ಕನ್ನಡಪ್ರಭ ವಾರ್ತೆ ಮಂಡ್ಯ
ಉದ್ಘಾಟನೆಯನ್ನು ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥನಾರಾಯಣ್ ನೆರವೇರಿಸುವರು. ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ರೈತೋತ್ಸವಕ್ಕೆ ಮುನ್ನುಡಿ ಬರೆಯುವರು. ಕೆಂಪೇಗೌಡ ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಎಂ.ಎನ್.ಚಂದ್ರಶೇಖರ್ ಅಧ್ಯಕ್ಷತೆ ವಹಿಸುವರು. ಜಂಟಿ ಕೃಷಿ ನಿರ್ದೇಶಕರಾಗಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ ವಿ.ಎಸ್.ಅಶೋಕ್ ಅವರಿಗೆ ರೈತರಿಂದ ನಾಗರೀಕ ಸಮ್ಮಾನ ಏರ್ಪಡಿಸಲಾಗಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಮನ್ಮುಲ್ ನಿರ್ದೇಶಕ ಬಿ.ಆರ್.ರಾಮಚಂದ್ರ, ವಿಜಯನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ ಆಯುಕ್ತ ಕೆ.ಆರ್.ಯೋಗಾನಂದ, ಮನ್ಮುಲ್ ನಿರ್ದೇಶಕ ಎಂ.ಎಸ್.ರಘುನಂದನ್, ಉದ್ಯಮಿ ಮುದ್ದನಘಟ್ಟ ಮಹಾಲಿಂಗೇಗೌಡ, ಎಲ್ಲರೊಳಗೊಂದಾಗು ಮಂಕುತಿಮ್ಮ ಟ್ರಸ್ಟ್ ಅಧ್ಯಕ್ಷ ಎಂ.ವಿನಯ್ಕುಮಾರ್, ನ್ಯೂಟ್ರಿಕಾರ್ಪ್ ಪ್ರೈವೇಟ್ ಲಿಮಿಟೆಡ್ನ ಜಿ.ಅಜಯ್ ಭಾಗವಹಿಸುವರು ಎಂದರು.ಕೃಷಿ ವಿಚಾರ ಸಂಕಿರಣದಲ್ಲಿ ಮಂಡ್ಯ ನೆಲದಲ್ಲಿ ರೈತರ ಶಾಲೆಯ ಹೆಜ್ಜೆಗುರುತು ಕುರಿತು ಉಪನ್ಯಾಸಕಿ ಡಾ.ಅನಿತಾ, ಸಾವಯವ ಕೃಷಿಗೆ ಮಣ್ಣಿನ ಗುಣಧರ್ಮ ಮತ್ತು ಸುಧಾರಣೆ ಕುರಿತು ಸಾವಯವ ಕೃಷಿ ಸಲಹೆಗಾರ ಜಿ.ಪಿ.ಮೂರ್ತಿ, ಬೆಳೆಗಳ ಮೌಲ್ಯವರ್ಧನೆ ಮತ್ತು ಯಶಸ್ವಿ ಮಾರುಕಟ್ಟೆ ತಂತ್ರದ ಬಗ್ಗೆ ಆರ್ಗ್ಯಾನಿಕ್ ಸಂಸ್ಥಾಪಕ ಮಧುಚಂದನ್ ಮಾತನಾಡುವರು.
ಭತ್ತದ ಕೃಷಿಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ರೈತ ಶಾಲೆಯ ೩೦೦ ಮಂದಿ ರೈತ ಮಹಿಳೆಯರಿಗೆ ಉಚಿತವಾಗಿ ಸೀರೆ ವಿತರಿಸಲಾಗುವುದು. ನಾಟಿಗೆ ಉತ್ತರ ಭಾರತದ ರಾಜ್ಯಗಳಿಂದ ಬಂದವರು ನಾಟಿ ಕಾರ್ಯದಲ್ಲಿ ತೊಡಗಿದ್ದಾರೆ. ಇದನ್ನು ತಪ್ಪಿಸಲು ಮತ್ತು ಸ್ಥಳೀಯ ಮಹಿಳೆಯರ ಪವಿತ್ರ ನಾಟಿ ಕಾರ್ಯ ಶ್ಲಾಘಿಸುವುದು ಇದರ ಹಿಂದಿನ ಉದ್ದೇಶವಾಗಿದೆ ಎಂದು ತಿಳಿಸಿದರು.