಅಶೋಕ್ ಸ್ಥಳಕೆ ಜೆಸಿಬಿ ತರಿಸಿ ಕಾರ್ಯಾಚರಣೆ ನಡೆಸಿ ಅಂಗಡಿ ತೆರವುಗೊಳಿಸಿದರು.