ರೈತರು ಡೈರಿಗಳಿಗೆ ಗುಣಮಟ್ಟದ ಹಾಲು ಪೂರೈಸಬೇಕು: ಸಿ.ಶಿವಕುಮಾರ್

KannadaprabhaNewsNetwork |  
Published : Sep 06, 2025, 01:00 AM IST
5ಕೆಎಂಎನ್ ಡಿ17 | Kannada Prabha

ಸಾರಾಂಶ

ಇದಕ್ಕೂ ಮುನ್ನ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಆಗಮಿಸಿ ಡೈರಿ ಮೇಲಂತಸ್ಥಿನ ಕಟ್ಟಡವನ್ನು ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಪಾಂಡವಪುರ

ಹಾಲು ಉತ್ಪಾದಕರ ಸಹಕಾರ ಸಂಘಗಳು ದೇವಸ್ಥಾನಗಳಿದ್ದಂತೆ. ರೈತರು ಡೈರಿಗಳಿಗೆ ಗುಣಮಟ್ಟದ ಹಾಲು ಪೂರೈಕೆ ಮಾಡಬೇಕು ಎಂದು ಮನ್ಮುಲ್ ನಿರ್ದೇಶಕ ಸಿ.ಶಿವಕುಮಾರ್ ಹೇಳಿದರು.

ತಾಲೂಕಿನ ವಡ್ಡರಹಳ್ಳಿ ಡೈರಿಯ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಹಾಗೂ ಸಂಘದ ಮೇಲಂತಸ್ಥಿನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ನಾಮಫಲಕ ಅನಾವರಣಗೊಳಿಸಿ ಮಾತನಾಡಿದರು.

ಸಹಕಾರ ಸಂಘಗಳು ಎಂದರೆ ಎಲ್ಲರೂ ಪರಸ್ಪರ ಕೈಜೋಡಿಸಿ ಸಂಘವನ್ನು ಅಭಿವೃದ್ಧಿಪಡಿಸುವುದು. ಸಂಘಗಳಲ್ಲಿ ಸಣ್ಣಪುಟ್ಟ ವ್ಯತ್ಯಾಸವಾಗಿದ್ದರೆ ಅವುಗಳನ್ನು ಸರಿಪಡಿಸಿಕೊಂಡು ಸಂಘಗಳ ಸರ್ವತೋಮುಖ ಅಭಿವೃದ್ಧಿಗೆ ಎಲ್ಲರೂ ಕೆಲಸ ಮಾಡಬೇಕು ಎಂದು ತಿಳಿಸಿದರು.

ಹೈನುಗಾರಿಕೆ ರೈತನ ಬದುಕಿನ ಅವಿಭಾಜ್ಯ ಅಂಗ. ರೈತರು ಕೃಷಿ, ತೋಟಗಾರಿಕೆ, ರೇಷ್ಮೆ ಕೃಷಿಯ ಜತೆಯಲ್ಲಿ ಹೈನುಗಾರಿಕೆಯಲ್ಲೂ ತೊಡಗಿಸಿಕೊಂಡು ಆರ್ಥಿಕವಾಗಿ ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ಮುಂದೊಂದು ದಿನ ಹೈನುಗಾರಿಕೆ ದೊಡ್ಡ ಉದ್ಯಮವಾಗಿ ಬೆಳೆಯುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಬಣ್ಣಿಸಿದರು.

ಒಕ್ಕೂಟದಿಂದ ರಬ್ಬರ್ ಮ್ಯಾಟ್, ಮೇವು ಕತ್ತರಿಸುವ ಹಾಗೂ ಹಾಲು ಕರೆಯುವ ಯಂತ್ರಗಳು ಬೇಕು ಎಂಬುದಾಗಿ ಬೇಡಿಕೆ ಇಟ್ಟಿದ್ದಾರೆ. ಒಕ್ಕೂಟದಿಂದ 6 ಸಾವಿರ ರಬ್ಬರ್ ಮ್ಯಾಟ್ ಗೆ ಟೆಂಡರ್ ಕರೆಯಲಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಮಟ್ಟದಲ್ಲಿ ಸಂಘಕ್ಕೆ ಸೌಲಭ್ಯ ದೊರಕಿಸಿಕೊಡಲಾಗುವುದು ಎಂದು ಭರವಸೆ ನೀಡಿದರು.

ಡೈರಿ ಅಧ್ಯಕ್ಷ ಟಿ.ಸ್ವಾಮೀಗೌಡ ಮಾತನಾಡಿ, ಡೈರಿಯಲ್ಲಿ 98 ಸಾವಿರ ಬೋನಸ್ ಇದ್ದು, ಶೀಘ್ರ ವಿತರಣೆ ಮಾಡಲಾಗುವುದು, ಸಭಾಂಗಣ ನಿರ್ಮಾಣಕ್ಕೆ ಶಾಸಕರ ಬಳಿ ಅನುದಾನಕ್ಕೆ ಬೇಡಿಕೆ ಇಡಲಾಗಿದ್ದು, 5 ಲಕ್ಷ ರು. ನೀಡುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ಇದಕ್ಕೂ ಮುನ್ನ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಆಗಮಿಸಿ ಡೈರಿ ಮೇಲಂತಸ್ಥಿನ ಕಟ್ಟಡವನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮನ್ಮುಲ್ ಉಪವ್ಯವಸ್ಥಾಪಕ ಆರ್.ಪ್ರಸಾದ್, ಮಾರ್ಗ ವಿಸ್ತರಣಾಧಿಕಾರಿ ಉಷಾ, ಡೈರಿ ಉಪಾಧ್ಯಕ್ಷ ಶಿವಪ್ಪ, ನಿರ್ದೇಶಕರಾದ ವಿ.ಎಸ್.ನಿಂಗೇಗೌಡ, ಬಚ್ಚೇಗೌಡ, ಕಾಳೇಗೌಡ, ಮಂಚಮ್ಮ,ಲತಾ, ಕಾಳಯ್ಯ, ಕಾರ್ಯದರ್ಶಿ ವಿ.ಕೆ.ಗೋವಿಂದ ರಾಜು, ಯ.ಚಿಕ್ಕೆಗೌಡ, ಜವರೇಗೌಡ, ಗವೀಗೌಡ, ಸತ್ಯಪ್ಪ, ಮಾ.ಕಾಳೇಗೌಡ, ದಾಸಶೆಟ್ಟಿ, ಕಾಳೇಗೌಡ, ಮಂಚೇಗೌಡ, ಎನ್.ಸ್ವಾಮಿಗೌಡ, ಕಾಳಯ್ಯ, ಪರೀಕ್ಷ ಸತೀಶ್ ಕುಮಾರ್ ಸೇರಿ ಹಲವರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ