ರೈತರು ಮಿಶ್ರಬೆಳೆ ಪದ್ಧತಿ ಅನುಸರಿಸಲಿ

KannadaprabhaNewsNetwork |  
Published : Dec 26, 2023, 01:31 AM IST
23ಎಮ್‌ಡಿಎಲ್‌ಜಿ4 | Kannada Prabha

ಸಾರಾಂಶ

ಮೂಡಲಗಿ ತಾಲೂಕಿನ ಗುಜನಟ್ಟಿ ಗ್ರಾಮದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮಾತನಾಡಿ ಪ್ರಧಾನಿ ಮೋದಿಯ ವಿಕಸಿತ ಭಾರತದ ಸಂಕಲ್ಪಕ್ಕೆ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಕನ್ನಡಪ್ರಭ ವಾರ್ತೆ ಮೂಡಲಗಿ

ಪ್ರತಿ ರೈತರು ತಮ್ಮ ತಮ್ಮ ಜಮೀನಗಳಲ್ಲಿನ ಮಣ್ಣು ಪರೀಕ್ಷೆ ಮಾಡಿಸಿ ವಿಜ್ಞಾನಿಗಳ ಸಲಹೆ ಸೂಚನೆ ಪಡೆದು ಮಿಶ್ರಬೆಳೆ ಪದ್ಧತಿ ಅನುಸರಿಸಿ ಆರ್ಥಿಕವಾಗಿ ಸಬಲರಾಗಿ, ಸ್ವಾವಲಂಬಿ ಜೀವನ ನಡೆಸುವ ಮೂಲಕ ಪ್ರಧಾನಿ ಮೋದಿಯ ವಿಕಸಿತ ಭಾರತದ ಸಂಕಲ್ಪಕ್ಕೆ ಕೈಜೋಡಿಸಬೇಕು ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.

ಶನಿವಾರ ತಾಲೂಕಿನ ಗುಜನಟ್ಟಿ ಗ್ರಾಮದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಗ್ರಾಮೀಣ ಭಾಗದ ಜನರ ಬದುಕು ಉಜ್ವಲವಾಗಲೆಂದು ಪ್ರತಿ ಕುಟುಂಬಕ್ಕೆ ತಲಾ 5 ಕೆ.ಜಿ ಉಚಿತ ಅಕ್ಕಿ, ಜಲ ಜೀವನ ಮಷಿನ್ ಯೋಜನೆ ಅಡಿ ಮನೆ ಬಾಗಿಲಗೆ ನೀರು, ಉತ್ತಮ ಆರೋಗ್ಯಕ್ಕಾಗಿ ಆಯುಷ್ಮಾನ ಭಾರತ ಯೋಜನೆಯಡಿ ₹5 ಲಕ್ಷದವರಿಗೆ ಉಚಿತ ಚಿಕಿತ್ಸೆ ನೀಡುತ್ತದೆ. ಉಜ್ವಲ ಗ್ಯಾಸ್ ಯೋಜನೆಯಲ್ಲಿ ಉಚಿತ್ ಗ್ಯಾಸ್ ಮತ್ತು ರಿಯಾಯತಿ ದರದಲ್ಲಿ ಗ್ಯಾಸ್ ವಿತರಣೆ ಮಾಡುತ್ತಿದೆ. ಎಲ್ಲರೂ ಸರ್ಕಾರದ ಯೋಜನೆಗಳನ್ನು ಸದ್ಭಳಿಕೆ ಮಾಡಿಕೊಳ್ಳಬೇಕು ಎಂದರು.

ಮೋದಿ ಅವರು ಬೆಳಗಾವಿ ವಿಮಾನ ನಿಲ್ದಾಣ ಅಭಿವೃದ್ಧಿಗೆ ₹360 ಕೋಟಿ ಬಿಡುಗಡೆ ಮಾಡಿದ್ದಾರೆ. ಹಾಗೂ ಎಲ್ಲ ವರ್ಗದವರು ವಿಮಾನದಲ್ಲಿ ಪ್ರಯಾಣ ಮಾಡಲೆಂದು ವಿಮಾನ ಪ್ರಯಾಣ ದರ ಕಡಿಮೆ ಮಾಡಿದ್ದಾರೆ. ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶದ ಅರ್ಥಿಕತೆ ಸುಧಾರಿಸಿದೆ. ಮುಂದಿನ ಕೆಲವೆ ವರ್ಷಗಳಲ್ಲಿ ಅಮೆರಿಕ , ಚೀನಾಗಳನ್ನು ಹಿಂದಿಕ್ಕಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವಿಕಸಿತ ಭಾರತ ಸಂಕಲ್ಪ ಯಾತ್ರೆ ಪ್ರತಿ ಗ್ರಾಪಂ ಮಟ್ಟದಲ್ಲೂ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ ಎಂದರು. ಈ ಸಮಯದಲ್ಲಿ ಸಂಸದ ಈರಣ್ಣಾ ಕಡಾಡಿ ಅವರು ಫಲಾನುಭವಿಗಳಿಗೆ ಗ್ಯಾಸ್ ಮತ್ತು ಸಾಲದ ಚೇಕ್‌ ವಿತರಿಸಿದರು. ವೇದಿಕೆಯಲ್ಲಿ ಗ್ರಾಪಂ ಅಧ್ಯಕ್ಷ ಲಕ್ಷ್ಮಣ ಕಂಬಳಿ, ಸದಸ್ಯ ಮತ್ತೇಶ ಗುಜನಟ್ಟಿ, ಕೆನರಾ ಬ್ಯಾಂಕ ವ್ಯವಸ್ಥಾಪಕ ಬುರಾನ ಜಮಖಂಡಿ, ವಿವಿಧ ಇಲಾಖೆಯ ಅಧಿಕಾರಿಗಳಾದ ರಮೇಶ ಹಿಪ್ಪರಗಿ, ಬಸು ಬೇವಿನಗಿಡ್ಡದ, ವಿಜಯ ವಡೇನಿ, ಅಭಿನವಕುಮಾರ, ಯಲ್ಲೇಶಕುಮಾರ ಹುಕ್ಕೇರಿ, ಪಿಡಿಒ ರವಿ ಮರೆನ್ನವರ, ಗ್ಯಾಸ ವಿತರಕ ಅನೀಲ ಸುಣಧೋಳಿ, ಪ್ರಮುಖ ಬಸವರಾಜ ಕತ್ತಿ, ಉಮೇಶ ಜಡಗಪ್ಪಗೋಳ, ಗುರು ಗಂಗಣ್ಣವರ, ಶಂಭುಲಿಂಗ ಮುಕ್ಕನ್ನವರ, ಮುತೆಪ್ಪ ಗುಜನಟ್ಟಿ, ಚಿದಾನಂದ ತೆಗ್ಗಿ ಸೇರಿ ರೈತರು, ಮಹಿಳೆಯರು, ಕಾರ್ಯಕರ್ತರು ಇದ್ದರು.ಮೂಡಲಗಿ, ಕಡಾಡಿ, ವಿಕಸಿತ ಭಾರತ,ಮೂಡಲಗಿ, ಕಡಾಡಿ, ವಿಕಸಿತ ಭಾರತ,

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾಯಕತ್ವ ಗೊಂದಲ ಮಧ್ಯೆ 13 ಕೈ ಶಾಸಕರು ವಿದೇಶಕ್ಕೆ :
ವಿದ್ಯಾರ್ಥಿಗಳ ಗೋಳು, ಕೇಳೋರು ಯಾರು?