- ರೈತರ ಆತ್ಮಹತ್ಯೆಗೆ ಸರ್ಕಾರಗಳ ಬೆಲೆ ನೀತಿ ಕಾರಣ: ಹುಚ್ಚವ್ವನಹಳ್ಳಿ ಮಂಜುನಾಥ
ಕೃಷಿ ಸಾಲ ಮಾಡಿದ ರೈತರು ಸಾಲಕ್ಕೆ ಸವಾಲು ಹಾಕಬೇಕೇ ಹೊರತು, ಅಂಜಬಾರದು. ಸಾಲಕ್ಕೆ ಸಾವೇ ಉತ್ತರವೂ ಅಲ್ಲ. ಕೇಂದ್ರ, ರಾಜ್ಯ ಸರ್ಕಾರಗಳ ಬೆಲೆ ನೀತಿಯೇ ರೈತರ ಸಾಲಕ್ಕೆ ಪ್ರಮುಖ ಕಾರಣ ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲೆಯ ಕಾರಿಗನೂರು ಕ್ರಾಸ್ನ ಶ್ರೀ ಆಂಜನೇಯ ನಗರ ಮತ್ತು ಹೊನ್ನಮರಡಿ ಗ್ರಾಮಗಳಲ್ಲಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಗ್ರಾಮ ಶಾಖೆಗಳ ಉದ್ಘಾಟನೆ ಹಾಗೂ ನಾಮಫಲಕಗಳ ಅನಾವರಣಗೊಳಿಸಿ ಅವರು ಮಾತನಾಡಿದರು.ಕನಿಷ್ಠ ಬೆಂಬಲ ಬೆಲೆಗೆ ಒತ್ತಾಯಿಸಿ ರೈತರು ಕೇಂದ್ರದ ವಿರುದ್ಧ ನಿರಂತರ ಹೋರಾಟ ಮಾಡುತ್ತಿದ್ದರೂ ಗಮನಹರಿಸುತ್ತಿಲ್ಲ. ಕ್ವಿಂಟಲ್ ಮೆಕ್ಕೆಜೋಳಕ್ಕೆ ₹2225 ವನ್ನು ಕೇಂದ್ರ ಘೋಷಣೆ ಮಾಡಿದೆ. ಆದರೆ, ಮಾರುಕಟ್ಟೆಯಲ್ಲಿ ₹1600ಕ್ಕೆ ಖರೀದಿಸಲಾಗುತ್ತಿದೆ. 50 ಕ್ವಿಂಟಲ್ ಮೆಕ್ಕೆಜೋಳ ಬೆಳೆದ ರೈತರಿಗೆ ₹48ರಿಂದ ₹50 ಸಾವಿರ ನಷ್ಟವಾಗುತ್ತಿದೆ. ಇದು ರೈತರನ್ನು ಹಗಲು ದರೋಡೆ ಮಾಡುವುದಲ್ಲದೇ ಮತ್ತೇನು? ಎಂದರು.
ಹಿರಿಯ ರೈತ ಮುಖಂಡ ತೇಜಸ್ವಿ ವಿ.ಪಟೇಲ್ ಮಾತನಾಡಿ, ಹೊನ್ನಮರಡಿ, ಕಾರಿಗನೂರು ಕ್ರಾಸ್ಗಳ ಭಾಗದಲ್ಲಿ ಅನೇಕ ವರ್ಷಗಳ ನಂತರ ರೈತ ಸಂಘ-ಹಸಿರು ಸೇನೆ ಘಟಕಗಳನ್ನು ಸ್ಥಾಪಿಸಿದ್ದು ಸಂತೋಷದ ಸಂಗತಿ. ದಿನದಿನಕ್ಕೂ ರೈತ ಸಂಘವು ಬೆಳೆಯಬೇಕು. ಹೋರಾಟದ ಮೂಲಕ ರೈತರ ಸಮಸ್ಯೆಗಳನ್ನು ಪರಿಹರಿಸುವ ಜೊತೆಗೆ ರೈತರ ಧ್ವನಿಯಾಗಿ ರೈತ ಸಂಘವು ಕಾರ್ಯನಿರ್ವಹಿಸಲಿ ಎಂದರು.
ಟಾಪ್ ಕೋಟ್
- ಹುಚ್ಚವ್ವನಹಳ್ಳಿ ಮಂಜುನಾಥ, ರಾಜ್ಯಾಧ್ಯಕ್ಷ
ದಾವಣಗೆರೆ ಜಿಲ್ಲೆ ಕಾರಿಗನೂರು ಕ್ರಾಸ್ನ ಶ್ರೀ ಆಂಜನೇಯ ನಗರ ಮತ್ತು ಹೊನ್ನಮರಡಿ ಗ್ರಾಮಗಳಲ್ಲಿ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ ಅವರು ರೈತ ಸಂಘ ಮತ್ತು ಹಸಿರು ಸೇನೆ ಗ್ರಾಮ ಶಾಖೆಗಳ ಉದ್ಘಾಟಿಸಿದರು.