ತಾಲೂಕು ಪಂಚಾಯಿತಿಯಲ್ಲಿ ವಿವಿಧ ಕಲ್ಯಾಣ ಯೋಜನೆಯಡಿ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಣೆ
ತಾಲೂಕು ಪಂಚಾಯಿತಿಯಲ್ಲಿ ಗುರುವಾರ ಆಯೋಜಿಸಿದ್ದ ಸಮಾರಂಭದಲ್ಲಿ ವಿವಿಧ ಕಲ್ಯಾಣ ಯೋಜನೆ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಿಸಿ ಮಾತನಾಡಿ ಶಿಕ್ಷಣ, ಕೇವಲ ಬದುಕಲು ಅಲ್ಲ. ಜೀವನ ನಡೆಸುವುದಕ್ಕೆ ಅಗತ್ಯವಿದೆ. ಸಮ ಸಮಾಜ ನಿರ್ಮಾಣ ಆಗಬೇಕಾದರೆ ಶಿಕ್ಷಣ ಪಡೆಯಬೇಕೆಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಹೇಳಿದ್ದರು ಎಂದ ಅವರು, ಮಕ್ಕಳಿಗೆ ಶಿಕ್ಷಣ ನೀಡಿ ಅವರ ಬದುಕನ್ನು ಹಸನಾಗಿಸಬೇಕು ಎಂದರು.
ದೇವರಾಜ ಅರಸ್ ಅವರು ಈ ದೇಶ ಕಂಡಂತಹ ಧೀಮಂತ ನಾಯಕ. ಅವರ ಹೆಸರಿನಲ್ಲಿ ಸರ್ಕಾರ ಹಿಂದುಳಿದ ವರ್ಗಗಳ ರೈತರ ಬದುಕನ್ನ ಹಸನಗೊಳಿಸಲು, ಸಮಸಮಾಜ ನಿರ್ಮಾಣ ಮಾಡಬೇಕು. ಆರ್ಥಿಕ, ಸಾಮಾಜಿಕವಾಗಿ ಮುನ್ನಲೆಗೆ ಬರಬೇಕು ಎನ್ನುವ ದೃಷ್ಟಿಯಿಂದ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಪ್ರಾರಂಭಿಸಿ ಪ್ರತಿ ವರ್ಷ ಗಂಗಾ ಕಲ್ಯಾಣ ಯೋಜನೆ ಅಡಿ ಬೋರ್ ವೆಲ್ ಕೊರೆಸಲಾಗುತ್ತಿದೆ. ಸ್ವಾವಲಂಬಿ ಸಾರಥಿ ಯೋಜನೆಯಡಿ ವಾಹನಗಳನ್ನು ನೀಡಲಾಗುತ್ತಿದೆ ಎಂದು ಹೇಳಿದರು.ನಮ್ಮ ದೇಶದಲ್ಲಿ ಕೃಷಿಯನ್ನೇ ನಂಬಿರುವ ಶೇ. 70ರಷ್ಟು ಜನರಿದ್ದಾರೆ. ದೇಶದ ರೈತ ಕೃಷಿಕ, ಅವರ ಬದುಕನ್ನು ಹಸನ ಗೊಳಿಸಲು ಸರ್ಕಾರಗಳು ಅವರ ಉದ್ಧಾರಕ್ಕಾಗಿ ಹಲವು ಕಾರ್ಯಕ್ರಮ ಹಮ್ಮಿಕೊಂಡಿವೆ. ನಮ್ಮ ನೆಚ್ಚಿನ ಸಿಎಂ ಸಿದ್ದರಾಮಯ್ಯ ಅವರು ದೇವರಾಜ ಅರಸು ನಂತರ ಮತ್ತೊಮ್ಮೆ ಹಿಂದುಳಿದ ವರ್ಗಗಳ ಬಡವರ ಪ್ರೀತಿಯ ನಾಯಕ ಎಂದು ಹೇಳಿದರು.
ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಸಮಸಮಾಜ ನಿರ್ಮಾಣಕ್ಕಾಗಿ ಬಸವಣ್ಣ, ಇವರಿಬ್ಬರ ವಿಚಾರಧಾರೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಆಡಳಿತದಲ್ಲಿ ಅಳವಡಿಸಿಕೊಂಡಿದ್ದಾರೆ. ಸಮಾಜವಾದದ ಹಿನ್ನೆಲೆಯಿಂದ ಬಂದ ಅವರು ಒಂದು ಜಾತಿ, ಒಂದು ಧರ್ಮಕ್ಕೆ ಅಲ್ಲ, ಬಡವರ ಪರ ಇರುವ ಏಕೈಕ ಮುಖ್ಯಮಂತ್ರಿ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಂಜೇಗೌಡ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ವಿಜಯಕುಮಾರ್, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಟಿ. ರಾಕೇಶ್ ಉಪಸ್ಥಿತರಿದ್ದರು.ಫಲಾನುಭವಿಗಳ ವಿವರ: ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ 49 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದ್ದು ಪ್ರತಿ ಘಟಕದ ವೆಚ್ಚ ₹ 3.24 ಲಕ್ಷ ಗಳಂತೆ ಒಟ್ಟು ₹159.25 ಲಕ್ಷ ಸ್ವಾವಲಂಬಿ ಸಾರಥಿ ಯೋಜನೆಯಡಿ ಆಯ್ಕೆಗೊಂಡ 29 ಜನರಿಗೆ ಮಂಜೂರಾತಿ ಪತ್ರ ವಿತರಣೆ ಮಾಡಲಾಯಿತು.