ರೈತರು ಆಧುನೀಕರಣಕ್ಕೆ ಒಗ್ಗಬೇಕು: ದೇಶೀಕೇಂದ್ರ ಸ್ವಾಮೀಜಿ

KannadaprabhaNewsNetwork |  
Published : Mar 30, 2026, 12:30 AM IST
29ಸಿಎಚ್‌ಎನ್‌52ಯಳಂದೂರು ತಾಲೂಕಿನ ಗೌಡಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದ ರೈತರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮುಡುಕನಪುರ ಹಲವಾರ ಮಠದ ಷಡಕ್ಷರಿ ದೇಶಿಕೇಂದ್ರ ಮಹಾಸ್ವಾಮಿಜಿ ಮಾತನಾಡಿದರು. | Kannada Prabha

ಸಾರಾಂಶ

ವ್ಯವಸಾಯದಲ್ಲಿ ನಷ್ಟವನ್ನು ಅನುಭವಿಸುವರ ಸಂಖ್ಯೆಯೇ ಅಧಿಕವಾಗಿದೆ. ಏಕೆಂದರೆ ರೈತರು ತಾವು ಬೆಳೆದ ಬೆಳೆಗೆ ಸೂಕ್ತ ಮಾರುಕಟ್ಟೆಯನ್ನು ಮಾಡುವ ಕಲೆಯನ್ನು ಕರಗತ ಮಾಡಿಕೊಂಡು ರೈತ ಉದ್ಯಮಿಯ ರೂಪ ಪಡೆಯಬೇಕು. ವ್ಯವಸಾಯ ಉದ್ಯಮವಾಗಬೇಕು ಎಂದು ಮುಡುಕನಪುರ ಹಲವಾರ ಮಠದ ಷಡಕ್ಷರಿ ದೇಶಿಕೇಂದ್ರ ಮಹಾ ಸ್ವಾಮೀಜಿ ಕರೆ ನೀಡಿದರು.

- ಸಾಂಪ್ರದಾಯಿಕ ಪದ್ಧತಿ ಜೊತೆಗೆ ಆಧುನಿಕ ಅಗತ್ಯತೆಗಳಿಗೆ ಸರಿಹೊಂದಿದರೆ ಲಾಭ ಹೆಚ್ಚು: ಸಲಹೆ

---

ಕನ್ನಡಪ್ರಭ ವಾರ್ತೆ ಯಳಂದೂರುವ್ಯವಸಾಯದಲ್ಲಿ ನಷ್ಟವನ್ನು ಅನುಭವಿಸುವರ ಸಂಖ್ಯೆಯೇ ಅಧಿಕವಾಗಿದೆ. ಏಕೆಂದರೆ ರೈತರು ತಾವು ಬೆಳೆದ ಬೆಳೆಗೆ ಸೂಕ್ತ ಮಾರುಕಟ್ಟೆಯನ್ನು ಮಾಡುವ ಕಲೆಯನ್ನು ಕರಗತ ಮಾಡಿಕೊಂಡು ರೈತ ಉದ್ಯಮಿಯ ರೂಪ ಪಡೆಯಬೇಕು. ವ್ಯವಸಾಯ ಉದ್ಯಮವಾಗಬೇಕು ಎಂದು ಮುಡುಕನಪುರ ಹಲವಾರ ಮಠದ ಷಡಕ್ಷರಿ ದೇಶಿಕೇಂದ್ರ ಮಹಾ ಸ್ವಾಮೀಜಿ ಕರೆ ನೀಡಿದರು.

ಭಾನುವಾರ ತಾಲೂಕಿನ ಗೌಡಹಳ್ಳಿ ಗ್ರಾಮ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಹಮ್ಮಿಕೊಂಡಿದ್ದ ರೈತರೊಂದಿಗೆ ರೈತ ಮುಖಂಡರು, ಮಣ್ಣಿನ ಮಕ್ಕಳ ಸಬಲೀಕರಣ, ಪ್ರಬುದ್ಧ ಪ್ರಜಾಸ್ನೇಜಿ, ಪ್ರಜ್ಞಾವಂತಿಕೆ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು.

ರೈತರು ತಮ್ಮ ಬೆಳೆಗೆ ಮಾರುಕಟ್ಟೆಯನ್ನು ಸೃಷ್ಟಿಸಿಕೊಳ್ಳಬೇಕು. ಭತ್ತದ ಬದಲು ಅಕ್ಕಿಯಾಗಿ ಮಾಡಿ ಇದನ್ನು ಪ್ಯಾಕ್ ಮಾಡಿ ಮಾರಬೇಕು, ಎಳನೀರನ್ನು ಪ್ಯಾಕೆಟ್‌ನಲ್ಲಿ ಮಾರಾಟ ಮಾಡುವುದು, ತಮ್ಮ ಉತ್ಪನ್ನಗಳನ್ನು ಸಂಸ್ಕರಿಸಿ ಮಾರುವ ಕಲೆಯನ್ನು ಕಲೆಯನ್ನು ಕಲಿಯಬೇಕು. ಆಗ ಇವರಿಗೆ ಹೆಚ್ಚು ಲಾಭ ದೊರೆಯುತ್ತದೆ. ಸಹಕಾರ ಸಂಘಗಳಲ್ಲಿ ರೈತರಿಗೆ ಹೆಚ್ಚು ಅನುಕೂಲವಾಗುವ ಕಾರ್ಯಕ್ರಮಗಳನ್ನು ಸರ್ಕಾರಗಳು ಮಾಡುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.

ಶಾಸಕ ಎ.ಆರ್‌. ಕೃಷ್ಣಮೂರ್ತಿ ಮಾತನಾಡಿ, ರೈತ ಈ ದೇಶದ ಜೀವನಾಡಿ. ಸರ್ಕಾರ ರೈತಪರ ಅನೇಕ ಯೋಜನೆಗಳನ್ನು ತಂದಿದೆ. ನನ್ನ ಕ್ಷೇತ್ರ ವ್ಯಾಪ್ತಿಯಲ್ಲಿ ಕಣ್ಣೇಗಾಲ ಪಿಕಪ್‌ನಿಂದ 19 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಮೊದಲಿಗೆ 6 ಕೆರೆಗಳನ್ನು ಆಯ್ಕೆ ಮಾಡಲಾಗಿತ್ತು. ಈ ಕಾಮಗಾರಿ 70 ಕೋಟಿ ರು. ವೆಚ್ಚದಲ್ಲಿ ನಡೆಯಲಿದೆ. ಇದರೊಂದಿಗೆ ಗುಂಡಾಲ್ ಸರಣಿ ಕಾಲುವೆ ದುರಸ್ತಿ ಕೆರೆಗಳ ನೀರು ತುಂಬಿಸುವ ಯೋಜನೆಗೂ 60 ಕೋಟಿ ರು. ಬಿಡುಗಡೆಯಾಗಿದೆ ಎಂದು ಮಾಹಿತಿ ನೀಡಿದರು. ಸಂತೆಮರಹಳ್ಳಿಯಲ್ಲಿ ಎಳೆನೀರು ಮಾರುಕಟ್ಟೆಗೆ 5 ಕೋಟಿ ರು. ಬಿಡುಗಡೆಯಾಗಿದ್ದು ರೈತರು ತಾವು ಬೆಳೆದ ಎಳೆನೀರನ್ನು ಮಧ್ಯವರ್ತಿಗಳ ಹಾವಳಿ ಇಲ್ಲದೆ ನೇರವಾಗಿ ಮಾರಾಬಹುದು. ಸಾಕಾಣಿಕೆ ವೆಚ್ಚವೂ ಕಡಿಮೆಯಾಗುವುದರಿಂದ ಹೆಚ್ಚು ಲಾಭಗಳಿಸಬಹುದು. ಗೌಡಹಳ್ಳಿಯೂ ಸೇರಿದಂತೆ 2 ಕಡೆ ಚೆಕ್ ಡ್ಯಾಂಗಳ ನಿರ್ಮಾಣಕ್ಕೆ 3 ಕೋಟಿ ರು. ಹಣ ಬಿಡುಗಡೆಯಾಗಿದ್ದು, ಈ ಭಾಗದ ರೈತರಿಗೆ ಹೆಚ್ಚು ಅನುಕೂಲವಾಗಲಿದೆ ಇಂತಹ ಕಾರ್ಯಕ್ರಮವನ್ನು ಆಯೋಜನೆ ಮಾಡಿರುವ ರೈತ ಸಂಘದ ಜಿಲ್ಲಾ ಅಧ್ಯಕ್ಷ ಗೌಡಹಳ್ಳಿ ಎಸ್. ಸೋಮಣ್ಣರವರು ಅಭಿನಂದನಾರ್ಹರು ಎಂದರು.

ರೈತ ಸಂಘದ ಜಿಲ್ಲಾಧ್ಯಕ್ಷ ಗೌಡಹಳ್ಳಿ ಎಸ್. ಸೋಮಣ್ಣ ಮಾತನಾಡಿ, ವಾಟಳು ಮಠದ ಸಿದ್ಧಲಿಂಗ ಶಿವಾಚಾರ್ಯಸ್ವಾಮೀಜಿ, ಪಂಚಗವಿ ಮಠದ ಶ್ರೀಕಂಠಸ್ವಾಮಿ, ಗೌಡಹಳ್ಳಿ ವಿರಕ್ತಮಠದ ಮರಿ ತೋಂಟದಾರ್ಯ ಸ್ವಾಮೀಜಿ ಸಮಾಜ ಸೇವಕ ನಿಶಾಂತ್, ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಕಾರ್ಯದರ್ಶಿ ವಿದ್ಯಾಸಾಗರ್‌, ಕೃಷಿಕ ಸಮಾಜದ ಅಧ್ಯಕ್ಷ ಗೌಡಹಳ್ಳಿ ರವಿ, ವೈ.ಸಿ. ಪ್ರಕಾಶ್, ಕುಮಾರಬಾವಿ, ವೆಂಕಟೇಶ್, ಪ್ರಭುಸ್ವಾಮಿ, ನಾಗರಾಜು, ಚಿಕ್ಕರಾಜು, ಬಸವರಾಜು, ಮಲ್ಲಿಕಾರ್ಜುನ ಸ್ವಾಮಿ, ಸುಂದ್ರಪ್ಪ, ಶಾಂತಮೂರ್ತಿ ಸೇರಿದಂತೆ ಅನೇಕರು ಇದ್ದರು.

---

29ಸಿಎಚ್‌ಎನ್‌52

ಯಳಂದೂರು ತಾಲೂಕಿನ ಗೌಡಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದ ರೈತರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮುಡುಕನಪುರ ಹಲವಾರ ಮಠದ ಷಡಕ್ಷರಿ ದೇಶಿಕೇಂದ್ರ ಮಹಾಸ್ವಾಮೀಜಿ ಮಾತನಾಡಿದರು.

---

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾಸನದಲ್ಲಿ ಶ್ರೀರಾಮನವಮಿ ವೈಭವ ಸಾಮೂಹಿಕ ಯಜ್ಞ
ಕಡೂರಿನಲ್ಲಿ 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ಧತೆ: ಭಂಡಾರಿ ಶ್ರೀನಿವಾಸ್