ಹೊಸಪೇಟೆ: ವಿಜಯನಗರ ಕಾಲದ ಐತಿಹಾಸಿಕ ಬಸವಣ್ಣ ಕಾಲುವೆಯಲ್ಲಿ ಹೂಳು, ಪ್ರಾಸ್ಟಿಕ್, ಕಸ-ಕಡ್ಡಿ ಸೇರಿದಂತೆ ತ್ಯಾಜ್ಯ ವಸ್ತುಗಳು ಹಾಗೂ ಕಾಲುವೆಯಲ್ಲಿ ಗಿಡಗಳು ಬೆಳೆದು ಕಾಲುವೆ ಸಂಪೂರ್ಣ ತುಂಬಿ ಕೊನೆಯ ಭಾಗದ ರೈತರಿಗೆ ನೀರು ದೊರೆಯುತ್ತಿಲ್ಲ. ತಕ್ಷಣವೇ ಕಾಲುವೆ ಸ್ವಚ್ಛಗೊಳಿಸಬೇಕು. ಇಲ್ಲವಾದರೆ ಹಂಪಿ ಉತ್ಸವಕ್ಕೆ ಬರುವ ಜನಪ್ರತಿನಿಧಿಗಳಿಗೆ ಕಪ್ಪುಪಟ್ಟಿ ಪ್ರದರ್ಶನ ಮಾಡಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಸ್ಥಳೀಯ ರೈತರು ಮಲಪನಗುಡಿ ಗ್ರಾಮದ ಸಮೀಪ ಬುಧವಾರ ಪ್ರತಿಭಟನೆ ನಡೆಸಿ ಎಚ್ಚರಿಕೆ ನೀಡಿದರು.
ಸಾಲ ಮಾಡಿ ಬೆಳೆದ ಫಸಲು ಒಣಗಿ ಹೋಗಿ ರೈತರು ನಷ್ಟ ಅನುಭವಿಸುವ ಪರಿಸ್ಥಿತಿ ಬಂದಿದೆ. ತಕ್ಷಣವೇ ಬಸವಣ್ಣ ಕಾಲುವೆ ಸ್ವಚ್ಛಗೊಳಿಸಿ ಕಾಲುವೆಯ ಕೊನೆ ಭಾಗದ ರೈತರಿಗೆ ನೀರು ದೊರೆಯುವಂತೆ ವ್ಯವಸ್ಥೆಗೊಳಿಸಬೇಕು. ಇಲ್ಲವಾದರೆ ಹಂಪಿ ಉತ್ಸವದ ವೇಳೆ ರೈತರು ಕಪ್ಪುಪಟ್ಟಿ ಪ್ರದರ್ಶನ ನೀಡಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಸ್ಥಳೀಯ ರೈತರು ಎಚ್ಚರಿಕೆ ನೀಡಿದ್ದಾರೆ.
ಹೊಸಪೇಟೆ ತಾಲೂಕಿನ ಮಲಪನಗುಡಿ ಗ್ರಾಮದ ಬಳಿ ಬುಧವಾರ ಬಸವಣ್ಣ ಕಾಲುವೆ ಸ್ವಚ್ಛಗೊಳಿಸುವಂತೆ ಒತ್ತಾಯಿಸಿ ರೈತರು ಪ್ರತಿಭಟನೆ ನಡೆಸಿದರು.