ಹತ್ತಿ ಬೆಳೆಗೆ ರೈತರು ಒಲವು ತೋರಲಿ: ವಿಜ್ಞಾನಿ ಶಾನವಾಡ

KannadaprabhaNewsNetwork |  
Published : Jul 07, 2026, 03:00 AM IST
(5ಎನ್.ಆರ್.ಡಿ4 ಹತ್ತಿ ತರಬೇಡಿ ಕಾರ್ಯಕ್ರಮದಲ್ಲಿ ಕೃಷಿ ಅಧಿಕಾರಿ ಎಸ್.ಎಫ್. ಬೆಳವಟಿಗೆ ಮಾತನಾಡಿದರು.) | Kannada Prabha

ಸಾರಾಂಶ

ಮಲಪ್ರಭಾ ಅಚ್ಚುಕಟ್ಟು ಪ್ರದೇಶದಲ್ಲಿ 1980ರಲ್ಲಿ ರಾಜ್ಯದಲ್ಲಿ ಅತಿ ಹೆಚ್ಚು ಹತ್ತಿ ಬೆಳೆಯ ಪ್ರದೇಶ ನರಗುಂದವಾಗಿತ್ತು. ನಂತರದ ದಿನಗಳಲ್ಲಿ ಈ ಭಾಗದಲ್ಲಿ ಹತ್ತಿ ಬೆಳೆಯವುದನ್ನು ರೈತರು ಕಡಿಮೆ ಮಾಡಿದರು.

ನರಗುಂದ: ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ನೀರಾವರಿ ಜಮೀನು ಹೊಂದಿರುವ ರೈತರು ಫಲವತ್ತಾದ ಮಣ್ಣಿನಲ್ಲಿ ಹತ್ತಿಯನ್ನು ಹೆಚ್ಚು ಬೆಳೆಯಬೇಕೆಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಬೇಸಾಯಶಾಸ್ತ್ರ ವಿಜ್ಞಾನಿ ಶಾನವಾಡ ತಿಳಿಸಿದರು.

ತಾಲೂಕಿನ ಗುರ್ಲಕಟ್ಟಿ ಗ್ರಾಮದ ಕೃಷಿ ಇಲಾಖೆ ವತಿಯಿಂದ ಹತ್ತಿ ಬೆಳೆಗಳಲ್ಲಿ ಉತ್ಪಾದನೆ ಮತ್ತು ಉತ್ಪಾದಕತೆ ಹೆಚ್ಚಿಸಲು ಹತ್ತಿ ಬೆಳೆಯಲ್ಲಿ ಉತ್ಪಾದಕತೆ ಅಭಿಯಾನ 2026- 27ನೇ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿ, ಮಲಪ್ರಭಾ ಅಚ್ಚುಕಟ್ಟು ಪ್ರದೇಶದಲ್ಲಿ 1980ರಲ್ಲಿ ರಾಜ್ಯದಲ್ಲಿ ಅತಿ ಹೆಚ್ಚು ಹತ್ತಿ ಬೆಳೆಯ ಪ್ರದೇಶ ನರಗುಂದವಾಗಿತ್ತು. ನಂತರದ ದಿನಗಳಲ್ಲಿ ಈ ಭಾಗದಲ್ಲಿ ಹತ್ತಿ ಬೆಳೆಯವುದನ್ನು ರೈತರು ಕಡಿಮೆ ಮಾಡಿದರು ಎಂದರು.

ದೇಶದ ಮಾರುಕಟ್ಟೆಯಲ್ಲಿ ಹತ್ತಿ ಬೆಳೆಗೆ ಉತ್ತಮ ಬೆಲೆಯಿದೆ. ಆದ್ದರಿಂದ ಈ ಭಾಗದ ರೈತರು ಹೆಚ್ಚಿನ ಹತ್ತಿ ಬೆಳೆಯಲು ಮುಂದಾಗಬೇಕೆಂದು ರೈತರಿಗೆ ಕರೆ ನೀಡಿದರು.

ತಾಲೂಕು ಸಹಾಯಕ ಕೃಷಿ ನಿರ್ದೇಶಕ ಎಸ್.ಎಫ್. ಬೆಳವಟಗಿ ಮಾತನಾಡಿ, ಹತ್ತಿ ಬೇಸಾಯ ಕ್ರಮಗಳ ಬಗ್ಗೆ ಮತ್ತು ಹತ್ತಿ ಉತ್ಪಾದಕತೆ ಅಭಿಯಾನದಲ್ಲಿ ಅಳವಡಿಸಿಕೊಂಡಿರುವ ತಾಂತ್ರಿಕತೆಗಳ ಕುರಿತು ರೈತರಿಗೆ ಮಾಹಿತಿ ನೀಡಿದರು.

ಸಸ್ಯಕೀಟ ಶಾಸ್ತ್ರದ ವಿಜ್ಞಾನಿ ಡಾ. ಪೂರ್ಣಿಮಾ ಮಟ್ಟಿ ಅವರು, ಹತ್ತಿ ಬೆಳೆಯಲ್ಲಿ ಸಾಮಾನ್ಯವಾಗಿ ಕಂಡುಬರುವ ಕೀಟಬಾಧೆ, ಲಕ್ಷಣ ಮತ್ತು ನಿಯಂತ್ರಣ ಕ್ರಮಗಳ ಬಗ್ಗೆ ತಿಳಿಸಿದರು. ಸಸ್ಯರೋಗ ಶಾಸ್ತ್ರದ ವಿಜ್ಞಾನಿ ಡಾ. ಪ್ರಭಾವತಿ ಎನ್. ರಾವ್ ಅವರು, ಹತ್ತಿ ಬೆಳೆಗಳಲ್ಲಿ ಕಂಡುಬರುವ ಸಾಮಾನ್ಯ ರೋಗ ಮತ್ತು ಅವುಗಳ ಲಕ್ಷಣ ಮತ್ತು ನಿಯಂತ್ರಿಸುವ ಕ್ರಮಗಳ ಬಗ್ಗೆ ರೈತರಿಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು.

ಕೃಷಿ ವಿಶ್ವವಿದ್ಯಾಲಯದ ಹಿರಿಯ ವಿಜ್ಞಾನಿ ಡಾ. ಎ.ಆರ್. ಕರಿಕಟ್ಟಿ ಮಾತನಾಡಿ, ಹತ್ತಿ ಉತ್ಪಾದನೆ ಮತ್ತು ಉತ್ಪಾದಕತೆಯ ಅವಶ್ಯಕತೆ ಮತ್ತು ಈ ಸಂಬಂಧ ಹತ್ತಿ ಉತ್ಪಾದಕತೆ ಅಭಿಯಾನದ ಮಹತ್ವದ ಕುರಿತು ಮಾಹಿತಿ ನೀಡಿದರು.

ರೋಣದ ಕೃಷಿ ಉಪನಿರ್ದೇಶಕ ಜಯಪ್ರಕಾಶ ಮಾತನಾಡಿ, ಈ ಯೋಜನೆಯ ಅಡಿಯಲ್ಲಿ ಕೃಷಿ ಇಲಾಖೆ ವತಿಯಿಂದ ಗುರ್ಲಕಟ್ಟಿ ಮತ್ತು ಭೈರನಹಟ್ಟಿ ಗ್ರಾಮಗಳನ್ನು ಆಯ್ಕೆ ಮಾಡಲಾಗಿದ್ದು, ಈ ಗ್ರಾಮಗಳಲ್ಲಿ ಹತ್ತಿ ಬೆಳೆಯುವ ರೈತರಿಗೆ ಅಗತ್ಯವಿರುವ ತಾಂತ್ರಿಕ ತರಬೇತಿಗಳನ್ನು ನೀಡಿ ಹತ್ತಿ ಬೆಳೆಯುವ ಉತ್ಪಾದಕತೆಯನ್ನು ಹೆಚ್ಚಿಸುವುದು ಮತ್ತು ಆ ಮೂಲಕ ಉಳಿದ ಗ್ರಾಮಗಳ ರೈತರಿಗೂ ನೆರವಾಗುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದರು.

ಈ ಸಂದರ್ಭದಲ್ಲಿ ಗುರ್ಲಕಟ್ಟಿ ಗ್ರಾಮದ ರೈತರು ಮತ್ತು ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು. ತಾಂತ್ರಿಕ ವ್ಯವಸ್ಥಾಪಕ ಪ್ರವೀಣ ಪಾಟೀಲ ಸ್ವಾಗತಿಸಿದರು. ಕೃ ಷಿ ಇಲಾಖೆಯ ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಶಿವಾಜಿ ಸಾಠೆ ನಿರೂಪಿಸಿ, ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುಂದಾಪ್ರ ಕನ್ನಡ ಉಳಿವಿಗೆ ಸಮೂಹ ಪ್ರಯತ್ನ: ಜಯಪ್ರಕಾಶ ಹೆಗ್ಡೆ
ಉದ್ಯೋಗಾಕಾಂಕ್ಷಿಗಳು ಕೌಶಲ್ಯ ಬೆಳೆಸಿ: ಸುನಿಲ್ ಕುಮಾರ್