ರೈತರು ಕೃಷಿಗೆ ನ್ಯಾನೋ ಯೂರಿಯಾ ಬಳಸಿ: ಹಿರೇಕಲ್ಮಠ ಶ್ರೀ

KannadaprabhaNewsNetwork |  
Published : Jul 31, 2025, 12:45 AM IST
ಹೊನ್ನಾಳಿ ಫೋಟೋ 30ಎಚ್.ಎಲ್.ಐ1. ತಾಲೂಕಿನ ವಡೆಯರಹತ್ತೂರು ಗ್ರಾಮದಲ್ಲಿ ತಮ್ಮ ಶ್ರೀಮಠಕ್ಕೆ ಸೇರಿದ ಜಮೀನಿನಲ್ಲಿ ಮಂಗಳವಾರ ಮೆಕ್ಕೆಜೋಳ ಬೆಳೆಗೆ ನ್ಯಾನೋ ಯೂರಿಯಾ ದ್ರಾವಣವನ್ನು ಡ್ರೋನ್ ಮೂಲಕ ಸಿಂಪರಣೆ ಮಾಡುತ್ತಿರುವ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ವೀಕ್ಷಿಸಿ  ಹಿರೇಕಲ್ಮಠದ ಡಾ.ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು. ಕೃಷಿ ಅಧಿಕಾರಿಗಳು, ಗ್ರಾಮದ ರೈತರು ಇದ್ದರು.  .  | Kannada Prabha

ಸಾರಾಂಶ

ನಾಡಿನ ರೈತರು, ಬೆಳೆಯಲ್ಲಿ ವೈಜ್ಞಾನಿಕವಾಗಿ ಶಿಫಾರಸ್ಸು ಮಾಡಿದ ರಸಗೊಬ್ಬರಗಳು ಮತ್ತು ಪ್ರಮಾಣವನ್ನು ಪರೀಶಿಲಿಸಿ ವೈಜ್ಙಾನಿಕವಾಗಿ ಬಳಸಬೇಕು ಎಂದು ಹಿರೇಕಲ್ಮಠದ ಒಡೆಯರ್ ಚನ್ನಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.

ಕನ್ನಡಪ್ರಭ ವಾರ್ತೆ ಹೊನ್ನಾಳಿ

ನಾಡಿನ ರೈತರು, ಬೆಳೆಯಲ್ಲಿ ವೈಜ್ಞಾನಿಕವಾಗಿ ಶಿಫಾರಸ್ಸು ಮಾಡಿದ ರಸಗೊಬ್ಬರಗಳು ಮತ್ತು ಪ್ರಮಾಣವನ್ನು ಪರೀಶಿಲಿಸಿ ವೈಜ್ಙಾನಿಕವಾಗಿ ಬಳಸಬೇಕು ಎಂದು ಹಿರೇಕಲ್ಮಠದ ಒಡೆಯರ್ ಚನ್ನಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.

ತಾಲೂಕಿನ ವಡೆಯರಹತ್ತೂರು ಗ್ರಾಮದಲ್ಲಿ ತಮ್ಮ ಶ್ರೀಮಠಕ್ಕೆ ಸೇರಿದ ಜಮೀನಿನಲ್ಲಿ ಮಂಗಳವಾರ ಮೆಕ್ಕೆಜೋಳ ಬೆಳೆಗೆ ನ್ಯಾನೋ ಯೂರಿಯಾ ದ್ರಾವಣವನ್ನು ಡ್ರೋನ್ ಮೂಲಕ ಸಿಂಪಡಣೆ ಕಾರ್ಯ ವೀಕ್ಷಿಸಿ ಮಾತನಾಡಿದರು.

ಈಗಾಗಲೇ ಹರಳು ರೂಪದ ಯೂರಿಯಾ ರಸಗೊಬ್ಬರದ ಪರ್ಯಾಯವಾಗಿ ದ್ರವರೂಪದ ನ್ಯಾನೋ ಯೂರಿಯಾ ಮತ್ತು ನ್ಯಾನೋ ಡಿ.ಎ.ಪಿ ಬಳಕೆ ತಂತ್ರಜ್ಞಾನ ಅಭಿವೃದ್ದಿಪಡಿಸಿದೆ. ಈ ಬಗ್ಗೆ ರೈತರು ಕೃಷಿ ಅಧಿಕಾರಿಗಳಿಂದ ಮಾಹಿತಿ ಪಡೆಯಬೇಕು ಎಂದರು.

ಕೃಷಿ ಇಲಾಖೆ ಉಪ ನಿರ್ದೇಶಕ ರೇ‍‍ವಣಸಿದ್ದನಗೌಡ ಎಚ್.ಕೆ. ಮಾತನಾಡಿ, ಬೆಳೆಗಳಿಗೆ ಹರಳು ರೂಪದ ಯೂರಿಯಾ ರಸಗೊಬ್ಬರ ಪರ್ಯಾಯವಾಗಿ ದ್ರವ ರೂಪದ ನ್ಯಾನೋ ಯೂರಿಯಾ ಸಿಂಪರಣೆ ಮಾಡಲು ರೈತರು ಮುಂದಾಗಬೇಕು ಎಂದು ಸಲಹೆ ನೀಡಿದರು.

ರೈತರು ಹಿಂದಿನಿಂದಲೂ ಬೆಳೆಗಳಿಗೆ ಹರಳು ರೂಪದ ಯೂರಿಯಾ ರಸಗೊಬ್ಬರಗಳನ್ನು ಹಾಕುತ್ತಾ ಬಂದಿದ್ದಾರೆ ಮತ್ತು ಪ್ರಸ್ತುತ ಮೆಲ್ಗೋಬ್ಬರವಾಗಿ ಹರಳು ರೂಪದ ಯೂರಿಯಾವನ್ನು ಬಳಸುತ್ತಿದ್ದಾರೆ, ಇದರಿಂದ ಭೂಮಿ ಫಲವತ್ತತೆ ಸಂಪೂರ್ಣ ನಾಶವಾಗುತ್ತಿದೆ, ಭವಿಶ್ಯದಲ್ಲಿ ಹೀಗೆ ರಸಗೊಬ್ಬರವನ್ನು ಹೆಚ್ಚಾಗಿ ಬಳಸಿದರೆ ಫಲ ನೀಡುವ ಭೂಮಿ ಬರಡಾಗಬಹುದು, ಪರಿಸರದ ಮೇಲೆ ಪರಿಣಾಮ ಹಾಗೂ ಮಾನವನ ಆರೋಗ್ಯಕ್ಕೆ ತುಂಬಾ ಹಾನಿಕಾರ ಎಂದು ಹೇಳಿದರು.

ಸಹಾಯಕ ಕೃಷಿ ನಿರ್ದೇಶಕ ಬಿ.ಎನ್.ವಿಶ್ವನಾಥ ಮಾತನಾಡಿ, ಈ ಬಾರಿ ಹೊನ್ನಾಳಿ ಮತ್ತು ನ್ಯಾಮತಿ ತಾಲೂಕಿನಲ್ಲಿ ವಾಡಿಕೆಗಿಂತ ಮಳೆ ಹೆಚ್ಚು ಪ್ರಮಾಣದಲ್ಲಿ ಆಗಿದೆ. ಕೃಷಿ ಚಟುವಟಿಕೆಗಳಾದ ಯೂರಿಯಾ ಮೇಲುಗೊಬ್ಬರ ನೀಡುವುದು, ಎಡೆಕುಂಟೆ ಹೊಡೆಯುವುದು, ಸಸ್ಯ ಸಂರಕ್ಷಣಾ ಕ್ರಮಗಳನ್ನು ಕೈಗೊಳ್ಳಲು ತೊಂದರೆ ಉಂಟಾಗಿದೆ, ಯೂರಿಯಾ ರಸಗೊಬ್ಬರವನ್ನು ಸರಿಯಾಗಿ ಮಣ್ಣಿನಲ್ಲಿ ಸೇರಿಸಲು ಸಾಧ್ಯವಿರದ ಕಾರಣ ಬೆಳೆಗಳು ಶೀತದಿಂದ ಬೇರುಗಳ ಬೆಳೆವಣಿಗೆ ಕುಂಠಿತವಾಗಿ ಗಿಡಗಳ ಬೆಳೆವಣಿಗೆಯೂ ಸಹ ಕುಂಠಿತವಾಗಿ ಇಳುವರಿ ಮೇಲೆ ಹೆಚ್ಚಿನ ಪ್ರಭಾವ ಬೀರಲಿದೆ ಎಂದರು.

ಆದ್ದರಿಂದ ರೈತರು ಯೂರಿಯಾ ರಸಗೊಬ್ಬರವನ್ನು ಕೊಡುವ ಬದಲಾಗಿ ನ್ಯಾನೋ ಯೂರಿಯಾ (ಶೇ.20 ಸಾರಜನಕ) –ಅಥವಾ ನ್ಯಾನೋ ಡಿ. ಎ. ಪಿ. (ಶೇ.8 ಸಾರಜನಕ ಮತ್ತು ಶೇ. 16 ರಂಜಕ) ದ್ರವ ರೂಪದ ಸಾರಜನಕವನ್ನು ಪ್ರತಿ ಲೀಟರ್ ನೀರಿಗೆ 3ರಿಂದ 5 ಮಿಲಿ ಬೆರೆಸಿ ಸಿಂಪಡಿಸಲು ಕೋರಿದೆ. ಈ ದ್ರವ ಗೊಬ್ಬರವನ್ನು 30-35 ದಿನ ಮೊದಲನೇ ಹಂತ ಮತ್ತು 50-60 ದಿನಗಳಲ್ಲಿ ಸಿಂಪಡಿಸುವುದರಿಂದ ಪೋಷಕಾಂಶಗಳ ಸದ್ಬಳಕೆಯಾಗಿ ಉತ್ತಮ ಬೆಳೆ ಬೆಳೆವಣಿಗೆ ಮತ್ತು ಉತ್ತಮ ಇಳುವರಿ ಸಾಧ್ಯವಾಗುತ್ತದೆ ಎಂದರು.

ಕೃಷಿ ಅಧಿಕಾರಿ ಅತೀಕ್ ಉಲ್ಲಾ, ಕೋರಮಂಡಲ್ ಇಂಟರ್‌ನ್ಯಾಷನಲ್ ಪ್ರೈ.ಲಿ. (ಗ್ರೋಮೋರ್) ಕಂಪನಿಯ ಅಧಿಕಾರಿ ಸತೀಶ್ ಡ್ರೋನ್ ಮೂಲಕ ನ್ಯಾನೋ ಯೂರಿಯಾ, ನ್ಯಾನೋ ಡಿಎಪಿ ಸಿಂಪಡಣೆ ಹೇಗೆ ಮಾಡಬೇಕು ಎಂಬುವುದರ ಬಗ್ಗೆ ಮಾಹಿತಿ ನೀಡಿ ಪ್ರಾತ್ಯಕ್ಷಿಕೆ ನಡೆಸಿದರು.

ಕೃಷಿ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ , ಕೋರಮಂಡಲ್ ಕಂಪನಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಮತ್ತು ವಡೆಯರಹತ್ತೂರು ಗ್ರಾಮದ ರೈತರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಗವಂತನ ಶಕ್ತಿ ಪಡೆದವರಿಂದ ಡಿಕೆಶಿ ಸಿಎಂ ಆಗುವ ದಿನಾಂಕ ನಿಗದಿ : ಇಕ್ಬಾಲ್
ಜನ ನಂಗೆ ಇನ್ನೊಂದು ಅವಕಾಶ ಕೊಡಲಿ : ಎಚ್ಡಿಕೆ